AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCET: ಸಿಇಟಿ ರ್‍ಯಾಂಕ್ ಪಟ್ಟಿ ಸಮಸ್ಯೆ; ಮತ್ತೊಮ್ಮೆ ಫಲಿತಾಂಶ ಪ್ರಕಟಿಸಲು KEA ನಿರ್ಧಾರ

ಸಿಬಿಎಸ್​ಸಿ ಹಾಗೂ ಐಸಿಎಸ್​ಸಿ ರಿಪಿಟರ್ಸ್​ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಧಿಕಾರ ಮತ್ತೆ ಪ್ರಕಟಿಸಲಿದೆ. ರ್‍ಯಾಂಕ್ ಪಟ್ಟಿಯೂ ಮತ್ತೊಮ್ಮೆ ಅಪ್​ಡೇಟ್ ಆಗಲಿದೆ.

KCET: ಸಿಇಟಿ ರ್‍ಯಾಂಕ್ ಪಟ್ಟಿ ಸಮಸ್ಯೆ; ಮತ್ತೊಮ್ಮೆ ಫಲಿತಾಂಶ ಪ್ರಕಟಿಸಲು KEA ನಿರ್ಧಾರ
ಸಿಇಟಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದರು.
TV9 Web
| Edited By: |

Updated on:Aug 01, 2022 | 2:13 PM

Share

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Education Authority – KEA) ಮತ್ತೊಮ್ಮೆ ಸಾಮಾನ್ಯ ಪ್ರವೇಶ ಪರೀಕ್ಷೆಯ (Common Entrance Test – CET) ಫಲಿತಾಂಶವನ್ನು ಮತ್ತೊಮ್ಮೆ ಪ್ರಕಟಿಸಲು ನಿರ್ಧರಿಸಿದೆ. ಸಿಬಿಎಸ್​ಸಿ ಹಾಗೂ ಐಸಿಎಸ್​ಸಿ ರಿಪಿಟರ್ಸ್​ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಧಿಕಾರ ಮತ್ತೆ ಪ್ರಕಟಿಸಲಿದೆ. ರ್‍ಯಾಂಕ್ ಪಟ್ಟಿಯೂ ಮತ್ತೊಮ್ಮೆ ಅಪ್​ಡೇಟ್ ಆಗಲಿದೆ. ರ್‍ಯಾಂಕ್ ಪಟ್ಟಿ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ ಕುರಿತು ಪ್ರತಿಕ್ರಿಯಿಸಿದ್ದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ರ್‍ಯಾಂಕ್ ಪಟ್ಟಿ ನೀಡುವಾಗ ರಿಪೀಟರ್ಸ್​ ಪಡೆದ ಅಂಕಗಳನ್ನು ಪರಿಗಣಿಸುವುದಿಲ್ಲ ಎಂದು ಹೇಳಿದ್ದರು.

ಆದರೆ ವಿದ್ಯಾರ್ಥಿಗಳು ಹಾಗೂ ಪೋಷಕರು ರಿಪಿಟರ್ಸ್​ ಪಡೆದ ಅಂಕಗಳನ್ನೂ ಪರಿಗಣಿಸಬೇಕೆಂದು ಒತ್ತಾಯಿಸಿದ್ದರು. ಒತ್ತಾಯದ ಕುರಿತು ಪ್ರತಿಕ್ರಿಯಿಸಿದ್ದ ಅವರು, ಈ ಬಗ್ಗೆ ಸಾಕಷ್ಟು ಅರ್ಜಿಗಳು ಈಗಾಗಲೇ ಬಂದಿವೆ. ಉನ್ನತ ಶಿಕ್ಷಣ ಸಚಿವರು ಸಹ ಪರಿಗಣಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಪರಿಶೀಲನೆಗೆ ಮುಂದಾಗಿದ್ದೇವೆ. ಇಂದು ಮಧ್ಯಾಹ್ನ 1 ಘಂಟೆಗೆ ಪರಿಷ್ಕೃತ ಸಿಇಟಿ ರ್‍ಯಾಂಕ್ ಪಟ್ಟಿಯು ವೆಬ್​ಸೈಟ್​ನಲ್ಲಿ ಅಪ್​ಡೇಟ್ ಆಗಲಿದೆ. ನಿಯಮದ ಪ್ರಕಾರ ಈಗ ಬಂದಿರುವ ಅರ್ಜಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ತಿಳಿಸಿದ್ದರು.

ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರ ಮನವೊಲಿಸಲು ಯತ್ನಿಸಿದ ಪೊಲೀಸರು, ಇಲ್ಲಿ ಪ್ರತಿಭಟನೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಪ್ರತಿಭಟನೆ ಮಾಡಬೇಕಾಗಿದ್ದರೆ ಫ್ರೀಡಂ ಪಾರ್ಕ್​ಗೆ ಹೋಗಿ. ಇಲ್ಲದಿದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸಿ ಎಂದು ಸೂಚನೆ ನೀಡಿದರು. ಪೊಲೀಸರ ಮಾತು ಒಪ್ಪದ ವಿದ್ಯಾರ್ಥಿಗಳು ಹಾಗೂ ಪೋಷಕರು ಸ್ಥಳಕ್ಕೆ ಅಶ್ವತ್ಥ ನಾರಾಯಣ್ ಬರಬೇಕು ಎಂದು ಆಗ್ರಹಿಸಿದರು.

ಸಿಇಟಿ ಅಂಕದ ಜತೆ ಪಿಯು ಅಂಕ ಸೇರಿಸದೆ ಅನ್ಯಾಯ ಮಾಡಲಾಗಿದೆ ಎಂದು ಮಲ್ಲೇಶ್ವರಂ ಬಳಿ ಇರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿ ಮುಂದೆ ಸಿಇಟಿ (CET) ರಿಪೀಟರ್ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ಮಾಡಿದರು. ಕಳೆದ ಬಾರಿ ಕೊವಿಡ್ ಹಿನ್ನೆಲೆ ಪಿಯು ಪರೀಕ್ಷೆ ರದ್ದಾಗಿತ್ತು. ಆಗ ಕೇವಲ ಸಿಇಟಿ ಅಂಕ ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗಿತ್ತು. ಈ ವರ್ಷ ಸಿಇಟಿ ಜತೆ ಪಿಯು ಅಂಕವನ್ನು ಪರಿಗಣಿಸಲಾಗಿದೆ. ಅದೇ ರೀತಿ ನಮಗೂ ಸಿಇಟಿ, ಪಿಯು ಅಂಕ ಪರಿಗಣಿಸುವಂತೆ ಕೆಇಎ ಬೋರ್ಡ್​ಗೆ ರಿಪೀಟರ್​ ವಿದ್ಯಾರ್ಥಿಗಳು, ಪೋಷಕರಿಂದ ಆಗ್ರಹಿಸಿದರು.

ಕಳೆದ ಬಾರಿ 90 ಅಂಕ ಪಡೆದವರಿಗೂ 15000 ಒಳಗೆ ರ‍್ಯಾಂಕ್ ದೊರೆತಿತ್ತು. ಆದರೆ ಈ ಬಾರಿ 98 ಅಂಕ ಪಡೆದಿದ್ದರು ಸಹ 1 ಲಕ್ಷದ ಮೇಲೆ ರ‍್ಯಾಂಕಿಂಗ್ ದೊರೆತಿದೆ. ಈ ಸಮಸ್ಯೆ ಬಗೆಹರಿಸುವಂತೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದು, ಕೆಇಎ ಮುಂದೆ ಪೋಷಕರು ಹಾಗೂ ರಿಪೀಟರ್ ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದಾರೆ.

Published On - 2:13 pm, Mon, 1 August 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ