AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ರೇಡ್​: 100 ಜನರನ್ನು ವಶಕ್ಕೆ ಪಡೆದು ವಿಚಾರಣೆ

ಎಸಿಪಿ ಎಂದು ಹೇಳಿಕೊಂಡು 20 ಲಕ್ಷ ರೂ. ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನವೀನ್ ಎಂಬಾತ ಶಂಕರಪ್ಪ ಎನ್ನುವವರಿಗೆ ವಂಚನೆ ಮಾಡಿದ್ದಾನೆ.

ಬೆಂಗಳೂರಿನ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ರೇಡ್​: 100 ಜನರನ್ನು ವಶಕ್ಕೆ ಪಡೆದು ವಿಚಾರಣೆ
ರಾಯಲ್ ಅರ್ಚಿಡ್ ಹೋಟೆಲ್
TV9 Web
| Edited By: |

Updated on: Sep 04, 2022 | 9:04 AM

Share

ಬೆಂಗಳೂರು: ನಗರದ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ರೇಡ್ ಮಾಡಿದೆ. ಅವಧಿ ಮೀರಿ ಪಾರ್ಟಿ ನಡೆಸುತ್ತಿದ್ದ ಹಿನ್ನೆಲೆ ಸಿಸಿಬಿ ರೇಡ್ ಮಾಡಿದೆ. ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯಲ್ಲಿರುವ ಹೋಟೆಲ್​ನಲ್ಲಿ ನಸುಕಿನ ಜಾವ 3 ಗಂಟೆವರೆಗೂ ಪಾರ್ಟಿ ನಡೆಯುತ್ತಿತ್ತು. ಎಸಿಪಿ ರೀನಾ, ಇನ್ಸ್​ಪೆಕ್ಟರ್​ ಗೋವಿಂದರಾಜು ತಂಡದಿಂದ ದಾಳಿ ಮಾಡಿದ್ದು, ಪಾರ್ಟಿಯಲ್ಲಿದ್ದ 100 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ದಾಳಿ ವೇಳೆ ಪಾರ್ಟಿಯಲ್ಲಿ ಬಳಸುತ್ತಿದ್ದ ನಗದು, ಮದ್ಯ ಜಪ್ತಿ ಮಾಡಲಾಗಿದೆ. ಕಳೆದ ಎರಡು ವೀಕೆಂಡ್​ನಿಂದ ಒವರ್ ಟೈಮ್ ಪಾರ್ಟಿ ನಡೆಯುತ್ತಿದೆ ಎಂದು ಸಿಸಿಬಿಗೆ ಮಾಹಿತಿ ನೀಡಿದ್ದು, ಮಾಹಿತಿ ಅನ್ವಯ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಗಳಿಂದ ದಾಳಿ ಮಾಡಿದೆ. ಹೋಟೆಲ್ ಹಾಗೂ ಪಾರ್ಟಿ ಆಯೋಜಕರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಎಸಿಪಿ ಎಂದು ಹೇಳಿಕೊಂಡು 20 ಲಕ್ಷ ರೂ. ವಂಚನೆ:

ಬೆಂಗಳೂರು: ಎಸಿಪಿ ಎಂದು ಹೇಳಿಕೊಂಡು 20 ಲಕ್ಷ ರೂ. ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನವೀನ್ ಎಂಬಾತ ಶಂಕರಪ್ಪ ಎನ್ನುವವರಿಗೆ ವಂಚನೆ ಮಾಡಿದ್ದಾನೆ. ಹುಂಡೈ ಶೋರೂಮ್​ನಲ್ಲಿ ಕಾರ್ ಸರ್ವೀಸ್​ಗೆ ನವೀನ್ ಬಂದಿದ್ದು, ಈ ವೇಳೆ ಜಯನಗರ ಎಸಿಪಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ಶಂಕರಪ್ಪರಿಂದ ಹಂತ ಹಂತವಾಗಿ ಹಣ ಪಡೆದು ವಂಚನೆ ಮಾಡಿದ್ದಾನೆ. ವಂಚನೆಗೊಳಗಾದ ಶಂಕರಪ್ಪರಿಂದ ಕೆಂಗೇರಿ ಠಾಣೆಗೆ ದೂರು ನೀಡಿದ್ದು, ಆರೋಪಿ ನವೀನ್​ಗಾಗಿ ಪೊಲೀಸರಿಂದ ತೀವ್ರ ಹುಡುಕಾಟ ನಡೆಯುತ್ತಿದೆ.

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು