AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ನಮ್ಮ ಮೆಟ್ರೋದ ಬೈಯ್ಯಪ್ಪನಹಳ್ಳಿ-ಕೆಆರ್​ಪುರ ಮಾರ್ಗ ತಪಾಸಣೆ

2 ಕಿ.ಮೀ ಉದ್ದದ ಕೆ.ಆರ್​.ಪುರ-ಬೈಯಪ್ಪನಹಳ್ಳಿ ಮಾರ್ಗ, 1.9 ಕಿಮೀ ಕೆಂಗೇರಿ-ಚಲಘಟ್ಟ ಮಿಸ್ಸಿಂಗ್ ಲಿಂಕ್ ಮಾರ್ಗದ ಸುರಕ್ಷತಾ ತಪಾಸಣೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ಇಂದಿನಿಂದ ನಡೆಸಲಿದ್ದಾರೆ.

ಇಂದಿನಿಂದ ನಮ್ಮ ಮೆಟ್ರೋದ ಬೈಯ್ಯಪ್ಪನಹಳ್ಳಿ-ಕೆಆರ್​ಪುರ ಮಾರ್ಗ ತಪಾಸಣೆ
ನಮ್ಮ ಮೆಟ್ರೋ
Kiran HV
| Edited By: |

Updated on: Sep 13, 2023 | 9:24 AM

Share

ಬೆಂಗಳೂರು ಸೆ.13: ಐಟಿ ಉದ್ಯೋಗಿಗಳ ಬಹುನಿರೀಕ್ಷಿತ ಬೈಯ್ಯಪ್ಪನಹಳ್ಳಿ- ಕೆ.ಆರ್.ಪುರ (Baiyappanahalli- KR Puram), ಕೆಂಗೇರಿ- ಚಲಘಟ್ಟ (Kengeri-Challaghatta) ಮೆಟ್ರೋ ಮಾರ್ಗದ ತಪಾಸಣೆಯನ್ನು ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು (CMRS) ಇಂದು ಸೆ.13 ಮತ್ತು ಸೆ.14 ಎರಡು ದಿನ ನಡೆಸಲಿದ್ದಾರೆ ಎಂದು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ (BMRCL) ತಿಳಿಸಿದೆ. ಎರಡು ಕಿ.ಮೀ ಉದ್ದದ ಕೆ.ಆರ್​.ಪುರ-ಬೈಯಪ್ಪನಹಳ್ಳಿ ಮಾರ್ಗ, 1.9 ಕಿಮೀ ಕೆಂಗೇರಿ-ಚಲಘಟ್ಟ ಮಿಸ್ಸಿಂಗ್ ಲಿಂಕ್ ಮಾರ್ಗದ ಸುರಕ್ಷತಾ ತಪಾಸಣೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆರು ತಿಂಗಳ ಹಿಂದೆ ವೈಟ್​ಫಿಲ್ಡ್​ನ ಕಾಡುಗೋಡಿ-ಕೆಆರ್​ಪುರಂ ಮಾರ್ಗಕ್ಕೆ ಚಾಲನೆ ನೀಡಿದ್ದರು. ಕೆಆರ್​ಪುರ-ಬೈಯಪ್ಪನಹಳ್ಳಿವರೆಗಿನ ಎರಡು ಕಿ.ಮಿ ಮಾರ್ಗ ಪೂರ್ಣಗೊಳ್ಳದ ಹಿನ್ನೆಲೆ ಉದ್ಘಾಟನೆಯಾಗಿರಲಿಲ್ಲ. ಸದ್ಯ ಇಂದಿನ ತಪಾಸಣೆ ಬಳಿಕ ಶೀಘ್ರದಲ್ಲೇ ಮಾರ್ಗ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.

ಇಂದು‌ ಮತ್ತು ನಾಳೆ ಕೇಂದ್ರ ರೈಲ್ವೆ ಸುರಕ್ಷತೆಯ ಹತ್ತು ಅಧಿಕಾರಿಗಳು, ಎರಡು ತಂಡಗಳಾಗಿ ತಪಾಸಣೆ ನಡೆಸಲಿವೆ. ರೈಲಿನ ವೇಗ, ತಿರುವು, ವಿದ್ಯುತ್ ಪ್ರವಹಿಸುವಿಕೆ, ಸಿಗ್ನಲಿಂಗ್, ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಬಗ್ಗೆ ತಪಾಸಣೆ ನಡೆಸಲಿದ್ದಾರೆ. ಬಿಎಂಆರ್​ಸಿಎಲ್​ ಈಗಾಗಲೇ ಸಂಪೂರ್ಣ ಮಾಹಿತಿಯನ್ನು ಕೇಂದ್ರ ತಂಡಕ್ಕೆ ಸಲ್ಲಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಶೇ 95 ರಷ್ಟು ಜನರಿಗೆ ತಮ್ಮ ಸ್ವಂತ ವಾಹನಕ್ಕಿಂತ ನಮ್ಮ ಮೆಟ್ರೋ ಪ್ರಯಾಣವೇ ಅಚ್ಚುಮೆಚ್ಚು

ನೇರಳೆ ಮಾರ್ಗದ ಕೆ.ಆರ್. ಪುರ ಹಾಗೂ ವೈಟ್‌ ಫೀಲ್ಡ್ ನಡುವಣ 13.71 ಕಿ.ಮೀ. ಮೆಟ್ರೋ ಉದ್ಘಾಟನೆಯಾಗಿ ಆರು ತಿಂಗಳ ಬಳಿಕ ಬೈಯಪ್ಪನಹಳ್ಳಿ-ಕೆ.ಆರ್​.ಪುರ ನಡುವಿನ ಕಾಮಗಾರಿ ಮುಗಿದಿದೆ. ಜೊತೆಗೆ ಕೆಂಗೇರಿ-ಚಲ್ಲಘಟ್ಟದ ನಡುವಿನ ಕಾಮಗಾರಿ ಮುಗಿದಿರುವ ಕಾರಣ ಏಕಕಾಲಕ್ಕೆ ಎರಡೂ ವಿಸ್ತರಿತ ಮಾರ್ಗವನ್ನು ಜನ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್​ಸಿಎಲ್ ನಿರ್ಧರಿಸಿದೆ.

ಸಂಪೂರ್ಣ 43ಕಿಮೀ ನೇರಳೆ ಮಾರ್ಗ ತೆರೆದುಕೊಳ್ಳಲಿರುವ ಕಾರಣದಿಂದ ರೈಲುಗಳ ಸಮಯ, ಸಿಗ್ನಲಿಂಗ್ ವ್ಯವಸ್ಥೆ ಸೇರಿದಂತೆ ಹಲವು ಮಾಹಿತಿಗಳನ್ನು ಅಧಿಕಾರಿಗಳಿಂದ ಪಡೆದುಕೊಳ್ಳಲಿದ್ದಾರೆ. ಇದಾದ ಬಳಿಕ ಕೆಂಗೇರಿ-ಚಲ್ಲಘಟ್ಟದ ಮಾರ್ಗವನ್ನು ಪರಿಶೀಲಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ