AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ..ಎಚ್ಚರ..! ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ‘ಚಡ್ಡಿ ಗ್ಯಾಂಗ್’

ಚಡ್ಡಿ ಗ್ಯಾಂಗ್ ಎಂದೇ ಕರೆಯಲಾಗುವ ಕಳ್ಳರ ಗ್ಯಾಂಗ್ ಮತ್ತೆ ಬೆಂಗಳೂರಿನಲ್ಲಿ ತನ್ನ ಹಾವಳಿ ಶುರು ಮಾಡಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ.

ಎಚ್ಚರ..ಎಚ್ಚರ..! ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ‘ಚಡ್ಡಿ ಗ್ಯಾಂಗ್’
ರಾಮ್​, ಮೈಸೂರು
| Edited By: |

Updated on: Jul 14, 2023 | 9:16 AM

Share

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸುತ್ತಮುತ್ತ ಮತ್ತೆ ಚಡ್ಡಿ ಗ್ಯಾಂಗ್(chaddi Gang) ಹಾವಳಿ ಹೆಚ್ಚಾಗಿದೆ. ಈ ಗ್ಯಾಂಗ್ ಕೈಯಲ್ಲಿ ಆಯುಧಗಳನ್ನು ಹಿಡಿದು ಸರ್ಜಾಪುರ ರಸ್ತೆ ಸುತ್ತಮುತ್ತ ಕಳ್ಳತನಕ್ಕಿಳಿದಿದೆ. ಸರ್ಜಾಪುರ ರಸ್ತೆಯ ಗುಟ್ಟಹಳ್ಳಿ, ದೊಡ್ಡ ತಿಮ್ಮಸಂದ್ರದ ವಿಲ್ಲಾಗಳಲ್ಲಿ ರಾತ್ರಿ ವೇಳೆ ಕಳ್ಳತನ ಪ್ರಯತ್ನಿಸಿರುವುದು  ಸಿಸಿ ಟಿವಿ ದೃಶ್ಯದಿಂದ ಬಯಲಿಗೆ ಬಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವಿಲ್ಲಾ, ಅಪಾರ್ಟ್‌ಮೆಂಟ್ ಗಳ ಬಳಿ ಕಳ್ಳತನ ಯತ್ನಿಸುತ್ತಿರುವ ಗ್ಯಾಂಗ್​ನ ಚಲನವಲನ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದು, ಪೊಲೀಸರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ಜಾಲಹಳ್ಳಿ ಅರಣ್ಯ ಅಧಿಕಾರಿಗಳ ಮಿಂಚಿನ ಕಾರ್ಯಚರಣೆ, ಉಡ ಮಾರಾಟಕ್ಕೆ ಬಂದಿದ್ದ ಇಬ್ಬರು ಬಲೆಗೆ

ಯಾರಿಗೂ ಗುರುತು ಸಿಗದಂತೆ ಮುಖಕ್ಕೆ ಕರ್ಚಿಫ್ ಕಟ್ಟಿಕೊಂಡು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಸರ್ಜಾಪುರ ರಸ್ತೆ ಸುತ್ತಮುತ್ತಲಿನ ವಿಲ್ಲಾ, ಅಪಾರ್ಟ್​ಮೆಂಟ್​​​ಗಳ ಬಳಿ ಕಳ್ಳತನಕ್ಕೆ ಯತ್ನಿಸಿರುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ನೋಡಿ ಜನರು ಭಯಭೀತರಾಗಿದ್ದಾರೆ.

ಚಡ್ಡಿ ಗ್ಯಾಂಗ್ ಕರಾಮತ್ತು ವಿಲ್ಲಾ ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಕೈಯಲ್ಲಿ ಹರಿತವಾದ ಆಯುಧಗಳನ್ನಿಟ್ಟುಕೊಂಡು ಓಡಾಡುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆಯೂ ಕೆಲವು ಬಾರಿ ಈ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡಿತ್ತು. ಇನ್ನು ಈ ಬಗ್ಗೆ ಸ್ಥಳೀಯ ನಿವಾಸಿಗಳು ಸರ್ಜಾಪುರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಈ ಚಡ್ಡಿ ಗ್ಯಾಂಗ್ ಎಷ್ಟು ಖತರ್ನಾಕ್ ಅಂದ್ರೆ ಫೀಲ್ಡಿಗೆ ಇಳಿದ್ರೆ ಮುಗೀತು ಶರವೇಗದಲ್ಲಿ ಬಂದು ದೋಚಿ ಪರಾರಿಯಾಗುತ್ತದೆ. ಈ ಬಗ್ಗೆ ಜನರು ಎಚ್ಚರದಿಂದ ಇರುವುದು ಒಳಿತು.

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ