AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Rice: ಇಂದಿನಿಂದ ಕೇಂದ್ರದ ಭಾರತ್ ಬ್ರ್ಯಾಂಡ್​ನ ಅಕ್ಕಿ ಮಾರಾಟ; ಕೆಜಿಗೆ 29 ರೂ, ಆನ್​ಲೈನ್​ನಲ್ಲೂ ಖರೀದಿಸಬಹುದು

ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ ಅಕ್ಕಿಗೆ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಚಾಲನೆ ಸಿಗಲಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ. ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ.

Bharat Rice: ಇಂದಿನಿಂದ ಕೇಂದ್ರದ ಭಾರತ್ ಬ್ರ್ಯಾಂಡ್​ನ ಅಕ್ಕಿ ಮಾರಾಟ; ಕೆಜಿಗೆ 29 ರೂ, ಆನ್​ಲೈನ್​ನಲ್ಲೂ ಖರೀದಿಸಬಹುದು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Feb 06, 2024 | 2:30 PM

Share

ಬೆಂಗಳೂರು, ಫೆ.06: ಲೋಕ ಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ನಾನಾ ರೀತಿಯ ತಂತ್ರಗಳನ್ನು ರೂಪಿಸುತ್ತಿವೆ. ಸದ್ಯ ಕೇಂದ್ರ ಸರ್ಕಾರ (Central Government) ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ (Bharath Brand) ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸಿಗಲಿದೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ.

ಅಕ್ಕಿ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ಘೋಷಿಸಿದೆ. ನಾಫೆಡ್​​-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಇಂದು ನಾಫೆಡ್​​ನ 7 ಸಂಚಾರಿ ವಾಹನಗಳಲ್ಲಿ ಭಾರತ್​ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ಭಾರತ್ ಅಕ್ಕಿ ಯೋಜನೆಯಡಿ ಕೆಜಿ ಭಾರತ್ ಅಕ್ಕಿ 29 ರೂ.ಗೆ ಲಭ್ಯವಾಗಲಿದೆ. 5 ಕೆಜಿ, 10 ಕೆಜಿ ಬ್ಯಾಗ್​ಗಳಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಲಭ್ಯವಾಗಲಿದೆ. ಸಂಜೆ 4 ಗಂಟೆಯಿಂದ ಬೆಂಗಳೂರಿನಲ್ಲಿ ಭಾರತ್​ ಅಕ್ಕಿ ಮಾರಾಟ ಆರಂಭವಾಗುತ್ತೆ. ನಾಳೆ ಮಂಡ್ಯ, ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲೂ ಲಭ್ಯವಾಗಲಿದೆ.

ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿಗೆ ಅವಕಾಶ

ಇನ್ನು ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ಅಕ್ಕಿ ತಲುಪಿಸಲು ಸಿದ್ಧತೆ ನಡೆದಿದೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಬಂಧನ

ರಾಜ್ಯದಲ್ಲಿ ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ಜನ ಕಂಗೆಟ್ಟಿದ್ದಾರೆ. ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್‌ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಸದ್ಯ ಈಗ ಅಕ್ಕಿಯನ್ನೂ ಕೂಡ ಮಾರಾಟ ಮಾಡಲು ಮುಂದಾಗಿದೆ. ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಸಿಎಫ್‌) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಇ–ಕಾರ್ಮಸ್‌ ವೇದಿಕೆಗಳಲ್ಲೂ ಅಕ್ಕಿ ದೊರೆಯಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:41 am, Tue, 6 February 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್