Amit Shah: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ಅಮಿತ್ ಶಾ 3 ದಿನ ರಾಜ್ಯ ಪ್ರವಾಸ: ಇಲ್ಲಿದೆ ವೇಳಾಪಟ್ಟಿ

ಕೇಂದ್ರ ಗೃಹ ಸಚಿವ ಅಮಿತ್​ ಶಾ ಡಿ.29ರಿಂದ 31ರವರೆಗೆ 3 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

Amit Shah: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ಅಮಿತ್ ಶಾ 3 ದಿನ ರಾಜ್ಯ ಪ್ರವಾಸ: ಇಲ್ಲಿದೆ ವೇಳಾಪಟ್ಟಿ
ಕೇಂದ್ರ ಸಚಿವ ಅಮಿತ್ ಶಾ Image Credit source: News18
Follow us
| Updated By: ವಿವೇಕ ಬಿರಾದಾರ

Updated on:Dec 28, 2022 | 5:29 PM

ಬೆಂಗಳೂರು: ವಿಧಾನಸಭೆ ಚುನಾವಣೆಗೆ 4 ರಿಂದ 5 ತಿಂಗಳು ಬಾಕಿ ಇರುವಾಗಲೇ ಬಿಜೆಪಿಯ ಕೇಂದ್ರ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಕೆಲವು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ (JP Nadda) ರಾಜ್ಯಕ್ಕೆ ಬಂದು ಹೋಗಿದ್ದು, ಈ ಬೆನ್ನಲ್ಲೇ ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಡಿ.29ರಿಂದ 31ರವರೆಗೆ 3 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಮಿತ್ ಶಾ ಡಿ.29ರಂದು ದೆಹಲಿಯಿಂದ (Delhi) ವಿಶೇಷ ವಿಮಾನದಲ್ಲಿ ಹೊರಟು ಅಂದೇ ರಾತ್ರಿ 10 ಗಂಟೆಗೆ ಯಲಹಂಕ ವಾಯುನೆಲೆಗೆ ಬಂದಿಳಿಯಲಿದ್ದಾರೆ.

ಅಮಿತ್​ ಶಾ ಡಿ.29ರಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿ, ಮರುದಿನ ಡಿ.30ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರವರೆಗೆ ಸಮಯ ಕಾಯ್ದಿರಿಸಿದ್ದಾರೆ. ಈ ಅವಧಿಯಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಭೇಟಿಯಾಗು ಸಾಧ್ಯತೆ ಇದೆ. ನಂತರ ಮಂಡ್ಯದ ಬಾಲಕರ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 1.45ರಿಂದ 3.15ರವರೆಗೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ಕಾರ್ಯಕ್ಕೆ ಅಧಿಕೃತ ಬುನಾದಿ ಹಾಕಲಿದ್ದಾರೆ.

ಇದನ್ನೂ ಓದಿ: ಸ್ನೇಹವೋ.. ಅಧಿಕಾರವೋ.. ಆಪ್ತ ಸ್ನೇಹಿತ‌ನ ರೀ ಎಂಟ್ರೀ, ಇಕ್ಕಟ್ಟಿಗೆ ಸಿಲುಕಿದ ಸಚಿವ ಶ್ರೀರಾಮುಲು…!

ಮಧ್ಯಾಹ್ನ 3.30ರಿಂದ ಸಂಜೆ 4.30ಕ್ಕೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಡೇರಿ ಉದ್ಘಾಟಿಸಿ, ಸಂಜೆ 4.50ಕ್ಕೆ ಮಂಡ್ಯದಿಂದ ವಿಮಾನದ ಮೂಲ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಸಂಜೆ 5.20ಕ್ಕೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಅಲ್ಲಿಂದ ಸಂಜೆ 5.45ರಿಂದ 6.45ರವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ಸಹಕಾರ ವಲಯದ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

ರಾತ್ರಿ 8ರಿಂದ 9.30ರವರೆಗೆ ಪಕ್ಷದ ಮುಖಂಡರ ಜತೆ ಸಭೆ ನಡೆಸಲಿದ್ದಾರೆ. ಮರುದಿನ ಡಿ.31ರಂದು ಬೆಳಗ್ಗೆ 8.30ರಿಂದ 9.30ರವರೆಗೆ ರಾಜ್ಯ ನಾಯಕರ ಜೊತೆ ಉಪಾಹಾರ ಸೇವಿಸುತ್ತಾರೆ. ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಆವತಿಯಲ್ಲಿ ಬೆಳಗ್ಗೆ 10.55ಕ್ಕೆ ನೆರವೇರುವ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:  ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಕಿತ್ತಾಟ, ಜಯಘೋಷ

ಬಳಿಕ ಮಧ್ಯಾಹ್ನ 1 ಗಂಟೆಗೆ ಮಲ್ಲೇಶ್ವರಂನಲ್ಲಿ ನಡೆಯುವ ಸೌಹಾರ್ದ ಸಹಕಾರ ಮಂಡಳಿ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3ರಿಂದ 4.30ರವರೆಗೆ ಬೆಂಗಳೂರಿನ ಬಿಜೆಪಿ ಬೂತ್ ಅಧ್ಯಕ್ಷರು, ಬೂತ್ ಏಜೆಂಟರ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಕೊನೆಗೆ ಸಂಜೆ 7.10ಕ್ಕೆ ಯಲಹಂಕ ವಾಯುನೆಲೆಯಿಂದ ನವದೆಹಲಿಗೆ ತೆರಳುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 pm, Tue, 27 December 22

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​