AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCET: ಸಿಇಟಿ ರ್‍ಯಾಂಕ್ ಪಟ್ಟಿ ಸಮಸ್ಯೆ; ಮತ್ತೊಮ್ಮೆ ಫಲಿತಾಂಶ ಪ್ರಕಟಿಸಲು KEA ನಿರ್ಧಾರ

ಸಿಬಿಎಸ್​ಸಿ ಹಾಗೂ ಐಸಿಎಸ್​ಸಿ ರಿಪಿಟರ್ಸ್​ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಧಿಕಾರ ಮತ್ತೆ ಪ್ರಕಟಿಸಲಿದೆ. ರ್‍ಯಾಂಕ್ ಪಟ್ಟಿಯೂ ಮತ್ತೊಮ್ಮೆ ಅಪ್​ಡೇಟ್ ಆಗಲಿದೆ.

KCET: ಸಿಇಟಿ ರ್‍ಯಾಂಕ್ ಪಟ್ಟಿ ಸಮಸ್ಯೆ; ಮತ್ತೊಮ್ಮೆ ಫಲಿತಾಂಶ ಪ್ರಕಟಿಸಲು KEA ನಿರ್ಧಾರ
ಸಿಇಟಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 01, 2022 | 2:13 PM

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Education Authority – KEA) ಮತ್ತೊಮ್ಮೆ ಸಾಮಾನ್ಯ ಪ್ರವೇಶ ಪರೀಕ್ಷೆಯ (Common Entrance Test – CET) ಫಲಿತಾಂಶವನ್ನು ಮತ್ತೊಮ್ಮೆ ಪ್ರಕಟಿಸಲು ನಿರ್ಧರಿಸಿದೆ. ಸಿಬಿಎಸ್​ಸಿ ಹಾಗೂ ಐಸಿಎಸ್​ಸಿ ರಿಪಿಟರ್ಸ್​ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಧಿಕಾರ ಮತ್ತೆ ಪ್ರಕಟಿಸಲಿದೆ. ರ್‍ಯಾಂಕ್ ಪಟ್ಟಿಯೂ ಮತ್ತೊಮ್ಮೆ ಅಪ್​ಡೇಟ್ ಆಗಲಿದೆ. ರ್‍ಯಾಂಕ್ ಪಟ್ಟಿ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ ಕುರಿತು ಪ್ರತಿಕ್ರಿಯಿಸಿದ್ದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ರ್‍ಯಾಂಕ್ ಪಟ್ಟಿ ನೀಡುವಾಗ ರಿಪೀಟರ್ಸ್​ ಪಡೆದ ಅಂಕಗಳನ್ನು ಪರಿಗಣಿಸುವುದಿಲ್ಲ ಎಂದು ಹೇಳಿದ್ದರು.

ಆದರೆ ವಿದ್ಯಾರ್ಥಿಗಳು ಹಾಗೂ ಪೋಷಕರು ರಿಪಿಟರ್ಸ್​ ಪಡೆದ ಅಂಕಗಳನ್ನೂ ಪರಿಗಣಿಸಬೇಕೆಂದು ಒತ್ತಾಯಿಸಿದ್ದರು. ಒತ್ತಾಯದ ಕುರಿತು ಪ್ರತಿಕ್ರಿಯಿಸಿದ್ದ ಅವರು, ಈ ಬಗ್ಗೆ ಸಾಕಷ್ಟು ಅರ್ಜಿಗಳು ಈಗಾಗಲೇ ಬಂದಿವೆ. ಉನ್ನತ ಶಿಕ್ಷಣ ಸಚಿವರು ಸಹ ಪರಿಗಣಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಪರಿಶೀಲನೆಗೆ ಮುಂದಾಗಿದ್ದೇವೆ. ಇಂದು ಮಧ್ಯಾಹ್ನ 1 ಘಂಟೆಗೆ ಪರಿಷ್ಕೃತ ಸಿಇಟಿ ರ್‍ಯಾಂಕ್ ಪಟ್ಟಿಯು ವೆಬ್​ಸೈಟ್​ನಲ್ಲಿ ಅಪ್​ಡೇಟ್ ಆಗಲಿದೆ. ನಿಯಮದ ಪ್ರಕಾರ ಈಗ ಬಂದಿರುವ ಅರ್ಜಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ತಿಳಿಸಿದ್ದರು.

ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರ ಮನವೊಲಿಸಲು ಯತ್ನಿಸಿದ ಪೊಲೀಸರು, ಇಲ್ಲಿ ಪ್ರತಿಭಟನೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಪ್ರತಿಭಟನೆ ಮಾಡಬೇಕಾಗಿದ್ದರೆ ಫ್ರೀಡಂ ಪಾರ್ಕ್​ಗೆ ಹೋಗಿ. ಇಲ್ಲದಿದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸಿ ಎಂದು ಸೂಚನೆ ನೀಡಿದರು. ಪೊಲೀಸರ ಮಾತು ಒಪ್ಪದ ವಿದ್ಯಾರ್ಥಿಗಳು ಹಾಗೂ ಪೋಷಕರು ಸ್ಥಳಕ್ಕೆ ಅಶ್ವತ್ಥ ನಾರಾಯಣ್ ಬರಬೇಕು ಎಂದು ಆಗ್ರಹಿಸಿದರು.

ಸಿಇಟಿ ಅಂಕದ ಜತೆ ಪಿಯು ಅಂಕ ಸೇರಿಸದೆ ಅನ್ಯಾಯ ಮಾಡಲಾಗಿದೆ ಎಂದು ಮಲ್ಲೇಶ್ವರಂ ಬಳಿ ಇರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿ ಮುಂದೆ ಸಿಇಟಿ (CET) ರಿಪೀಟರ್ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ಮಾಡಿದರು. ಕಳೆದ ಬಾರಿ ಕೊವಿಡ್ ಹಿನ್ನೆಲೆ ಪಿಯು ಪರೀಕ್ಷೆ ರದ್ದಾಗಿತ್ತು. ಆಗ ಕೇವಲ ಸಿಇಟಿ ಅಂಕ ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗಿತ್ತು. ಈ ವರ್ಷ ಸಿಇಟಿ ಜತೆ ಪಿಯು ಅಂಕವನ್ನು ಪರಿಗಣಿಸಲಾಗಿದೆ. ಅದೇ ರೀತಿ ನಮಗೂ ಸಿಇಟಿ, ಪಿಯು ಅಂಕ ಪರಿಗಣಿಸುವಂತೆ ಕೆಇಎ ಬೋರ್ಡ್​ಗೆ ರಿಪೀಟರ್​ ವಿದ್ಯಾರ್ಥಿಗಳು, ಪೋಷಕರಿಂದ ಆಗ್ರಹಿಸಿದರು.

ಕಳೆದ ಬಾರಿ 90 ಅಂಕ ಪಡೆದವರಿಗೂ 15000 ಒಳಗೆ ರ‍್ಯಾಂಕ್ ದೊರೆತಿತ್ತು. ಆದರೆ ಈ ಬಾರಿ 98 ಅಂಕ ಪಡೆದಿದ್ದರು ಸಹ 1 ಲಕ್ಷದ ಮೇಲೆ ರ‍್ಯಾಂಕಿಂಗ್ ದೊರೆತಿದೆ. ಈ ಸಮಸ್ಯೆ ಬಗೆಹರಿಸುವಂತೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದು, ಕೆಇಎ ಮುಂದೆ ಪೋಷಕರು ಹಾಗೂ ರಿಪೀಟರ್ ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದಾರೆ.

Published On - 2:13 pm, Mon, 1 August 22

ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ