AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಶ್ರೀ ಮಠದಲ್ಲಿ ಸಿಕ್ತು 56 ಲಕ್ಷ ರೂಪಾಯಿ, ಹಣದ ಬಗ್ಗೆ ಸುಳಿವು ಸಿಕ್ಕಿದ್ದೆ ರೋಚಕ

ಕಳೆದ ರಾತ್ರಿ ವಿಜಯನಗರ ಜಿಲ್ಲೆಯ ಶ್ರೀಗಳ ಮಠದಲ್ಲಿ 56 ಲಕ್ಷ ರೂಪಾಯಿ ಹಣವನ್ನು ಸಿಸಿಬಿ ವಶಪಡಿಸಿಕೊಂಡಿದೆ. ಪ್ರಣವ್ ಪ್ರಸಾದ್ ಎಂಬ ವ್ಯಕ್ತಿ ಡಿಸಿಪಿ ಅಬ್ದುಲ್ ಅಹದ್ ಅವರಿಗೆ ಪತ್ರ ಬರೆದು ಹಣದ ಬಗ್ಗೆ ಸುಳಿವು ನೀಡಿದರು. ಡಿಸಿಪಿಗೆ ಪತ್ರ ಸಿಗುತ್ತಿದ್ದಂತೆ ಆಶ್ರಮಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿದೆ.

ಹಾಲಶ್ರೀ ಮಠದಲ್ಲಿ ಸಿಕ್ತು 56 ಲಕ್ಷ ರೂಪಾಯಿ, ಹಣದ ಬಗ್ಗೆ ಸುಳಿವು ಸಿಕ್ಕಿದ್ದೆ ರೋಚಕ
ಅಭಿನವ ಹಾಲಶ್ರೀ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಆಯೇಷಾ ಬಾನು|

Updated on: Sep 21, 2023 | 2:40 PM

Share

ಬೆಂಗಳೂರು, ಸೆ.21: MLA ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಚೈತ್ರಾ ಕುಂದಾಪುರ(Chaitra Kundapura) ವಂಚನೆ ಪ್ರಕರಣದಲ್ಲಿ ಅಭಿನವ ಹಾಲಶ್ರೀಯನ್ನು ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಸದ್ಯ ಅರೆಸ್ಟ್ ಆಗುತ್ತಿದ್ದಂತೆ ಹಾಲಶ್ರೀ(Abhinava Halashree) ಆಶ್ರಮದಲ್ಲಿ 56 ಲಕ್ಷ ಹಣ ಪತ್ತೆಯಾಗಿದೆ. ಕಳೆದ ರಾತ್ರಿ ವಿಜಯನಗರ ಜಿಲ್ಲೆಯ ಶ್ರೀಗಳ ಮಠದಲ್ಲಿ 56 ಲಕ್ಷ ರೂಪಾಯಿ ಹಣವನ್ನು ಸಿಸಿಬಿ ವಶಪಡಿಸಿಕೊಂಡಿದೆ. ಪ್ರಣವ್ ಪ್ರಸಾದ್ ಎಂಬ ವ್ಯಕ್ತಿ ಡಿಸಿಪಿ ಅಬ್ದುಲ್ ಅಹದ್ ಅವರಿಗೆ ಪತ್ರ ಬರೆದು ಹಣದ ಬಗ್ಗೆ ಸುಳಿವು ನೀಡಿದರು. ಡಿಸಿಪಿಗೆ ಪತ್ರ ಸಿಗುತ್ತಿದ್ದಂತೆ ಆಶ್ರಮಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿದೆ.

ಮೈಸೂರಿನ ನಿವಾಸಿ ಪ್ರಣವ್ ಪ್ರಸಾದ್, ಬುಧವಾರ ಸಂಜೆ ವಿಡಿಯೋ ಮಾಡಿ, ತಾನು 56 ಲಕ್ಷ ರೂಪಾಯಿ ಹಣವನ್ನು ಅಭಿನವ ಹಾಲಶ್ರೀ ಅವರ ಆಶ್ರಮದಲ್ಲಿ ಇಟ್ಟಿರುವುದಾಗಿ ಹಾಗೂ ಅದು ಶ್ರೀಗಳಿಗೆ ಸೇರಿದ ಹಣ ಎಂದು ಸತ್ಯ ಬಯಲು ಮಾಡಿದ್ದರು. ಇನ್ನು ವಿಡಿಯೋದಲ್ಲಿ ಪ್ರಣವ್, ಕಳೆದ ವಾರ ಶ್ರೀಗಳ ಡ್ರೈವರ್ ರಾಜು ಮೈಸೂರಿನ ಕಚೇರಿಗೆ ಬಂದು 60 ಲಕ್ಷ ರೂಪಾಯಿಗಳಿದ್ದ ಬ್ಯಾಗ್ ಅನ್ನು ತನ್ನ ಬಳಿ ಇಟ್ಟುಕೊಳ್ಳುವಂತೆ ಕೇಳಿದ್ದನಂತೆ. ವಕೀಲರ ಶುಲ್ಕ ಪಾವತಿಸುವುದಾಗಿ ಹೇಳಿ ಚಾಲಕನು ಬ್ಯಾಗ್‌ನಿಂದ 4 ಲಕ್ಷ ರೂಪಾಯಿ ತೆಗೆದುಕೊಂಡು ಉಳಿದ ಹಣವನ್ನು ಕಚೇರಿಯಲ್ಲಿಡುವಂತೆ ಪ್ರಣವ್​ಗೆ ಹೇಳಿ ಹಣದ ಬ್ಯಾಂಗ್​ ನೀಡಿದ್ದರಂತೆ. ಆದರೆ ಹಣವನ್ನು ವಾಪಾಸ್ ತೆಗೆದುಕೊಂಡು ಹೋಗಲು ಶ್ರೀ ಕಡೆಯವರು ಯಾರು ಬರದ ಕಾರಣ ಹಣವನ್ನು ಆಶ್ರಮದಲ್ಲಿಟ್ಟಿದ್ದೆ ಎಂದು ವಿಡಿಯೋದಲ್ಲಿ ಪ್ರಣವ್ ತಿಳಿಸಿದ್ದಾರೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಗ್ಯಾಂಗ್​​​ನಿಂದ ಎಷ್ಟು ಹಣ ಜಪ್ತಿ ಮಾಡಲಾಗಿದೆ? ಪ್ರಕರಣದಲ್ಲಿ ಎಷ್ಟು ಜನರ ಬಂಧನವಾಗಿದೆ? ಇಲ್ಲಿದೆ ಅಧಿಕೃತ ಮಾಹಿತಿ

ಸಿಸಿಬಿ ಅಧಿಕಾರಿಗಳ ತಂಡ ಅಭಿನವ ಹಾಲಶ್ರೀ ಮಠಕ್ಕೆ ಭೇಟಿ ನೀಡಿ 56 ಲಕ್ಷ ರೂ. ವಶಕ್ಕೆ ಪಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯಲು ದೂರುದಾರ ಗೋವಿಂದ್ ಬಾಬು ಪೂಜಾರಿ ನೀಡಿದ ಹಣವೇ ಈ ಹಣ ಎನ್ನಲಾಗಿದೆ. 5 ಕೋಟಿ ಹಣದ ಪೈಕಿ ಒಂದೂವರೆ ಕೋಟಿ ರೂ.ಗಳನ್ನು ಹಾಲಶ್ರೀಗಳಿಗೆ ನೀಡಿರುವುದಾಗಿ ಗೋವಿಂದ ಪೂಜಾರಿ ಹೇಳಿಕೊಂಡಿದ್ದರು. ಈ ಪೈಕಿ 56 ಲಕ್ಷ ಹಣ ಪತ್ತೆಯಾಗಿದೆ.

ಮತ್ತೊಂದೆಡೆ ಶ್ರೀಗಳ ಅಕೌಂಟ್​ನಲ್ಲಿರುವ ಹಣ ಹಾಗು ಇತರ ಮಾಹಿತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಹಾಲಶ್ರೀಗೆ ಒಂದು ಕೋಟಿ ಐವತ್ತು ಲಕ್ಷ ಹಣ ನೀಡಲಾಗಿತ್ತು. ಈ ಪೈಕಿ ಐವತ್ತು ಲಕ್ಷ ಹಣ ವಾಪಸ್ಸು ನೀಡಿದ್ದರು. ಈಗ ಐವತ್ತಾರು ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಉಳಿದ 44 ಲಕ್ಷ ಹಣದ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಈ ಪೈಕಿ 21 ಲಕ್ಷ ಹಣ ನೀಡಿ ಮೂವತ್ತಾರು ಎಕ್ಕರೆ ಜಮೀನು ಲೀಜ್ ಗೆ ಪಡೆದಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ನಿನ್ನೆ ದಾಖಲಾತಿ ಪರಿಶೀಲನೆ ವೇಳೆ ಲೀಸ್ ಪಡೆದಿರುವುದು ಪತ್ತೆಯಾಗಿತ್ತು. ಉಳಿದ ಹಣವನ್ನು ಬೇರೆಯವರ ಮೂಲಕ ಹೂಡಿಕೆ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸಂಪೂರ್ಣ ಹಣವನ್ನು ವಾಪಸ್ಸು ನೀಡುವುದಾಗಿ ಹಾಲಶ್ರೀ ಒಪ್ಪಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!