Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ..ಎಚ್ಚರ..! ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ‘ಚಡ್ಡಿ ಗ್ಯಾಂಗ್’

ಚಡ್ಡಿ ಗ್ಯಾಂಗ್ ಎಂದೇ ಕರೆಯಲಾಗುವ ಕಳ್ಳರ ಗ್ಯಾಂಗ್ ಮತ್ತೆ ಬೆಂಗಳೂರಿನಲ್ಲಿ ತನ್ನ ಹಾವಳಿ ಶುರು ಮಾಡಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ.

ಎಚ್ಚರ..ಎಚ್ಚರ..! ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ‘ಚಡ್ಡಿ ಗ್ಯಾಂಗ್’
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on: Jul 14, 2023 | 9:16 AM

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸುತ್ತಮುತ್ತ ಮತ್ತೆ ಚಡ್ಡಿ ಗ್ಯಾಂಗ್(chaddi Gang) ಹಾವಳಿ ಹೆಚ್ಚಾಗಿದೆ. ಈ ಗ್ಯಾಂಗ್ ಕೈಯಲ್ಲಿ ಆಯುಧಗಳನ್ನು ಹಿಡಿದು ಸರ್ಜಾಪುರ ರಸ್ತೆ ಸುತ್ತಮುತ್ತ ಕಳ್ಳತನಕ್ಕಿಳಿದಿದೆ. ಸರ್ಜಾಪುರ ರಸ್ತೆಯ ಗುಟ್ಟಹಳ್ಳಿ, ದೊಡ್ಡ ತಿಮ್ಮಸಂದ್ರದ ವಿಲ್ಲಾಗಳಲ್ಲಿ ರಾತ್ರಿ ವೇಳೆ ಕಳ್ಳತನ ಪ್ರಯತ್ನಿಸಿರುವುದು  ಸಿಸಿ ಟಿವಿ ದೃಶ್ಯದಿಂದ ಬಯಲಿಗೆ ಬಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವಿಲ್ಲಾ, ಅಪಾರ್ಟ್‌ಮೆಂಟ್ ಗಳ ಬಳಿ ಕಳ್ಳತನ ಯತ್ನಿಸುತ್ತಿರುವ ಗ್ಯಾಂಗ್​ನ ಚಲನವಲನ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದು, ಪೊಲೀಸರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ಜಾಲಹಳ್ಳಿ ಅರಣ್ಯ ಅಧಿಕಾರಿಗಳ ಮಿಂಚಿನ ಕಾರ್ಯಚರಣೆ, ಉಡ ಮಾರಾಟಕ್ಕೆ ಬಂದಿದ್ದ ಇಬ್ಬರು ಬಲೆಗೆ

ಯಾರಿಗೂ ಗುರುತು ಸಿಗದಂತೆ ಮುಖಕ್ಕೆ ಕರ್ಚಿಫ್ ಕಟ್ಟಿಕೊಂಡು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಸರ್ಜಾಪುರ ರಸ್ತೆ ಸುತ್ತಮುತ್ತಲಿನ ವಿಲ್ಲಾ, ಅಪಾರ್ಟ್​ಮೆಂಟ್​​​ಗಳ ಬಳಿ ಕಳ್ಳತನಕ್ಕೆ ಯತ್ನಿಸಿರುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ನೋಡಿ ಜನರು ಭಯಭೀತರಾಗಿದ್ದಾರೆ.

ಚಡ್ಡಿ ಗ್ಯಾಂಗ್ ಕರಾಮತ್ತು ವಿಲ್ಲಾ ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಕೈಯಲ್ಲಿ ಹರಿತವಾದ ಆಯುಧಗಳನ್ನಿಟ್ಟುಕೊಂಡು ಓಡಾಡುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆಯೂ ಕೆಲವು ಬಾರಿ ಈ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡಿತ್ತು. ಇನ್ನು ಈ ಬಗ್ಗೆ ಸ್ಥಳೀಯ ನಿವಾಸಿಗಳು ಸರ್ಜಾಪುರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಈ ಚಡ್ಡಿ ಗ್ಯಾಂಗ್ ಎಷ್ಟು ಖತರ್ನಾಕ್ ಅಂದ್ರೆ ಫೀಲ್ಡಿಗೆ ಇಳಿದ್ರೆ ಮುಗೀತು ಶರವೇಗದಲ್ಲಿ ಬಂದು ದೋಚಿ ಪರಾರಿಯಾಗುತ್ತದೆ. ಈ ಬಗ್ಗೆ ಜನರು ಎಚ್ಚರದಿಂದ ಇರುವುದು ಒಳಿತು.

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ