AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸರಗಳ್ಳತನ ನಂತರ ಮಲೆ ಮಹದೇಶ್ವರನಿಗೆ ಹರಕೆ ಸಂದಾಯ ಮಾಡಿದ ಆರೋಪಿಗಳು, ಮುಂದೇನಾಯ್ತು?

ಸರಗಳ್ಳತನ ಯಶಸ್ವಿಯಾದರೆ ಮಲೆ ಮಹದೇಶ್ವರನಿಗೆ ಮುಡಿ ಕೊಡುವುದಾಗಿ ಕಳ್ಳರು ಹರಕೆ ಹೊತ್ತಿದ್ದರಂತೆ. ಅದರಂತೆ ಸರ ಕಳ್ಳತನ ಮಾಡಿದ ಕಳ್ಳರು ಬೆಟ್ಟಕ್ಕೆ ಹೋಗಿ ಹರಕೆ ಸಂದಾಯ ಮಾಡಿ ಹೊರಬರುತ್ತಿದ್ದಂತೆ ಆರೋಪಿಗಳನ್ನು ಬೆಂಗಳೂರಿನ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸರಗಳ್ಳತನ ನಂತರ ಮಲೆ ಮಹದೇಶ್ವರನಿಗೆ ಹರಕೆ ಸಂದಾಯ ಮಾಡಿದ ಆರೋಪಿಗಳು, ಮುಂದೇನಾಯ್ತು?
ಸರಗಳ್ಳತನ ಮಾಡಿ ಬಂಧಿತರಾಗಿರುವ ಆರೋಪಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 20, 2023 | 4:19 PM

Share

ಬೆಂಗಳೂರು, ಆಗಸ್ಟ್ 20: ಸರಗಳ್ಳತನ (Chain Snatching) ಮಾಡಿದ ನಂತರ ಹೊತ್ತುಕೊಂಡಿದ್ದ ಹರಕೆಯನ್ನು ಸಂದಾಯ ಮಾಡಲು ಕಳ್ಳರು ಮಲೆ ಮಹದೇಶ್ವರನ ಬೆಟ್ಟಕ್ಕೆ (Male Mahadeshwara Hills) ಹೋಗಿ ಮುಡಿಕೊಟ್ಟು ಮಾದೇಶ್ವರನ ದರ್ಶನ ಪಡೆದು ಹೊರಬರುತ್ತಿದ್ದಂತೆ ಬೆಂಗಳೂರಿನ (Bengaluru) ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ಹಾಗೂ ಯತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಐಶಾರಾಮಿ ಜೀವನ ನಡೆಸಲು ಆರೋಪಿಗಳು ಸರಗಳ್ಳತನಕ್ಕೆ ಇಳಿದಿದ್ದರು. ಅದರಂತೆ ಸರಗಳ್ಳತನ ಯಶಸ್ವಿಯಾಗಲೆಂದು ಮಲೆ ಮಹದೇಶ್ವರನಿಗೆ ಹರಕೆ ಹೊತ್ತುಕೊಂಡಿದ್ದರಂತೆ. ಅದರಂತೆ ಆಗಸ್ಟ್ 13 ರಂದು ಬೆಳಗಿನ ಜಾವ ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಶ್ಯಾಮಲ ಎಂಬ ವೃದ್ಧೆಯ ಸರ ಕಳ್ಳತನ ಮಾಡಿ ಪರಾರಿಯಾಗಿದ್ದರು.

ಇದನ್ನೂ ಓದಿ: ಬೆಂಗಳೂರು: ಅಪರಿಚಿತನ ಬಳಿ ಕ್ವಾಟರ್ ಎಣ್ಣೆ ಆಸೆಗೆ ಬಿದ್ದು ಆಟೋ ಕಳ್ಕೊಂಡ ಚಾಲಕ; ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಸರಗಳ್ಳತನ ನಡೆಸಿದ ನಂತರ ಆರೋಪಿ ಮಂಜುನಾಥ್ ತಾನು ಹೊತ್ತುಕೊಂಡಿದ್ದ ಹರಕೆಯನ್ನು ಸಂದಾಯ ಮಾಡಲೆಂದು ಮತ್ತೊಬ್ಬ ಆರೋಪಿ ಯತೀಶ್ ಜೊತೆ ಸೇರಿ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೋಗಿದ್ದಾರೆ. ಇಬ್ಬರು ಹರಕೆ ಸಂದಾಯ ಮಾಡಿ ಹೊರಬರುತ್ತಿದ್ದಂತೆ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಬೈಕ್ ಕಳ್ಳತನ ಮಾಡುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದಿವೆ. ಅಲ್ಲದೆ, ಕಳವು ಮಾಡಿದ ಬೈಕ್​ನಲ್ಲೇ ಸರಗಳ್ಳತನ ಮಾಡಿರುವ ಬಗ್ಗೆಯೂ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಸದ್ಯ ಬಂಧಿತರಿಂದ 25 ಗ್ರಾಂ ತೂಕದ ಚಿನ್ನದ ಸರ ಹಾಗೂ ಮೂರು ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಗಳನ್ನು ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ