AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ನಮ್ಮ ಮೆಟ್ರೋದ ಬೈಯ್ಯಪ್ಪನಹಳ್ಳಿ-ಕೆಆರ್​ಪುರ ಮಾರ್ಗ ತಪಾಸಣೆ

2 ಕಿ.ಮೀ ಉದ್ದದ ಕೆ.ಆರ್​.ಪುರ-ಬೈಯಪ್ಪನಹಳ್ಳಿ ಮಾರ್ಗ, 1.9 ಕಿಮೀ ಕೆಂಗೇರಿ-ಚಲಘಟ್ಟ ಮಿಸ್ಸಿಂಗ್ ಲಿಂಕ್ ಮಾರ್ಗದ ಸುರಕ್ಷತಾ ತಪಾಸಣೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ಇಂದಿನಿಂದ ನಡೆಸಲಿದ್ದಾರೆ.

ಇಂದಿನಿಂದ ನಮ್ಮ ಮೆಟ್ರೋದ ಬೈಯ್ಯಪ್ಪನಹಳ್ಳಿ-ಕೆಆರ್​ಪುರ ಮಾರ್ಗ ತಪಾಸಣೆ
ನಮ್ಮ ಮೆಟ್ರೋ
Follow us
Kiran HV
| Updated By: ವಿವೇಕ ಬಿರಾದಾರ

Updated on: Sep 13, 2023 | 9:24 AM

ಬೆಂಗಳೂರು ಸೆ.13: ಐಟಿ ಉದ್ಯೋಗಿಗಳ ಬಹುನಿರೀಕ್ಷಿತ ಬೈಯ್ಯಪ್ಪನಹಳ್ಳಿ- ಕೆ.ಆರ್.ಪುರ (Baiyappanahalli- KR Puram), ಕೆಂಗೇರಿ- ಚಲಘಟ್ಟ (Kengeri-Challaghatta) ಮೆಟ್ರೋ ಮಾರ್ಗದ ತಪಾಸಣೆಯನ್ನು ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು (CMRS) ಇಂದು ಸೆ.13 ಮತ್ತು ಸೆ.14 ಎರಡು ದಿನ ನಡೆಸಲಿದ್ದಾರೆ ಎಂದು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ (BMRCL) ತಿಳಿಸಿದೆ. ಎರಡು ಕಿ.ಮೀ ಉದ್ದದ ಕೆ.ಆರ್​.ಪುರ-ಬೈಯಪ್ಪನಹಳ್ಳಿ ಮಾರ್ಗ, 1.9 ಕಿಮೀ ಕೆಂಗೇರಿ-ಚಲಘಟ್ಟ ಮಿಸ್ಸಿಂಗ್ ಲಿಂಕ್ ಮಾರ್ಗದ ಸುರಕ್ಷತಾ ತಪಾಸಣೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆರು ತಿಂಗಳ ಹಿಂದೆ ವೈಟ್​ಫಿಲ್ಡ್​ನ ಕಾಡುಗೋಡಿ-ಕೆಆರ್​ಪುರಂ ಮಾರ್ಗಕ್ಕೆ ಚಾಲನೆ ನೀಡಿದ್ದರು. ಕೆಆರ್​ಪುರ-ಬೈಯಪ್ಪನಹಳ್ಳಿವರೆಗಿನ ಎರಡು ಕಿ.ಮಿ ಮಾರ್ಗ ಪೂರ್ಣಗೊಳ್ಳದ ಹಿನ್ನೆಲೆ ಉದ್ಘಾಟನೆಯಾಗಿರಲಿಲ್ಲ. ಸದ್ಯ ಇಂದಿನ ತಪಾಸಣೆ ಬಳಿಕ ಶೀಘ್ರದಲ್ಲೇ ಮಾರ್ಗ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.

ಇಂದು‌ ಮತ್ತು ನಾಳೆ ಕೇಂದ್ರ ರೈಲ್ವೆ ಸುರಕ್ಷತೆಯ ಹತ್ತು ಅಧಿಕಾರಿಗಳು, ಎರಡು ತಂಡಗಳಾಗಿ ತಪಾಸಣೆ ನಡೆಸಲಿವೆ. ರೈಲಿನ ವೇಗ, ತಿರುವು, ವಿದ್ಯುತ್ ಪ್ರವಹಿಸುವಿಕೆ, ಸಿಗ್ನಲಿಂಗ್, ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಬಗ್ಗೆ ತಪಾಸಣೆ ನಡೆಸಲಿದ್ದಾರೆ. ಬಿಎಂಆರ್​ಸಿಎಲ್​ ಈಗಾಗಲೇ ಸಂಪೂರ್ಣ ಮಾಹಿತಿಯನ್ನು ಕೇಂದ್ರ ತಂಡಕ್ಕೆ ಸಲ್ಲಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಶೇ 95 ರಷ್ಟು ಜನರಿಗೆ ತಮ್ಮ ಸ್ವಂತ ವಾಹನಕ್ಕಿಂತ ನಮ್ಮ ಮೆಟ್ರೋ ಪ್ರಯಾಣವೇ ಅಚ್ಚುಮೆಚ್ಚು

ನೇರಳೆ ಮಾರ್ಗದ ಕೆ.ಆರ್. ಪುರ ಹಾಗೂ ವೈಟ್‌ ಫೀಲ್ಡ್ ನಡುವಣ 13.71 ಕಿ.ಮೀ. ಮೆಟ್ರೋ ಉದ್ಘಾಟನೆಯಾಗಿ ಆರು ತಿಂಗಳ ಬಳಿಕ ಬೈಯಪ್ಪನಹಳ್ಳಿ-ಕೆ.ಆರ್​.ಪುರ ನಡುವಿನ ಕಾಮಗಾರಿ ಮುಗಿದಿದೆ. ಜೊತೆಗೆ ಕೆಂಗೇರಿ-ಚಲ್ಲಘಟ್ಟದ ನಡುವಿನ ಕಾಮಗಾರಿ ಮುಗಿದಿರುವ ಕಾರಣ ಏಕಕಾಲಕ್ಕೆ ಎರಡೂ ವಿಸ್ತರಿತ ಮಾರ್ಗವನ್ನು ಜನ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್​ಸಿಎಲ್ ನಿರ್ಧರಿಸಿದೆ.

ಸಂಪೂರ್ಣ 43ಕಿಮೀ ನೇರಳೆ ಮಾರ್ಗ ತೆರೆದುಕೊಳ್ಳಲಿರುವ ಕಾರಣದಿಂದ ರೈಲುಗಳ ಸಮಯ, ಸಿಗ್ನಲಿಂಗ್ ವ್ಯವಸ್ಥೆ ಸೇರಿದಂತೆ ಹಲವು ಮಾಹಿತಿಗಳನ್ನು ಅಧಿಕಾರಿಗಳಿಂದ ಪಡೆದುಕೊಳ್ಳಲಿದ್ದಾರೆ. ಇದಾದ ಬಳಿಕ ಕೆಂಗೇರಿ-ಚಲ್ಲಘಟ್ಟದ ಮಾರ್ಗವನ್ನು ಪರಿಶೀಲಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ