AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ ದಾಳಿ; ಆಸ್ತಿಪತ್ರ, ಚೆಕ್​ಗಳು ಜಪ್ತಿ

ಅನಿಲ್ ಎಂಬುವವರ ಮೇಲೆ ಅಮಾಯಕರಿಗೆ ಬೆದರಿಸಿ ನಿವೇಶನ ಕಬಳಿಸಿರುವ ದೂರು ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಮೀಟರ್ ಬಡ್ಡಿ ವ್ಯವಹಾರದ ಶಂಕೆ ಕೂಡ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿಲ್​​ ಮನೆ ಮೇಲೆ ಸಿಸಿಬಿ ತಂಡ ದಾಳಿ ಮಾಡಿದೆ. ಅನಿಲ್​ ಮನೆಯಲ್ಲಿ ಸಿಕ್ಕ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ. ಜೊತೆಗೆ ನಗರದ ಅನೇಕ ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ದಾಳಿ ನಡೆದಿದೆ.

ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ ದಾಳಿ; ಆಸ್ತಿಪತ್ರ, ಚೆಕ್​ಗಳು ಜಪ್ತಿ
ಸಿಸಿಬಿ
Shivaprasad B
| Edited By: |

Updated on:Dec 21, 2023 | 9:03 AM

Share

ಬೆಂಗಳೂರು,ಡಿ.21: ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ (CCB) ದಾಳಿ ನಡೆಸಿ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಬೆಂಗಳೂರಿನ (Bengaluru) ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಅನಿಲ್ ಕುಮಾರ್, ಯಶವಂತಪುರ ರೌಡಿಶೀಟರ್ ಗಿರೀಶ್ ಅಲಿಯಾಸ್​​​ ರಾಬರಿ ಗಿರಿ, ವಿವೇಕನಗರ ರೌಡಿಶೀಟರ್​ಗಳಾದ ನಾರಾಯಣ, ಹೇಮಂತ್, ರಾಮು, ಸೋಲದೇವನಹಳ್ಳಿ ರೌಡಿಶೀಟರ್ ತಿಮ್ಮ ಸೇರಿ ಅನೇಕರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ತಲಾಶ್ ಮಾಡಿದ್ದಾರೆ. ಅನಿಲ ಮನೆಯಲ್ಲಿ ತಕಾರಾರು ಆಸ್ತಿಪತ್ರ, ಹಲವು ಚೆಕ್​ಗಳು ಪತ್ತೆಯಾಗಿವೆ.

ಸಿಸಿಬಿ ಅಧಿಕಾರಿಗಳು ಏಕಾಏಕಿ ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಬೋರ್ ವೆಲ್ ಅನಿಲ ಮನೆಯಲ್ಲಿ ತಕಾರಾರು ಆಸ್ತಿಪತ್ರ, ಹಲವು ಚೆಕ್​ಗಳು ಪತ್ತೆಯಾಗಿವೆ. ಅನಿಲ್ ಮೇಲೆ ಅಮಾಯಕರಿಗೆ ಬೆದರಿಸಿ ನಿವೇಶನ ಕಬಳಿಸಿರುವ ದೂರು ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಮೀಟರ್ ಬಡ್ಡಿ ವ್ಯವಹಾರದ ಶಂಕೆ ಕೂಡ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿಲ್​​ ಮನೆ ಮೇಲೆ ಸಿಸಿಬಿ ತಂಡ ದಾಳಿ ಮಾಡಿದೆ. ಅನಿಲ್​ ಮನೆಯಲ್ಲಿ ಸಿಕ್ಕ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ. ಉದ್ಯಮಿ ಕೃಷ್ಣೇಗೌಡ ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಿನದ‌ ಲೆಕ್ಕದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಕೃಷ್ಣೇಗೌಡರ ಕಚೇರಿಯಲ್ಲಿ ಅಗ್ರಿಮೆಂಟ್ ಪೇಪರ್, ಚೆಕ್​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ

ಆಸ್ತಿ ತೆರಿಗೆ ರಶೀದಿಗೆ QRಕೋಡ್ ಅಳವಡಿಸಿ

ಆಸ್ತಿ ತೆರಿಗೆ ರಶೀದಿ, ಖಾತಾ, ನಕ್ಷೆ ಮಂಜೂರಾತಿಗೆ ಕ್ಯೂಆರ್ ಕೋಡ್ ನೀಡಿ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಬಿಎಂಪಿಗೆ ನ್ಯಾ.ಸೂರಜ್ ಗೋವಿಂದರಾಜ್​ ಅವರಿದ್ದ ಹೈಕೋರ್ಟ್ ಪೀಠ ನಿರ್ದೇಶನ ಮಾಡಿದೆ. ಡಿಜಿಲಾಕರ್ ವ್ಯವಸ್ಥೆಯಿರುವ ಈ ಕಾಲದಲ್ಲೂ ಬಿಬಿಎಂಪಿ ತಂತ್ರಜ್ಞಾನ ಅಳವಡಿಸಿಕೊಂಡಿಲ್ಲ. ಕೋರ್ಟ್​ಗಳಲ್ಲೂ ತೀರ್ಪುಗಳಿಗೆ ಕ್ಯೂಆರ್ ಕೋಡ್ ಹಾಕಲಾಗುತ್ತಿದೆ. ಆಸ್ತಿಯ ನಕಲಿ ಖಾತಾ ತಡೆಗೆ QRಕೋಡ್ ಅಳವಡಿಸಬೇಕು ಎಂದು ಬಿಬಿಎಂಪಿ ದಾಖಲೆಗಳ ಡಿಜಿಟಲೀಕರಣ ಮಾಡಲು ಮುಂದಾಗಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್​​ ಸೂಚಿಸಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:01 am, Thu, 21 December 23

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ