AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಆ್ಯಂಡ್ ಗ್ಯಾಂಗ್ ವಂಚನೆ ಪ್ರಕರಣ: 9 ಆರೋಪಿಗಳ ವಿರುದ್ಧ ಚಾರ್ಜ್​​ಶೀಟ್ ಸಲ್ಲಿಸಿದ ಸಿಸಿಬಿ

ಚೈತ್ರಾ ಗ್ಯಾಂಗ್​ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್​​ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಚೈತ್ರಾ ಆ್ಯಂಡ್ ಗ್ಯಾಂಗ್ ವಂಚನೆ ಪ್ರಕರಣ: 9 ಆರೋಪಿಗಳ ವಿರುದ್ಧ ಚಾರ್ಜ್​​ಶೀಟ್ ಸಲ್ಲಿಸಿದ ಸಿಸಿಬಿ
ಚೈತ್ರಾ
TV9 Web
| Edited By: |

Updated on:Nov 08, 2023 | 2:37 PM

Share

ಬೆಂಗಳೂರು, ನ.08: MLA ಟಿಕೆಟ್​ ಆಮಿಷವೊಡ್ಡಿ ಉದ್ಯಮಿಯಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ (Chaitra) ಗ್ಯಾಂಗ್​ ಪ್ರಕರಣ ಸಂಬಂಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 9 ಆರೋಪಿಗಳ ವಿರುದ್ಧ ಸಿಸಿಬಿ (CCB) ಅಧಿಕಾರಿಗಳು ಚಾರ್ಜ್​​ಶೀಟ್ ಸಲ್ಲಿಸಿದ್ದಾರೆ. ಚೈತ್ರಾ, ಹಾಲಶ್ರೀ ಸೇರಿ 9 ಮಂದಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್​ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ ಇಟ್ಟು ಹೋಗಿದ್ದ ಬಗ್ಗೆ ಮೈಸೂರು ಮೂಲದ ವ್ಯಕ್ತಿಯು ನೀಡಿದ ಹೇಳಿಕೆ ಸೇರಿದಂತೆ ಸ್ಪಾಟ್ ಮಹಜರ್ ನಡೆಸಿ ಹಣ ಸೀಜ್ ಮಾಡಿದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಸಿಸಿಬಿ ತಂಡ ಚೈತ್ರಾ ವಂಚನೆ ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದು ಎಂಎಲ್ಎ ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿ, 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ‌ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ರಿಕವರಿ ಮಾಡಲಾಗಿದೆ. ಬೃಹತ್ ಮೊತ್ತದ ಹಣ ರಿಕವರಿ ಹಿನ್ನಲೆ ಚೈತ್ರಾ ಗ್ಯಾಂಗ್​ಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಇದನ್ನೂ ಓದಿ: ಚೈತ್ರಾ ಗ್ಯಾಂಗ್‌ ರೀತಿಯಲ್ಲೇ ಮತ್ತೊಂದು ಟಿಕೆಟ್‌ ದೋಖಾ: ಬಿಜೆಪಿ ಟಿಕೆಟ್‌ ಕೊಡಿಸೋದಾಗಿ ನಂಬಿಸಿದ್ದು ಹೇಗೆ? ಅಸಲಿಗೆ ಆಗಿದ್ದೇನು?

ಸಿಸಿಬಿ ಪೊಲೀಸರು ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲಾ ಆಡಿಯೋ, ವಿಡಿಯೋವನ್ನು ಪಡೆದಿದ್ದಾರೆ. ಆಡಿಯೋ, ವಿಡಿಯೋಗಳ ಬಗ್ಗೆ ಚಾರ್ಜ್ ಶೀಟ್ ನಲ್ಲಿ‌ ಉಲ್ಲೇಖಿಸಲಾಗಿದೆ. ಗೋವಿಂದ ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೀವ್ ವರದಿ ಕೂಡ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಮಾಡಿ ವರದಿ ಸಲ್ಲಿಸಲಾಗಿದೆ. ಸದ್ಯ ಚೈತ್ರಾ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೂ ಕೂಡ ಜಾಮೀನು ಸಿಗದೇ ಪರದಾಡುತ್ತಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:05 pm, Wed, 8 November 23

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ