AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ನಮ್ಮ ಮೆಟ್ರೋದ ಬೈಯ್ಯಪ್ಪನಹಳ್ಳಿ-ಕೆಆರ್​ಪುರ ಮಾರ್ಗ ತಪಾಸಣೆ

2 ಕಿ.ಮೀ ಉದ್ದದ ಕೆ.ಆರ್​.ಪುರ-ಬೈಯಪ್ಪನಹಳ್ಳಿ ಮಾರ್ಗ, 1.9 ಕಿಮೀ ಕೆಂಗೇರಿ-ಚಲಘಟ್ಟ ಮಿಸ್ಸಿಂಗ್ ಲಿಂಕ್ ಮಾರ್ಗದ ಸುರಕ್ಷತಾ ತಪಾಸಣೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ಇಂದಿನಿಂದ ನಡೆಸಲಿದ್ದಾರೆ.

ಇಂದಿನಿಂದ ನಮ್ಮ ಮೆಟ್ರೋದ ಬೈಯ್ಯಪ್ಪನಹಳ್ಳಿ-ಕೆಆರ್​ಪುರ ಮಾರ್ಗ ತಪಾಸಣೆ
ನಮ್ಮ ಮೆಟ್ರೋ
ಕಿರಣ ಹೆಚ್​. ವಿ.
| Edited By: ವಿವೇಕ ಬಿರಾದಾರ|

Updated on: Sep 13, 2023 | 9:24 AM

Share

ಬೆಂಗಳೂರು ಸೆ.13: ಐಟಿ ಉದ್ಯೋಗಿಗಳ ಬಹುನಿರೀಕ್ಷಿತ ಬೈಯ್ಯಪ್ಪನಹಳ್ಳಿ- ಕೆ.ಆರ್.ಪುರ (Baiyappanahalli- KR Puram), ಕೆಂಗೇರಿ- ಚಲಘಟ್ಟ (Kengeri-Challaghatta) ಮೆಟ್ರೋ ಮಾರ್ಗದ ತಪಾಸಣೆಯನ್ನು ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು (CMRS) ಇಂದು ಸೆ.13 ಮತ್ತು ಸೆ.14 ಎರಡು ದಿನ ನಡೆಸಲಿದ್ದಾರೆ ಎಂದು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ (BMRCL) ತಿಳಿಸಿದೆ. ಎರಡು ಕಿ.ಮೀ ಉದ್ದದ ಕೆ.ಆರ್​.ಪುರ-ಬೈಯಪ್ಪನಹಳ್ಳಿ ಮಾರ್ಗ, 1.9 ಕಿಮೀ ಕೆಂಗೇರಿ-ಚಲಘಟ್ಟ ಮಿಸ್ಸಿಂಗ್ ಲಿಂಕ್ ಮಾರ್ಗದ ಸುರಕ್ಷತಾ ತಪಾಸಣೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆರು ತಿಂಗಳ ಹಿಂದೆ ವೈಟ್​ಫಿಲ್ಡ್​ನ ಕಾಡುಗೋಡಿ-ಕೆಆರ್​ಪುರಂ ಮಾರ್ಗಕ್ಕೆ ಚಾಲನೆ ನೀಡಿದ್ದರು. ಕೆಆರ್​ಪುರ-ಬೈಯಪ್ಪನಹಳ್ಳಿವರೆಗಿನ ಎರಡು ಕಿ.ಮಿ ಮಾರ್ಗ ಪೂರ್ಣಗೊಳ್ಳದ ಹಿನ್ನೆಲೆ ಉದ್ಘಾಟನೆಯಾಗಿರಲಿಲ್ಲ. ಸದ್ಯ ಇಂದಿನ ತಪಾಸಣೆ ಬಳಿಕ ಶೀಘ್ರದಲ್ಲೇ ಮಾರ್ಗ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.

ಇಂದು‌ ಮತ್ತು ನಾಳೆ ಕೇಂದ್ರ ರೈಲ್ವೆ ಸುರಕ್ಷತೆಯ ಹತ್ತು ಅಧಿಕಾರಿಗಳು, ಎರಡು ತಂಡಗಳಾಗಿ ತಪಾಸಣೆ ನಡೆಸಲಿವೆ. ರೈಲಿನ ವೇಗ, ತಿರುವು, ವಿದ್ಯುತ್ ಪ್ರವಹಿಸುವಿಕೆ, ಸಿಗ್ನಲಿಂಗ್, ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಬಗ್ಗೆ ತಪಾಸಣೆ ನಡೆಸಲಿದ್ದಾರೆ. ಬಿಎಂಆರ್​ಸಿಎಲ್​ ಈಗಾಗಲೇ ಸಂಪೂರ್ಣ ಮಾಹಿತಿಯನ್ನು ಕೇಂದ್ರ ತಂಡಕ್ಕೆ ಸಲ್ಲಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಶೇ 95 ರಷ್ಟು ಜನರಿಗೆ ತಮ್ಮ ಸ್ವಂತ ವಾಹನಕ್ಕಿಂತ ನಮ್ಮ ಮೆಟ್ರೋ ಪ್ರಯಾಣವೇ ಅಚ್ಚುಮೆಚ್ಚು

ನೇರಳೆ ಮಾರ್ಗದ ಕೆ.ಆರ್. ಪುರ ಹಾಗೂ ವೈಟ್‌ ಫೀಲ್ಡ್ ನಡುವಣ 13.71 ಕಿ.ಮೀ. ಮೆಟ್ರೋ ಉದ್ಘಾಟನೆಯಾಗಿ ಆರು ತಿಂಗಳ ಬಳಿಕ ಬೈಯಪ್ಪನಹಳ್ಳಿ-ಕೆ.ಆರ್​.ಪುರ ನಡುವಿನ ಕಾಮಗಾರಿ ಮುಗಿದಿದೆ. ಜೊತೆಗೆ ಕೆಂಗೇರಿ-ಚಲ್ಲಘಟ್ಟದ ನಡುವಿನ ಕಾಮಗಾರಿ ಮುಗಿದಿರುವ ಕಾರಣ ಏಕಕಾಲಕ್ಕೆ ಎರಡೂ ವಿಸ್ತರಿತ ಮಾರ್ಗವನ್ನು ಜನ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್​ಸಿಎಲ್ ನಿರ್ಧರಿಸಿದೆ.

ಸಂಪೂರ್ಣ 43ಕಿಮೀ ನೇರಳೆ ಮಾರ್ಗ ತೆರೆದುಕೊಳ್ಳಲಿರುವ ಕಾರಣದಿಂದ ರೈಲುಗಳ ಸಮಯ, ಸಿಗ್ನಲಿಂಗ್ ವ್ಯವಸ್ಥೆ ಸೇರಿದಂತೆ ಹಲವು ಮಾಹಿತಿಗಳನ್ನು ಅಧಿಕಾರಿಗಳಿಂದ ಪಡೆದುಕೊಳ್ಳಲಿದ್ದಾರೆ. ಇದಾದ ಬಳಿಕ ಕೆಂಗೇರಿ-ಚಲ್ಲಘಟ್ಟದ ಮಾರ್ಗವನ್ನು ಪರಿಶೀಲಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್