AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ ದಾಳಿ; ಆಸ್ತಿಪತ್ರ, ಚೆಕ್​ಗಳು ಜಪ್ತಿ

ಅನಿಲ್ ಎಂಬುವವರ ಮೇಲೆ ಅಮಾಯಕರಿಗೆ ಬೆದರಿಸಿ ನಿವೇಶನ ಕಬಳಿಸಿರುವ ದೂರು ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಮೀಟರ್ ಬಡ್ಡಿ ವ್ಯವಹಾರದ ಶಂಕೆ ಕೂಡ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿಲ್​​ ಮನೆ ಮೇಲೆ ಸಿಸಿಬಿ ತಂಡ ದಾಳಿ ಮಾಡಿದೆ. ಅನಿಲ್​ ಮನೆಯಲ್ಲಿ ಸಿಕ್ಕ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ. ಜೊತೆಗೆ ನಗರದ ಅನೇಕ ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ದಾಳಿ ನಡೆದಿದೆ.

ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ ದಾಳಿ; ಆಸ್ತಿಪತ್ರ, ಚೆಕ್​ಗಳು ಜಪ್ತಿ
ಸಿಸಿಬಿ
Shivaprasad B
| Edited By: ಆಯೇಷಾ ಬಾನು|

Updated on:Dec 21, 2023 | 9:03 AM

Share

ಬೆಂಗಳೂರು,ಡಿ.21: ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ (CCB) ದಾಳಿ ನಡೆಸಿ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಬೆಂಗಳೂರಿನ (Bengaluru) ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಅನಿಲ್ ಕುಮಾರ್, ಯಶವಂತಪುರ ರೌಡಿಶೀಟರ್ ಗಿರೀಶ್ ಅಲಿಯಾಸ್​​​ ರಾಬರಿ ಗಿರಿ, ವಿವೇಕನಗರ ರೌಡಿಶೀಟರ್​ಗಳಾದ ನಾರಾಯಣ, ಹೇಮಂತ್, ರಾಮು, ಸೋಲದೇವನಹಳ್ಳಿ ರೌಡಿಶೀಟರ್ ತಿಮ್ಮ ಸೇರಿ ಅನೇಕರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ತಲಾಶ್ ಮಾಡಿದ್ದಾರೆ. ಅನಿಲ ಮನೆಯಲ್ಲಿ ತಕಾರಾರು ಆಸ್ತಿಪತ್ರ, ಹಲವು ಚೆಕ್​ಗಳು ಪತ್ತೆಯಾಗಿವೆ.

ಸಿಸಿಬಿ ಅಧಿಕಾರಿಗಳು ಏಕಾಏಕಿ ರೌಡಿಶೀಟರ್ಸ್​, ಮೀಟರ್​ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಬೋರ್ ವೆಲ್ ಅನಿಲ ಮನೆಯಲ್ಲಿ ತಕಾರಾರು ಆಸ್ತಿಪತ್ರ, ಹಲವು ಚೆಕ್​ಗಳು ಪತ್ತೆಯಾಗಿವೆ. ಅನಿಲ್ ಮೇಲೆ ಅಮಾಯಕರಿಗೆ ಬೆದರಿಸಿ ನಿವೇಶನ ಕಬಳಿಸಿರುವ ದೂರು ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಮೀಟರ್ ಬಡ್ಡಿ ವ್ಯವಹಾರದ ಶಂಕೆ ಕೂಡ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿಲ್​​ ಮನೆ ಮೇಲೆ ಸಿಸಿಬಿ ತಂಡ ದಾಳಿ ಮಾಡಿದೆ. ಅನಿಲ್​ ಮನೆಯಲ್ಲಿ ಸಿಕ್ಕ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ. ಉದ್ಯಮಿ ಕೃಷ್ಣೇಗೌಡ ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಿನದ‌ ಲೆಕ್ಕದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಕೃಷ್ಣೇಗೌಡರ ಕಚೇರಿಯಲ್ಲಿ ಅಗ್ರಿಮೆಂಟ್ ಪೇಪರ್, ಚೆಕ್​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ

ಆಸ್ತಿ ತೆರಿಗೆ ರಶೀದಿಗೆ QRಕೋಡ್ ಅಳವಡಿಸಿ

ಆಸ್ತಿ ತೆರಿಗೆ ರಶೀದಿ, ಖಾತಾ, ನಕ್ಷೆ ಮಂಜೂರಾತಿಗೆ ಕ್ಯೂಆರ್ ಕೋಡ್ ನೀಡಿ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಬಿಎಂಪಿಗೆ ನ್ಯಾ.ಸೂರಜ್ ಗೋವಿಂದರಾಜ್​ ಅವರಿದ್ದ ಹೈಕೋರ್ಟ್ ಪೀಠ ನಿರ್ದೇಶನ ಮಾಡಿದೆ. ಡಿಜಿಲಾಕರ್ ವ್ಯವಸ್ಥೆಯಿರುವ ಈ ಕಾಲದಲ್ಲೂ ಬಿಬಿಎಂಪಿ ತಂತ್ರಜ್ಞಾನ ಅಳವಡಿಸಿಕೊಂಡಿಲ್ಲ. ಕೋರ್ಟ್​ಗಳಲ್ಲೂ ತೀರ್ಪುಗಳಿಗೆ ಕ್ಯೂಆರ್ ಕೋಡ್ ಹಾಕಲಾಗುತ್ತಿದೆ. ಆಸ್ತಿಯ ನಕಲಿ ಖಾತಾ ತಡೆಗೆ QRಕೋಡ್ ಅಳವಡಿಸಬೇಕು ಎಂದು ಬಿಬಿಎಂಪಿ ದಾಖಲೆಗಳ ಡಿಜಿಟಲೀಕರಣ ಮಾಡಲು ಮುಂದಾಗಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್​​ ಸೂಚಿಸಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:01 am, Thu, 21 December 23

Follow Us
Shivaprasad B
Shivaprasad B
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು