AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ ದಾಳಿ; ಆಸ್ತಿಪತ್ರ, ಚೆಕ್​ಗಳು ಜಪ್ತಿ

ಅನಿಲ್ ಎಂಬುವವರ ಮೇಲೆ ಅಮಾಯಕರಿಗೆ ಬೆದರಿಸಿ ನಿವೇಶನ ಕಬಳಿಸಿರುವ ದೂರು ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಮೀಟರ್ ಬಡ್ಡಿ ವ್ಯವಹಾರದ ಶಂಕೆ ಕೂಡ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿಲ್​​ ಮನೆ ಮೇಲೆ ಸಿಸಿಬಿ ತಂಡ ದಾಳಿ ಮಾಡಿದೆ. ಅನಿಲ್​ ಮನೆಯಲ್ಲಿ ಸಿಕ್ಕ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ. ಜೊತೆಗೆ ನಗರದ ಅನೇಕ ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ದಾಳಿ ನಡೆದಿದೆ.

ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ ದಾಳಿ; ಆಸ್ತಿಪತ್ರ, ಚೆಕ್​ಗಳು ಜಪ್ತಿ
ಸಿಸಿಬಿ
Follow us
Shivaprasad
| Updated By: ಆಯೇಷಾ ಬಾನು

Updated on:Dec 21, 2023 | 9:03 AM

ಬೆಂಗಳೂರು,ಡಿ.21: ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ (CCB) ದಾಳಿ ನಡೆಸಿ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಬೆಂಗಳೂರಿನ (Bengaluru) ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಅನಿಲ್ ಕುಮಾರ್, ಯಶವಂತಪುರ ರೌಡಿಶೀಟರ್ ಗಿರೀಶ್ ಅಲಿಯಾಸ್​​​ ರಾಬರಿ ಗಿರಿ, ವಿವೇಕನಗರ ರೌಡಿಶೀಟರ್​ಗಳಾದ ನಾರಾಯಣ, ಹೇಮಂತ್, ರಾಮು, ಸೋಲದೇವನಹಳ್ಳಿ ರೌಡಿಶೀಟರ್ ತಿಮ್ಮ ಸೇರಿ ಅನೇಕರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ತಲಾಶ್ ಮಾಡಿದ್ದಾರೆ. ಅನಿಲ ಮನೆಯಲ್ಲಿ ತಕಾರಾರು ಆಸ್ತಿಪತ್ರ, ಹಲವು ಚೆಕ್​ಗಳು ಪತ್ತೆಯಾಗಿವೆ.

ಸಿಸಿಬಿ ಅಧಿಕಾರಿಗಳು ಏಕಾಏಕಿ ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಬೋರ್ ವೆಲ್ ಅನಿಲ ಮನೆಯಲ್ಲಿ ತಕಾರಾರು ಆಸ್ತಿಪತ್ರ, ಹಲವು ಚೆಕ್​ಗಳು ಪತ್ತೆಯಾಗಿವೆ. ಅನಿಲ್ ಮೇಲೆ ಅಮಾಯಕರಿಗೆ ಬೆದರಿಸಿ ನಿವೇಶನ ಕಬಳಿಸಿರುವ ದೂರು ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಮೀಟರ್ ಬಡ್ಡಿ ವ್ಯವಹಾರದ ಶಂಕೆ ಕೂಡ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿಲ್​​ ಮನೆ ಮೇಲೆ ಸಿಸಿಬಿ ತಂಡ ದಾಳಿ ಮಾಡಿದೆ. ಅನಿಲ್​ ಮನೆಯಲ್ಲಿ ಸಿಕ್ಕ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ. ಉದ್ಯಮಿ ಕೃಷ್ಣೇಗೌಡ ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಿನದ‌ ಲೆಕ್ಕದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಕೃಷ್ಣೇಗೌಡರ ಕಚೇರಿಯಲ್ಲಿ ಅಗ್ರಿಮೆಂಟ್ ಪೇಪರ್, ಚೆಕ್​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ

ಆಸ್ತಿ ತೆರಿಗೆ ರಶೀದಿಗೆ QRಕೋಡ್ ಅಳವಡಿಸಿ

ಆಸ್ತಿ ತೆರಿಗೆ ರಶೀದಿ, ಖಾತಾ, ನಕ್ಷೆ ಮಂಜೂರಾತಿಗೆ ಕ್ಯೂಆರ್ ಕೋಡ್ ನೀಡಿ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಬಿಎಂಪಿಗೆ ನ್ಯಾ.ಸೂರಜ್ ಗೋವಿಂದರಾಜ್​ ಅವರಿದ್ದ ಹೈಕೋರ್ಟ್ ಪೀಠ ನಿರ್ದೇಶನ ಮಾಡಿದೆ. ಡಿಜಿಲಾಕರ್ ವ್ಯವಸ್ಥೆಯಿರುವ ಈ ಕಾಲದಲ್ಲೂ ಬಿಬಿಎಂಪಿ ತಂತ್ರಜ್ಞಾನ ಅಳವಡಿಸಿಕೊಂಡಿಲ್ಲ. ಕೋರ್ಟ್​ಗಳಲ್ಲೂ ತೀರ್ಪುಗಳಿಗೆ ಕ್ಯೂಆರ್ ಕೋಡ್ ಹಾಕಲಾಗುತ್ತಿದೆ. ಆಸ್ತಿಯ ನಕಲಿ ಖಾತಾ ತಡೆಗೆ QRಕೋಡ್ ಅಳವಡಿಸಬೇಕು ಎಂದು ಬಿಬಿಎಂಪಿ ದಾಖಲೆಗಳ ಡಿಜಿಟಲೀಕರಣ ಮಾಡಲು ಮುಂದಾಗಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್​​ ಸೂಚಿಸಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:01 am, Thu, 21 December 23

ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ