AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ..ಎಚ್ಚರ..! ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ‘ಚಡ್ಡಿ ಗ್ಯಾಂಗ್’

ಚಡ್ಡಿ ಗ್ಯಾಂಗ್ ಎಂದೇ ಕರೆಯಲಾಗುವ ಕಳ್ಳರ ಗ್ಯಾಂಗ್ ಮತ್ತೆ ಬೆಂಗಳೂರಿನಲ್ಲಿ ತನ್ನ ಹಾವಳಿ ಶುರು ಮಾಡಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ.

ಎಚ್ಚರ..ಎಚ್ಚರ..! ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ‘ಚಡ್ಡಿ ಗ್ಯಾಂಗ್’
ರಾಮ್​, ಮೈಸೂರು
| Edited By: |

Updated on: Jul 14, 2023 | 9:16 AM

Share

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸುತ್ತಮುತ್ತ ಮತ್ತೆ ಚಡ್ಡಿ ಗ್ಯಾಂಗ್(chaddi Gang) ಹಾವಳಿ ಹೆಚ್ಚಾಗಿದೆ. ಈ ಗ್ಯಾಂಗ್ ಕೈಯಲ್ಲಿ ಆಯುಧಗಳನ್ನು ಹಿಡಿದು ಸರ್ಜಾಪುರ ರಸ್ತೆ ಸುತ್ತಮುತ್ತ ಕಳ್ಳತನಕ್ಕಿಳಿದಿದೆ. ಸರ್ಜಾಪುರ ರಸ್ತೆಯ ಗುಟ್ಟಹಳ್ಳಿ, ದೊಡ್ಡ ತಿಮ್ಮಸಂದ್ರದ ವಿಲ್ಲಾಗಳಲ್ಲಿ ರಾತ್ರಿ ವೇಳೆ ಕಳ್ಳತನ ಪ್ರಯತ್ನಿಸಿರುವುದು  ಸಿಸಿ ಟಿವಿ ದೃಶ್ಯದಿಂದ ಬಯಲಿಗೆ ಬಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವಿಲ್ಲಾ, ಅಪಾರ್ಟ್‌ಮೆಂಟ್ ಗಳ ಬಳಿ ಕಳ್ಳತನ ಯತ್ನಿಸುತ್ತಿರುವ ಗ್ಯಾಂಗ್​ನ ಚಲನವಲನ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದು, ಪೊಲೀಸರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ಜಾಲಹಳ್ಳಿ ಅರಣ್ಯ ಅಧಿಕಾರಿಗಳ ಮಿಂಚಿನ ಕಾರ್ಯಚರಣೆ, ಉಡ ಮಾರಾಟಕ್ಕೆ ಬಂದಿದ್ದ ಇಬ್ಬರು ಬಲೆಗೆ

ಯಾರಿಗೂ ಗುರುತು ಸಿಗದಂತೆ ಮುಖಕ್ಕೆ ಕರ್ಚಿಫ್ ಕಟ್ಟಿಕೊಂಡು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಸರ್ಜಾಪುರ ರಸ್ತೆ ಸುತ್ತಮುತ್ತಲಿನ ವಿಲ್ಲಾ, ಅಪಾರ್ಟ್​ಮೆಂಟ್​​​ಗಳ ಬಳಿ ಕಳ್ಳತನಕ್ಕೆ ಯತ್ನಿಸಿರುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ನೋಡಿ ಜನರು ಭಯಭೀತರಾಗಿದ್ದಾರೆ.

ಚಡ್ಡಿ ಗ್ಯಾಂಗ್ ಕರಾಮತ್ತು ವಿಲ್ಲಾ ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಕೈಯಲ್ಲಿ ಹರಿತವಾದ ಆಯುಧಗಳನ್ನಿಟ್ಟುಕೊಂಡು ಓಡಾಡುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆಯೂ ಕೆಲವು ಬಾರಿ ಈ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡಿತ್ತು. ಇನ್ನು ಈ ಬಗ್ಗೆ ಸ್ಥಳೀಯ ನಿವಾಸಿಗಳು ಸರ್ಜಾಪುರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಈ ಚಡ್ಡಿ ಗ್ಯಾಂಗ್ ಎಷ್ಟು ಖತರ್ನಾಕ್ ಅಂದ್ರೆ ಫೀಲ್ಡಿಗೆ ಇಳಿದ್ರೆ ಮುಗೀತು ಶರವೇಗದಲ್ಲಿ ಬಂದು ದೋಚಿ ಪರಾರಿಯಾಗುತ್ತದೆ. ಈ ಬಗ್ಗೆ ಜನರು ಎಚ್ಚರದಿಂದ ಇರುವುದು ಒಳಿತು.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ