AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬೆಂಗಳೂರು ನಗರ ಡಿಸಿಗೆ ಪತ್ರ ಬರೆದಿದೆ. ಜನಿವಾರ ತೆಗೆಯದಂತೆ ಸೂಚಿಸಿದ್ದರೂ ಘಟನೆ ನಡೆದಿರುವುದು ಉದ್ದೇಶಪೂರ್ವಕ ಎಂದು KEA ಶಂಕಿಸಿದೆ. ಈ ನಡುವೆ ಆರೋಪ ಸಂಬಂಧ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು
ಡಿಸಿಗೆ KEA ಬರೆದ ಪತ್ರImage Credit source: Tv9 Kannada
ವಿನಯ್​ ಕಾಶಪ್ಪನವರ್​
| Edited By: |

Updated on:Apr 24, 2026 | 4:03 PM

Share

ಬೆಂಗಳೂರು, ಏಪ್ರಿಲ್​​ 24: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ. ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ, ಆರ್​.ಸರಿತಾ ಸಸ್ಪೆಂಡ್​ ಆಗಿದ್ದಾರೆ. ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಡಿಸಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಪತ್ರ ಬರೆಯಲಾಗಿತ್ತು. ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದ್ರೂ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದ್ರೂ ಜನಿವಾರ ತೆಗೆಸಿದ್ದು ಉದ್ದೇಶಪೂರ್ವಕ ಘಟನೆಯಂತೆ ಕಂಡಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಕ್ರಮವಹಿಸಿದ ವಿವರ ನೀಡುವಂತೆ ಪತ್ರ ಮುಖೇನೆ KEA ಆಗ್ರಹಿಸಿತ್ತು.

2026ನೇ ಸಾಲಿನ ಸಿಇಟಿ ಪರೀಕ್ಷೆ ವೇಳೆ ಬೆಂಗಳೂರು ಕೇಂದ್ರದಲ್ಲಿ ಏಪ್ರಿಲ್​​ 23ರ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಕೆಲವು ಅಭ್ಯರ್ಥಿಗಳ ಜನಿವಾರವನ್ನು ತೆಗೆಸಲು ಅಲ್ಲಿಯ ಸಿಬ್ಬಂದಿಗಳು ಸೂಚಿಸಿರುತ್ತಾರೆಂದು, ನಂತರ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿರುತ್ತಾರೆ ಎಂದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ ಸಂಹಿತೆಯ ಬಗ್ಗೆ ವಿವರಿಸಿದೆ. ಕಳೆದ ವರ್ಷದಲ್ಲಿ ನಡೆದ ಇದೇ ತರಹದ ಘಟನೆ ಉಲ್ಲೇಖಿಸಿ ಜನಿವಾರ, ಲಿಂಗ ಇತ್ಯಾದಿ ಧಾರ್ಮಿಕ ದಿರಿಸುಗಳನ್ನು ತೆಗೆಯಬಾರದೆಂದು ಸ್ಪಷ್ಟವಾಗಿ ತರಬೇತಿಯಲ್ಲಿ ತಿಳಿಸಲಾಗಿದೆ. ಆದರೂ ಇಂತಹ ಘಟನೆ ನಡೆದಿದ್ದರೆ ಯಾರೋ ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹೀಗಾಗಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಿ ನಿಯಮಾನುಸಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಪೂರ್ಣ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಡಿಸಿಗೆ ಬರೆದ ಪತ್ರದಲ್ಲಿ KEA ಆಗ್ರಹಿಸಿತ್ತು.

ಇದನ್ನೂ ಓದಿ: ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ; ಸಿಇಟಿ ಪರೀಕ್ಷೆಯೊಂದಿಗೇ ಮತ್ತೆ ಶುರುವಾಯ್ತು ವಿವಾದ

ಜನಿವಾರ ತೆಗೆಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಅಶೋಕ್​​

ಸಿಇಟಿ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಸಂಬಂಧ ಎಕ್ಸ್ ಮೂಲಕ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಸರ್ಕಾರದಿಂದ ಮಾಂಗಲ್ಯ, ಜನಿವಾರ ತೆಗೆಸುವ ಹಿಂದೂ ವಿರೋಧಿ ಕೃತ್ಯಗಳು ನಡೆಯುತ್ತಿವೆ. ಕಾಂಗ್ರೆಸ್‌ ಸರ್ಕಾರ ಈ ವರ್ಷವೂ ತನ್ನ ಹಳೆಯ ಚಾಳಿ ಮುಂದುವರಿಸಿದೆ. ಬೆಂಗಳೂರಿನ ಕೋರಮಂಗಲದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿ ಪರೀಕ್ಷೆ ಬರೆಯುವಂತೆ ಒತ್ತಾಯಿಸುವ ಮೂಲಕ ಮತ್ತೊಮ್ಮೆ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದಿದೆ. ಹಿಂದೆ KPSC ಪರೀಕ್ಷೆ ವೇಳೆ ಮಹಿಳೆಯೊಬ್ಬರ ಮಾಂಗಲ್ಯ ಸರ ತೆಗೆಸಿದ್ದರು ಎಂದು ಕಿಡಿ ಕಾರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:48 pm, Fri, 24 April 26

Follow Us
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ