Bharat Rice: ಇಂದಿನಿಂದ ಕೇಂದ್ರದ ಭಾರತ್ ಬ್ರ್ಯಾಂಡ್​ನ ಅಕ್ಕಿ ಮಾರಾಟ; ಕೆಜಿಗೆ 29 ರೂ, ಆನ್​ಲೈನ್​ನಲ್ಲೂ ಖರೀದಿಸಬಹುದು

ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ ಅಕ್ಕಿಗೆ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಚಾಲನೆ ಸಿಗಲಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ. ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ.

Bharat Rice: ಇಂದಿನಿಂದ ಕೇಂದ್ರದ ಭಾರತ್ ಬ್ರ್ಯಾಂಡ್​ನ ಅಕ್ಕಿ ಮಾರಾಟ; ಕೆಜಿಗೆ 29 ರೂ, ಆನ್​ಲೈನ್​ನಲ್ಲೂ ಖರೀದಿಸಬಹುದು
ಸಾಂದರ್ಭಿಕ ಚಿತ್ರ
Follow us
| Updated By: Digi Tech Desk

Updated on:Feb 06, 2024 | 2:30 PM

ಬೆಂಗಳೂರು, ಫೆ.06: ಲೋಕ ಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ನಾನಾ ರೀತಿಯ ತಂತ್ರಗಳನ್ನು ರೂಪಿಸುತ್ತಿವೆ. ಸದ್ಯ ಕೇಂದ್ರ ಸರ್ಕಾರ (Central Government) ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ (Bharath Brand) ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸಿಗಲಿದೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ.

ಅಕ್ಕಿ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ಘೋಷಿಸಿದೆ. ನಾಫೆಡ್​​-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಇಂದು ನಾಫೆಡ್​​ನ 7 ಸಂಚಾರಿ ವಾಹನಗಳಲ್ಲಿ ಭಾರತ್​ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ಭಾರತ್ ಅಕ್ಕಿ ಯೋಜನೆಯಡಿ ಕೆಜಿ ಭಾರತ್ ಅಕ್ಕಿ 29 ರೂ.ಗೆ ಲಭ್ಯವಾಗಲಿದೆ. 5 ಕೆಜಿ, 10 ಕೆಜಿ ಬ್ಯಾಗ್​ಗಳಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಲಭ್ಯವಾಗಲಿದೆ. ಸಂಜೆ 4 ಗಂಟೆಯಿಂದ ಬೆಂಗಳೂರಿನಲ್ಲಿ ಭಾರತ್​ ಅಕ್ಕಿ ಮಾರಾಟ ಆರಂಭವಾಗುತ್ತೆ. ನಾಳೆ ಮಂಡ್ಯ, ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲೂ ಲಭ್ಯವಾಗಲಿದೆ.

ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿಗೆ ಅವಕಾಶ

ಇನ್ನು ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ಅಕ್ಕಿ ತಲುಪಿಸಲು ಸಿದ್ಧತೆ ನಡೆದಿದೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಬಂಧನ

ರಾಜ್ಯದಲ್ಲಿ ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ಜನ ಕಂಗೆಟ್ಟಿದ್ದಾರೆ. ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್‌ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಸದ್ಯ ಈಗ ಅಕ್ಕಿಯನ್ನೂ ಕೂಡ ಮಾರಾಟ ಮಾಡಲು ಮುಂದಾಗಿದೆ. ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಸಿಎಫ್‌) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಇ–ಕಾರ್ಮಸ್‌ ವೇದಿಕೆಗಳಲ್ಲೂ ಅಕ್ಕಿ ದೊರೆಯಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:41 am, Tue, 6 February 24

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ