AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಶ್ರೀ ಮಠದಲ್ಲಿ ಸಿಕ್ತು 56 ಲಕ್ಷ ರೂಪಾಯಿ, ಹಣದ ಬಗ್ಗೆ ಸುಳಿವು ಸಿಕ್ಕಿದ್ದೆ ರೋಚಕ

ಕಳೆದ ರಾತ್ರಿ ವಿಜಯನಗರ ಜಿಲ್ಲೆಯ ಶ್ರೀಗಳ ಮಠದಲ್ಲಿ 56 ಲಕ್ಷ ರೂಪಾಯಿ ಹಣವನ್ನು ಸಿಸಿಬಿ ವಶಪಡಿಸಿಕೊಂಡಿದೆ. ಪ್ರಣವ್ ಪ್ರಸಾದ್ ಎಂಬ ವ್ಯಕ್ತಿ ಡಿಸಿಪಿ ಅಬ್ದುಲ್ ಅಹದ್ ಅವರಿಗೆ ಪತ್ರ ಬರೆದು ಹಣದ ಬಗ್ಗೆ ಸುಳಿವು ನೀಡಿದರು. ಡಿಸಿಪಿಗೆ ಪತ್ರ ಸಿಗುತ್ತಿದ್ದಂತೆ ಆಶ್ರಮಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿದೆ.

ಹಾಲಶ್ರೀ ಮಠದಲ್ಲಿ ಸಿಕ್ತು 56 ಲಕ್ಷ ರೂಪಾಯಿ, ಹಣದ ಬಗ್ಗೆ ಸುಳಿವು ಸಿಕ್ಕಿದ್ದೆ ರೋಚಕ
ಅಭಿನವ ಹಾಲಶ್ರೀ
Follow us
Prajwal Kumar NY
| Updated By: ಆಯೇಷಾ ಬಾನು

Updated on: Sep 21, 2023 | 2:40 PM

ಬೆಂಗಳೂರು, ಸೆ.21: MLA ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಚೈತ್ರಾ ಕುಂದಾಪುರ(Chaitra Kundapura) ವಂಚನೆ ಪ್ರಕರಣದಲ್ಲಿ ಅಭಿನವ ಹಾಲಶ್ರೀಯನ್ನು ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಸದ್ಯ ಅರೆಸ್ಟ್ ಆಗುತ್ತಿದ್ದಂತೆ ಹಾಲಶ್ರೀ(Abhinava Halashree) ಆಶ್ರಮದಲ್ಲಿ 56 ಲಕ್ಷ ಹಣ ಪತ್ತೆಯಾಗಿದೆ. ಕಳೆದ ರಾತ್ರಿ ವಿಜಯನಗರ ಜಿಲ್ಲೆಯ ಶ್ರೀಗಳ ಮಠದಲ್ಲಿ 56 ಲಕ್ಷ ರೂಪಾಯಿ ಹಣವನ್ನು ಸಿಸಿಬಿ ವಶಪಡಿಸಿಕೊಂಡಿದೆ. ಪ್ರಣವ್ ಪ್ರಸಾದ್ ಎಂಬ ವ್ಯಕ್ತಿ ಡಿಸಿಪಿ ಅಬ್ದುಲ್ ಅಹದ್ ಅವರಿಗೆ ಪತ್ರ ಬರೆದು ಹಣದ ಬಗ್ಗೆ ಸುಳಿವು ನೀಡಿದರು. ಡಿಸಿಪಿಗೆ ಪತ್ರ ಸಿಗುತ್ತಿದ್ದಂತೆ ಆಶ್ರಮಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿದೆ.

ಮೈಸೂರಿನ ನಿವಾಸಿ ಪ್ರಣವ್ ಪ್ರಸಾದ್, ಬುಧವಾರ ಸಂಜೆ ವಿಡಿಯೋ ಮಾಡಿ, ತಾನು 56 ಲಕ್ಷ ರೂಪಾಯಿ ಹಣವನ್ನು ಅಭಿನವ ಹಾಲಶ್ರೀ ಅವರ ಆಶ್ರಮದಲ್ಲಿ ಇಟ್ಟಿರುವುದಾಗಿ ಹಾಗೂ ಅದು ಶ್ರೀಗಳಿಗೆ ಸೇರಿದ ಹಣ ಎಂದು ಸತ್ಯ ಬಯಲು ಮಾಡಿದ್ದರು. ಇನ್ನು ವಿಡಿಯೋದಲ್ಲಿ ಪ್ರಣವ್, ಕಳೆದ ವಾರ ಶ್ರೀಗಳ ಡ್ರೈವರ್ ರಾಜು ಮೈಸೂರಿನ ಕಚೇರಿಗೆ ಬಂದು 60 ಲಕ್ಷ ರೂಪಾಯಿಗಳಿದ್ದ ಬ್ಯಾಗ್ ಅನ್ನು ತನ್ನ ಬಳಿ ಇಟ್ಟುಕೊಳ್ಳುವಂತೆ ಕೇಳಿದ್ದನಂತೆ. ವಕೀಲರ ಶುಲ್ಕ ಪಾವತಿಸುವುದಾಗಿ ಹೇಳಿ ಚಾಲಕನು ಬ್ಯಾಗ್‌ನಿಂದ 4 ಲಕ್ಷ ರೂಪಾಯಿ ತೆಗೆದುಕೊಂಡು ಉಳಿದ ಹಣವನ್ನು ಕಚೇರಿಯಲ್ಲಿಡುವಂತೆ ಪ್ರಣವ್​ಗೆ ಹೇಳಿ ಹಣದ ಬ್ಯಾಂಗ್​ ನೀಡಿದ್ದರಂತೆ. ಆದರೆ ಹಣವನ್ನು ವಾಪಾಸ್ ತೆಗೆದುಕೊಂಡು ಹೋಗಲು ಶ್ರೀ ಕಡೆಯವರು ಯಾರು ಬರದ ಕಾರಣ ಹಣವನ್ನು ಆಶ್ರಮದಲ್ಲಿಟ್ಟಿದ್ದೆ ಎಂದು ವಿಡಿಯೋದಲ್ಲಿ ಪ್ರಣವ್ ತಿಳಿಸಿದ್ದಾರೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಗ್ಯಾಂಗ್​​​ನಿಂದ ಎಷ್ಟು ಹಣ ಜಪ್ತಿ ಮಾಡಲಾಗಿದೆ? ಪ್ರಕರಣದಲ್ಲಿ ಎಷ್ಟು ಜನರ ಬಂಧನವಾಗಿದೆ? ಇಲ್ಲಿದೆ ಅಧಿಕೃತ ಮಾಹಿತಿ

ಸಿಸಿಬಿ ಅಧಿಕಾರಿಗಳ ತಂಡ ಅಭಿನವ ಹಾಲಶ್ರೀ ಮಠಕ್ಕೆ ಭೇಟಿ ನೀಡಿ 56 ಲಕ್ಷ ರೂ. ವಶಕ್ಕೆ ಪಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯಲು ದೂರುದಾರ ಗೋವಿಂದ್ ಬಾಬು ಪೂಜಾರಿ ನೀಡಿದ ಹಣವೇ ಈ ಹಣ ಎನ್ನಲಾಗಿದೆ. 5 ಕೋಟಿ ಹಣದ ಪೈಕಿ ಒಂದೂವರೆ ಕೋಟಿ ರೂ.ಗಳನ್ನು ಹಾಲಶ್ರೀಗಳಿಗೆ ನೀಡಿರುವುದಾಗಿ ಗೋವಿಂದ ಪೂಜಾರಿ ಹೇಳಿಕೊಂಡಿದ್ದರು. ಈ ಪೈಕಿ 56 ಲಕ್ಷ ಹಣ ಪತ್ತೆಯಾಗಿದೆ.

ಮತ್ತೊಂದೆಡೆ ಶ್ರೀಗಳ ಅಕೌಂಟ್​ನಲ್ಲಿರುವ ಹಣ ಹಾಗು ಇತರ ಮಾಹಿತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಹಾಲಶ್ರೀಗೆ ಒಂದು ಕೋಟಿ ಐವತ್ತು ಲಕ್ಷ ಹಣ ನೀಡಲಾಗಿತ್ತು. ಈ ಪೈಕಿ ಐವತ್ತು ಲಕ್ಷ ಹಣ ವಾಪಸ್ಸು ನೀಡಿದ್ದರು. ಈಗ ಐವತ್ತಾರು ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಉಳಿದ 44 ಲಕ್ಷ ಹಣದ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಈ ಪೈಕಿ 21 ಲಕ್ಷ ಹಣ ನೀಡಿ ಮೂವತ್ತಾರು ಎಕ್ಕರೆ ಜಮೀನು ಲೀಜ್ ಗೆ ಪಡೆದಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ನಿನ್ನೆ ದಾಖಲಾತಿ ಪರಿಶೀಲನೆ ವೇಳೆ ಲೀಸ್ ಪಡೆದಿರುವುದು ಪತ್ತೆಯಾಗಿತ್ತು. ಉಳಿದ ಹಣವನ್ನು ಬೇರೆಯವರ ಮೂಲಕ ಹೂಡಿಕೆ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸಂಪೂರ್ಣ ಹಣವನ್ನು ವಾಪಸ್ಸು ನೀಡುವುದಾಗಿ ಹಾಲಶ್ರೀ ಒಪ್ಪಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ