Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸರಗಳ್ಳತನ ನಂತರ ಮಲೆ ಮಹದೇಶ್ವರನಿಗೆ ಹರಕೆ ಸಂದಾಯ ಮಾಡಿದ ಆರೋಪಿಗಳು, ಮುಂದೇನಾಯ್ತು?

ಸರಗಳ್ಳತನ ಯಶಸ್ವಿಯಾದರೆ ಮಲೆ ಮಹದೇಶ್ವರನಿಗೆ ಮುಡಿ ಕೊಡುವುದಾಗಿ ಕಳ್ಳರು ಹರಕೆ ಹೊತ್ತಿದ್ದರಂತೆ. ಅದರಂತೆ ಸರ ಕಳ್ಳತನ ಮಾಡಿದ ಕಳ್ಳರು ಬೆಟ್ಟಕ್ಕೆ ಹೋಗಿ ಹರಕೆ ಸಂದಾಯ ಮಾಡಿ ಹೊರಬರುತ್ತಿದ್ದಂತೆ ಆರೋಪಿಗಳನ್ನು ಬೆಂಗಳೂರಿನ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸರಗಳ್ಳತನ ನಂತರ ಮಲೆ ಮಹದೇಶ್ವರನಿಗೆ ಹರಕೆ ಸಂದಾಯ ಮಾಡಿದ ಆರೋಪಿಗಳು, ಮುಂದೇನಾಯ್ತು?
ಸರಗಳ್ಳತನ ಮಾಡಿ ಬಂಧಿತರಾಗಿರುವ ಆರೋಪಿಗಳು
Follow us
Prajwal Kumar NY
| Updated By: Rakesh Nayak Manchi

Updated on: Aug 20, 2023 | 4:19 PM

ಬೆಂಗಳೂರು, ಆಗಸ್ಟ್ 20: ಸರಗಳ್ಳತನ (Chain Snatching) ಮಾಡಿದ ನಂತರ ಹೊತ್ತುಕೊಂಡಿದ್ದ ಹರಕೆಯನ್ನು ಸಂದಾಯ ಮಾಡಲು ಕಳ್ಳರು ಮಲೆ ಮಹದೇಶ್ವರನ ಬೆಟ್ಟಕ್ಕೆ (Male Mahadeshwara Hills) ಹೋಗಿ ಮುಡಿಕೊಟ್ಟು ಮಾದೇಶ್ವರನ ದರ್ಶನ ಪಡೆದು ಹೊರಬರುತ್ತಿದ್ದಂತೆ ಬೆಂಗಳೂರಿನ (Bengaluru) ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ಹಾಗೂ ಯತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಐಶಾರಾಮಿ ಜೀವನ ನಡೆಸಲು ಆರೋಪಿಗಳು ಸರಗಳ್ಳತನಕ್ಕೆ ಇಳಿದಿದ್ದರು. ಅದರಂತೆ ಸರಗಳ್ಳತನ ಯಶಸ್ವಿಯಾಗಲೆಂದು ಮಲೆ ಮಹದೇಶ್ವರನಿಗೆ ಹರಕೆ ಹೊತ್ತುಕೊಂಡಿದ್ದರಂತೆ. ಅದರಂತೆ ಆಗಸ್ಟ್ 13 ರಂದು ಬೆಳಗಿನ ಜಾವ ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಶ್ಯಾಮಲ ಎಂಬ ವೃದ್ಧೆಯ ಸರ ಕಳ್ಳತನ ಮಾಡಿ ಪರಾರಿಯಾಗಿದ್ದರು.

ಇದನ್ನೂ ಓದಿ: ಬೆಂಗಳೂರು: ಅಪರಿಚಿತನ ಬಳಿ ಕ್ವಾಟರ್ ಎಣ್ಣೆ ಆಸೆಗೆ ಬಿದ್ದು ಆಟೋ ಕಳ್ಕೊಂಡ ಚಾಲಕ; ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಸರಗಳ್ಳತನ ನಡೆಸಿದ ನಂತರ ಆರೋಪಿ ಮಂಜುನಾಥ್ ತಾನು ಹೊತ್ತುಕೊಂಡಿದ್ದ ಹರಕೆಯನ್ನು ಸಂದಾಯ ಮಾಡಲೆಂದು ಮತ್ತೊಬ್ಬ ಆರೋಪಿ ಯತೀಶ್ ಜೊತೆ ಸೇರಿ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೋಗಿದ್ದಾರೆ. ಇಬ್ಬರು ಹರಕೆ ಸಂದಾಯ ಮಾಡಿ ಹೊರಬರುತ್ತಿದ್ದಂತೆ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಬೈಕ್ ಕಳ್ಳತನ ಮಾಡುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದಿವೆ. ಅಲ್ಲದೆ, ಕಳವು ಮಾಡಿದ ಬೈಕ್​ನಲ್ಲೇ ಸರಗಳ್ಳತನ ಮಾಡಿರುವ ಬಗ್ಗೆಯೂ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಸದ್ಯ ಬಂಧಿತರಿಂದ 25 ಗ್ರಾಂ ತೂಕದ ಚಿನ್ನದ ಸರ ಹಾಗೂ ಮೂರು ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಗಳನ್ನು ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​