AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಭೀತಿ: ಇಂದು ರಾಜ್ಯ ಆರೋಗ್ಯ ಇಲಾಖೆ ಜೊತೆ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸಭೆ

ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರೋ ಬೆನ್ನಲ್ಲೆ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಕೊವೀಡ್‌ನ ಮುಂಜಾಗೃತ ಕ್ರಮವಾಗಿ ಮಾಕ್ ಡ್ರಿಲ್‌ಗೆ ಮುಂದಾಗಿದೆ.

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಭೀತಿ: ಇಂದು ರಾಜ್ಯ ಆರೋಗ್ಯ ಇಲಾಖೆ ಜೊತೆ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸಭೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Mar 27, 2023 | 11:40 AM

Share

ಬೆಂಗಳೂರು: ದೇಶದಲ್ಲಿ ಮತ್ತೆ ಕೊರೊನಾ(Coronavirus) ಭೀತಿ‌ ಎದುರಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಏರುತ್ತಿದೆ. ಶನಿವಾರ 1,890 ಹೊಸ ಪ್ರಕರಣಗಳು ವರದಿಯಾಗಿವೆ. ಹಿಂದಿನ ಏಳು ದಿನಗಳಿಗೆ ಹೋಲಿಸಿದರೆ ಕಳೆದ ಏಳು ದಿನಗಳಲ್ಲಿ ಪ್ರಕರಣಗಳು 78% ರಷ್ಟು ಏರಿಕೆಯಾಗಿದೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲೂ ಕೊರೊನಾ ಹೆಚ್ಚಾಗುತ್ತಿದ್ದು ನಿನ್ನೆ(ಮಾರ್ಚ್ 26) ಒಂದೇ ದಿನ ರಾಜ್ಯದಲ್ಲಿ ಇನ್ನೂರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಇಂದು ರಾಜ್ಯ ಆರೋಗ್ಯ ಇಲಾಖೆಗಳ ಜೊತೆ ಕೇಂದ್ರ ಆರೋಗ್ಯ ಇಲಾಖೆ ಮತ್ತು ICMR ಮಹತ್ವದ ಸಭೆ ನಡೆಸಲಿದೆ.

ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರೋ ಬೆನ್ನಲ್ಲೆ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಕೊವೀಡ್‌ನ ಮುಂಜಾಗೃತ ಕ್ರಮವಾಗಿ ಮಾಕ್ ಡ್ರಿಲ್‌ಗೆ ಮುಂದಾಗಿದೆ. ದೇಶವ್ಯಾಪಿ ಆಸ್ಪತ್ರೆಗಳ ಸನ್ನದ್ದತೆ ಪರೀಕ್ಷೆಗಾಗಿ ಮಾಕ್ ಡ್ರೀಲ್‌ಗೆ ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಏಪ್ರಿಲ್ 10, 11 ರಂದು ದೇಶವ್ಯಾಪಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಅಣುಕು ಪ್ರದರ್ಶನ ನಡೆಯಲಿದೆ. ಈ ಸಂಬಂಧ ಇಂದು ರಾಜ್ಯಗಳ ಆರೋಗ್ಯಾಧಿಕಾರಿಗಳ ಸಭೆ ನಡೆಯಲಿದೆ. ದೇಶದ ಎಲ್ಲಾ ರಾಜ್ಯಗಳ ಆರೋಗ್ಯ ಇಲಾಖೆ ಮುಖ್ಯಸ್ಥರು ವರ್ಚುವಲ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಣಕು ಡ್ರಿಲ್‌ನಲ್ಲಿ ಆರೋಗ್ಯ ಸೌಲಭ್ಯಗಳ ಲಭ್ಯತೆ, ಹಾಸಿಗೆಗಳ ಸಾಮರ್ಥ್ಯದ ಕುರಿತು ಚರ್ಚೆ ನಡೆಯಲಿದೆ.

ಇದನ್ನೂ ಓದಿ: ರಾಜ್ಯಕ್ಕೆ ಮತ್ತೆ ವಕ್ಕರಿಸಿದ ಕೊರೊನಾ; ಪ್ರತಿ ದಿನ ನೂರಕ್ಕೂ ಹೆಚ್ಚು ಕೇಸ್ ಪತ್ತೆ, ವಾರಕ್ಕೆ ನಾಲ್ಕು ಸಾವು

ಭಾರತದಲ್ಲಿ ಸೋಮವಾರ1,805 ಹೊಸ ಪ್ರಕರಣಗಳು ದಾಖಲಾಗಿವೆ. ಜೊತೆಗೆ, 134 ದಿನಗಳ ನಂತರ ಕೊರೊನಾ ಸಂಕ್ರಿಯ ಸಂಖ್ಯೆ 10,000 ಗಡಿ ದಾಟಿದೆ. ಇದರಿಂದ ಈಗ ಆತಂಕ ಹೆಚ್ಚಾಗಿದೆ. ದೈನಂದಿನದ ಸಕ್ರಿಯ ದರವು 3.19 ಪ್ರತಿಶತ ಮತ್ತು ವಾರದ ಪಾಸಿಟಿವಿಟಿ ದರವು 1.39 ಪ್ರತಿಶತದಷ್ಟು ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,300 ಕ್ಕೆ ಏರಿದೆ ಎಂದು ಬೆಳಿಗ್ಗೆ 8 ಗಂಟೆಗೆ ಆರೋಗ್ಯ ಇಲಾಖೆ ಡೇಟಾವನ್ನು ಬಿಡಿಗಡೆ ಮಾಡಿದೆ. ಭಾನುವಾರ ಸಕ್ರಿಯ ಪ್ರಕರಣಗಳ ಸಂಖ್ಯೆ 9,433 ಇತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?