AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chain Snatching: ಕೊರೊನಾ ಕಾಟದ ಮಧ್ಯೆ.. ಬೆಂಗಳೂರು ನಗರದಲ್ಲಿ ಮತ್ತೆ ಶುರುವಾಯ್ತು ಸರಗಳ್ಳರ ಹಾವಳಿ

ಕೊರೊನಾ ಕಾಟದ ಮಧ್ಯೆ ರಾಜಧಾನಿ ಬೆಂಗಳೂರು ನಗರದಲ್ಲಿ ಸರಗಳ್ಳರ ಹಾವಳಿ ಮತ್ತೆ ಶುರುವಾಗಿದೆ. ಕೊರೊನಾ ಭೀತಿಯಿಂದ ರಾಜಧಾನಿ ಸೇರಿದಂತೆ ಎಲ್ಲೆಡೆ ಅಪರಾಧ ಪ್ರಕರಣಗಳು ಒಂದಷ್ಟು ತಗ್ಗಿವೆ ಎಂದು ಒಂದಷ್ಟು ನಿಟ್ಟುಸಿರು ಬಿಟ್ಟಿದ್ದರು. ಆದರೆ ಬೆಂಗಳೂರು ಪೊಲೀಸರಿಗೆ ಈಗ ಮತ್ತೆ ತಲೆ ಬಿಸಿ ಶುರುವಾಗಿದೆ.

Chain Snatching: ಕೊರೊನಾ ಕಾಟದ ಮಧ್ಯೆ.. ಬೆಂಗಳೂರು ನಗರದಲ್ಲಿ ಮತ್ತೆ ಶುರುವಾಯ್ತು ಸರಗಳ್ಳರ ಹಾವಳಿ
Chain Snatching: ಕೊರೊನಾ ಕಾಟದ ಮಧ್ಯೆ.. ಬೆಂಗಳೂರು ನಗರದಲ್ಲಿ ಮತ್ತೆ ಶುರುವಾಯ್ತು ಸರಗಳ್ಳರ ಹಾವಳಿ
TV9 Web
| Edited By: |

Updated on:Jun 05, 2021 | 4:29 PM

Share

ಬೆಂಗಳೂರು: ಕೊರೊನಾ ಕಾಟದ ಮಧ್ಯೆ ರಾಜಧಾನಿ ಬೆಂಗಳೂರು ನಗರದಲ್ಲಿ ಸರಗಳ್ಳರ ಹಾವಳಿ ಮತ್ತೆ ಶುರುವಾಗಿದೆ. ಕೊರೊನಾ ಭೀತಿಯಿಂದ ರಾಜಧಾನಿ ಸೇರಿದಂತೆ ಎಲ್ಲೆಡೆ ಅಪರಾಧ ಪ್ರಕರಣಗಳು ಒಂದಷ್ಟು ತಗ್ಗಿವೆ ಎಂದು ಕರ್ನಾಟಕ ಪೊಲೀಸರು ಒಂದಷ್ಟು ನಿಟ್ಟುಸಿರು ಬಿಟ್ಟಿದ್ದರು. ಆದರೆ ಬೆಂಗಳೂರು ಪೊಲೀಸರಿಗೆ ಈಗ ಮತ್ತೆ ತಲೆ ಬಿಸಿ ಶುರುವಾಗಿದೆ.

ಬೆಂಗಳೂರು ನಗರದಲ್ಲಿ ಮನೆ ಮುಂದೆ ನಿಂತಿದ್ದ ಗೃಹಿಣಿಯ ಚಿನ್ನದ ಸರ ಕಸಿದು ಸರಗಳ್ಳರು ಎಸ್ಕೇಪ್ ಆಗಿದ್ದಾರೆ. ಮೋಹನ್ ಕುಮಾರಿ ಎಂಬಾಕೆಯ 40 ಗ್ರಾಂ ತೂಕದ ಚಿನ್ನದ ಸರ ಎಗರಿಸಿದ್ದಾರೆ. ವಿಜಯನಗರದ ಮೂಡಲಪಾಳ್ಯದ 10ನೇ ಕ್ರಾಸ್‌ನಲ್ಲಿ ಘಟನೆ ನಡೆದಿದೆ. ಚಿನ್ನದ ಸರ ಕಸಿದು ಬೈಕ್‌ನಲ್ಲಿ ಬಂದಿದ್ದ ಇಬ್ಬರು ಎಸ್ಕೇಪ್ ಆಗಿದ್ದಾರೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅಪರಾಧಗಳ ಪ್ರಮಾಣ ಇಳಿಕೆಯಾಗಿದೆ. ಮೇ ತಿಂಗಳಿನಲ್ಲಿ 546 ಪ್ರಕರಣ ಮಾತ್ರ ದಾಖಲಾಗಿದೆ. ಸೈಬರ್ ಕ್ರೈಂ ಪ್ರಕರಣಗಳೇ ಈಗ ಹೆಚ್ಚಾಗಿ ದಾಖಲಾಗುತ್ತಿದೆ. ಉಳಿದಂತೆ ಕೊಲೆ, ದರೋಡೆ, ಕಳ್ಳತನ, ಸರಗಳ್ಳತನ, ಮನೆಗಳ್ಳತನ ಪ್ರಕರಣಗಳಲ್ಲಿ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ಮೊದಲು ಜನವರಿ ತಿಂಗಳಿನಲ್ಲಿ 6,526 ಪ್ರಕರಣ ದಾಖಲಾಗಿತ್ತು. ಫೆಬ್ರವರಿ ತಿಂಗಳಿನಲ್ಲಿ 5,642 ಅಪರಾಧ ಪ್ರಕರಣಗಳು ದಾಖಲಾಗಿದ್ದವು, ಮಾರ್ಚ್​ನಲ್ಲಿ 3,358 ಪ್ರಕರಣ ದಾಖಲಾಗಿತ್ತು ಹಾಗೂ ಏಪ್ರಿಲ್ ತಿಂಗಳಿನಲ್ಲಿ 2,028 ಪ್ರಕರಣಗಳು ದಾಖಲಾಗಿತ್ತು. ಜನವರಿಯಿಂದ ಈಚೆಗೆ ಪ್ರತೀ ತಿಂಗಳು ಅಪರಾಧ ಪ್ರಕರಣಗಳ ಪ್ರಮಾಣ ಇಳಿಕೆಯಾಗಿರುವುದು ಕಂಡುಬಂದಿದೆ. ಮೇ ತಿಂಗಳಿನಲ್ಲಿ ಇದುವರೆಗೆ ಕೇವಲ 546 ಪ್ರಕರಣಗಳು ಮಾತ್ರ ದಾಖಲಾಗಿವೆ.

(chain snatching in vijayanagar bangalore during corona times)

ಲಾಕ್​ಡೌನ್ ಬಳಿಕ ಬೆಂಗಳೂರಿನಲ್ಲಿ ಕ್ರೈಂ ರೇಟ್ ಇಳಿಕೆ; ದಾಖಲಾಗುತ್ತಿರುವ ಕೇಸ್​ಗಳಲ್ಲಿ ಸೈಬರ್ ಕ್ರೈಂ ಹೆಚ್ಚು

Published On - 4:28 pm, Sat, 5 June 21

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ