AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸ್ಕೃತಿಯ ಬಗ್ಗೆ ಮಾತಾಡೋರು ಹೆಣ್ಮಕ್ಕಳ ಮೇಲೆ ಹಲ್ಲೆ ಮಾಡ್ತಿದ್ದಾರೆ: ಸಿಎಫ್​ಐ ಆಕ್ರೋಶ

ಹಿಜಾಬ್ ಧರಿಸುತ್ತಿದ್ದ ಆರು ವಿದ್ಯಾರ್ಥಿಗಳ ಪೈಕಿ ಮೂವರು ಹಿಜಾಬ್ ತೆಗೆಯಲು ಒಪ್ಪಿದ್ದಾರೆ ಎಂಬ ಸಚಿವ ಸುನೀಲ್ ಕುಮಾರ್ ಹೇಳಿಕೆ ಕೂಡ ಹಾಸ್ಯಸ್ಪದ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಹೇಳಿದೆ.

ಸಂಸ್ಕೃತಿಯ ಬಗ್ಗೆ ಮಾತಾಡೋರು ಹೆಣ್ಮಕ್ಕಳ ಮೇಲೆ ಹಲ್ಲೆ ಮಾಡ್ತಿದ್ದಾರೆ: ಸಿಎಫ್​ಐ ಆಕ್ರೋಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 08, 2022 | 5:45 PM

Share

ಬೆಂಗಳೂರು: ಸಂಸ್ಕೃತಿಯ ಬಗ್ಗೆ ಮಾತನಾಡುವವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಸುಳ್ಳು ಹೇಳುತ್ತಿದ್ದಾರೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕರ್ನಾಟಕ ಘಟಕದ ನಾಯಕ ಸರ್ಫರಾಜ್ ಹೇಳಿದರು. ಹಿಜಾಬ್ ಧರಿಸುತ್ತಿದ್ದ ಆರು ವಿದ್ಯಾರ್ಥಿಗಳ ಪೈಕಿ ಮೂವರು ಹಿಜಾಬ್ ತೆಗೆಯಲು ಒಪ್ಪಿದ್ದಾರೆ ಎಂಬ ಸಚಿವ ಸುನೀಲ್ ಕುಮಾರ್ ಹೇಳಿಕೆ ಕೂಡ ಹಾಸ್ಯಸ್ಪದ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸಂವಿಧಾನವನ್ನೇ ಒಪ್ಪದ ಬಿಜೆಪಿ ಸರ್ಕಾರದ ಸಚಿವರು ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪ ಮಾಡಿದರು. ಎಬಿವಿಪಿ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಸರ್ಕಾರವೇ ಕುಮ್ಮಕ್ಕು ಕೊಡುತ್ತಿದೆ ಎಂದು ದೂರಿದರು.

ವಸ್ತ್ರಸಂಹಿತೆಗೆ ನಮ್ಮ ವಿರೋಧ ಇಲ್ಲ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತನ್ನ ನಿಲುವು ಸ್ಪಷ್ಟಪಡಿಸಿದೆ. ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬರುವ ನಿರೀಕ್ಷೆಯಿದೆ. ಒಂದು ವೇಳೆ ವ್ಯತಿರಿಕ್ತ ತೀರ್ಪು ಬಂದರೆ ಮುಂದೆ ಏನು ಮಾಡಬೇಕು ಎನ್ನುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿಎಫ್​ಐ ನಾಯಕರು ಹೇಳಿದರು.

ಶಾಂತಿ ಕಾಪಾಡಲು ಸಚಿವರ ಮನವಿ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದ ಕಾಪಾಡಬೇಕು ಎಂದು ಸಚಿವ ಡಾ.ಅಶ್ವತ್ಥ ನಾರಾಯಣ ರಾಜ್ಯ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು. ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ. ಈ ವಿಚಾರದ ಬಗ್ಗೆ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ತೀರ್ಪಿಗೆ ಸರ್ಕಾರ ಬದ್ಧವಾಗಿರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Hijab Row: ಜೈ ಶ್ರೀರಾಮ್ ಎಂದ ಯುವಕರೆದುರು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಬುರ್ಖಾಧಾರಿ ವಿದ್ಯಾರ್ಥಿನಿ

ಇದನ್ನೂ ಓದಿ: Karnataka Hijab Row: ಇತ್ಯರ್ಥವಾಗದ ವಿವಾದ; ಹಿಜಾಬ್ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್

Follow Us
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ