AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸರಗಳ್ಳತನ ನಂತರ ಮಲೆ ಮಹದೇಶ್ವರನಿಗೆ ಹರಕೆ ಸಂದಾಯ ಮಾಡಿದ ಆರೋಪಿಗಳು, ಮುಂದೇನಾಯ್ತು?

ಸರಗಳ್ಳತನ ಯಶಸ್ವಿಯಾದರೆ ಮಲೆ ಮಹದೇಶ್ವರನಿಗೆ ಮುಡಿ ಕೊಡುವುದಾಗಿ ಕಳ್ಳರು ಹರಕೆ ಹೊತ್ತಿದ್ದರಂತೆ. ಅದರಂತೆ ಸರ ಕಳ್ಳತನ ಮಾಡಿದ ಕಳ್ಳರು ಬೆಟ್ಟಕ್ಕೆ ಹೋಗಿ ಹರಕೆ ಸಂದಾಯ ಮಾಡಿ ಹೊರಬರುತ್ತಿದ್ದಂತೆ ಆರೋಪಿಗಳನ್ನು ಬೆಂಗಳೂರಿನ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸರಗಳ್ಳತನ ನಂತರ ಮಲೆ ಮಹದೇಶ್ವರನಿಗೆ ಹರಕೆ ಸಂದಾಯ ಮಾಡಿದ ಆರೋಪಿಗಳು, ಮುಂದೇನಾಯ್ತು?
ಸರಗಳ್ಳತನ ಮಾಡಿ ಬಂಧಿತರಾಗಿರುವ ಆರೋಪಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 20, 2023 | 4:19 PM

Share

ಬೆಂಗಳೂರು, ಆಗಸ್ಟ್ 20: ಸರಗಳ್ಳತನ (Chain Snatching) ಮಾಡಿದ ನಂತರ ಹೊತ್ತುಕೊಂಡಿದ್ದ ಹರಕೆಯನ್ನು ಸಂದಾಯ ಮಾಡಲು ಕಳ್ಳರು ಮಲೆ ಮಹದೇಶ್ವರನ ಬೆಟ್ಟಕ್ಕೆ (Male Mahadeshwara Hills) ಹೋಗಿ ಮುಡಿಕೊಟ್ಟು ಮಾದೇಶ್ವರನ ದರ್ಶನ ಪಡೆದು ಹೊರಬರುತ್ತಿದ್ದಂತೆ ಬೆಂಗಳೂರಿನ (Bengaluru) ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ಹಾಗೂ ಯತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಐಶಾರಾಮಿ ಜೀವನ ನಡೆಸಲು ಆರೋಪಿಗಳು ಸರಗಳ್ಳತನಕ್ಕೆ ಇಳಿದಿದ್ದರು. ಅದರಂತೆ ಸರಗಳ್ಳತನ ಯಶಸ್ವಿಯಾಗಲೆಂದು ಮಲೆ ಮಹದೇಶ್ವರನಿಗೆ ಹರಕೆ ಹೊತ್ತುಕೊಂಡಿದ್ದರಂತೆ. ಅದರಂತೆ ಆಗಸ್ಟ್ 13 ರಂದು ಬೆಳಗಿನ ಜಾವ ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಶ್ಯಾಮಲ ಎಂಬ ವೃದ್ಧೆಯ ಸರ ಕಳ್ಳತನ ಮಾಡಿ ಪರಾರಿಯಾಗಿದ್ದರು.

ಇದನ್ನೂ ಓದಿ: ಬೆಂಗಳೂರು: ಅಪರಿಚಿತನ ಬಳಿ ಕ್ವಾಟರ್ ಎಣ್ಣೆ ಆಸೆಗೆ ಬಿದ್ದು ಆಟೋ ಕಳ್ಕೊಂಡ ಚಾಲಕ; ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಸರಗಳ್ಳತನ ನಡೆಸಿದ ನಂತರ ಆರೋಪಿ ಮಂಜುನಾಥ್ ತಾನು ಹೊತ್ತುಕೊಂಡಿದ್ದ ಹರಕೆಯನ್ನು ಸಂದಾಯ ಮಾಡಲೆಂದು ಮತ್ತೊಬ್ಬ ಆರೋಪಿ ಯತೀಶ್ ಜೊತೆ ಸೇರಿ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೋಗಿದ್ದಾರೆ. ಇಬ್ಬರು ಹರಕೆ ಸಂದಾಯ ಮಾಡಿ ಹೊರಬರುತ್ತಿದ್ದಂತೆ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಬೈಕ್ ಕಳ್ಳತನ ಮಾಡುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದಿವೆ. ಅಲ್ಲದೆ, ಕಳವು ಮಾಡಿದ ಬೈಕ್​ನಲ್ಲೇ ಸರಗಳ್ಳತನ ಮಾಡಿರುವ ಬಗ್ಗೆಯೂ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಸದ್ಯ ಬಂಧಿತರಿಂದ 25 ಗ್ರಾಂ ತೂಕದ ಚಿನ್ನದ ಸರ ಹಾಗೂ ಮೂರು ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಗಳನ್ನು ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?