AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್, ಆಕೆಯ ಆರೋಗ್ಯದ ಬಗ್ಗೆ ಡಾಕ್ಟರ್​ ಹೇಳಿದ್ದಿಷ್ಟು

MLA ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಹಣ ಪಡೆದು ವಂಚನೆ ಪ್ರಕರಣದ ಒಂದೊಂದೇ ನಾಟಕ ಬಟಾಬಯಲಾಗುತ್ತಿದ್ದಂತೆಯೇ ಅನಾರೋಗ್ಯದ ನಾಟಕವಾಡ ಆಸ್ಪತ್ರೆ ಸೇರಿದ್ದ ಚೈತ್ರಾ ಕುಂದಾಪುರ ಆರೋಗ್ಯವಾಗಿದ್ದಾಳೆ. ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಚೈತ್ರಾಳನ್ನು ಸಿಸಿಬಿ ಪೊಲೀಸರು ಡಿಸ್ಚಾರ್ಜ್ ಮಾಡಿಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ. ಅಷ್ಟಕ್ಕೂ ಚೈತ್ರಾಳಿಗೆ ಆಗಿದ್ದೇನು? ಏನೆಲ್ಲ ಪರೀಕ್ಷೆ ಮಾಡಲಾಯ್ತು? ಎನ್ನುವ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆ ಡಾಕ್ಟರ್ ಮಾಹಿತಿ ನೀಡಿದ್ದು ಅದು ಈ ಕೆಳಗಿನಂತಿದೆ.

ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್, ಆಕೆಯ ಆರೋಗ್ಯದ ಬಗ್ಗೆ ಡಾಕ್ಟರ್​ ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ರಮೇಶ್ ಬಿ. ಜವಳಗೇರಾ|

Updated on:Sep 18, 2023 | 3:01 PM

Share

ಬೆಂಗಳೂರು, (ಸೆಪ್ಟೆಂಬರ್ 18): MLA ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಬಂಧನವಾಗಿ ಅನಾರೋಗ್ಯದ ನಾಟಕವಾಡಿದ್ದ ಚೈತ್ರಾ ಕುಂದಾಪುರ (Chaitra Kundapura) ಆಸ್ಪತ್ರೆಯಿಂದ(Hospital) ಡಿಸ್ಚಾರ್ಜ್ ಆಗಿದ್ದಾಳೆ. ರೋಗಿಯಂತೆ ಕಳೆದ 3 ದಿನಗಳಿಂದ ನಾಟಕವಾಡುತ್ತಾ ತನಿಖೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಚೈತ್ರಾ ಕುಂದಾಪುರ ಆರೋಗ್ಯವಾಗಿದ್ದಾಳೆ. ಎಲ್ಲಾ ಮೆಡಿಕಲ್​ ರಿಪೋರ್ಟ್​ಗಳಲ್ಲಿ ನಾರ್ಮಲ್​ ಅಂತ ಬಂದಿದೆ. ಹೀಗಾಗಿ ಇಂದು(ಸೆಪ್ಟೆಂಬರ್ 18) ಸಿಸಿಬಿ ಪೊಲೀಸರು (CCB Police), ಚೈತ್ರಾ ಕುಂದಾಪುರಳನ್ನ ವಿಕ್ಟೋರಿಯಾ ಆಸ್ಪತ್ರೆಯಿಂದ(Victoria Hospital) ಡಿಸ್ಚಾರ್ಜ್ ಮಾಡಿಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ.

ಚೈತ್ರಾ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು

ಇನ್ನು ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ದಿವ್ಯಪ್ರಕಾಶ್ ಪ್ರತಿಕ್ರಿಯಿಸಿದ್ದು, ಚೈತ್ರಾ ಕುಂದಾಪುರಗೆ ಫಿಟ್ಸ್​ ಏನು ಕಂಡು ಬಂದಿಲ್ಲ. ಮೊದಲ ಬಾರಿ ಇಸಿಜಿ ಮಾಡಿದಾಗ ಸ್ವಲ್ಪ ವ್ಯತ್ಯಾಸ ಕಂಡುಬಂದಿತ್ತು. 24 ಗಂಟೆ ಬಳಿಕ ಇಸಿಜಿ ಮಾಡಿದಾಗ ವ್ಯತ್ಯಾಸ ಕಂಡು ಬಂದಿಲ್ಲ. ಸದ್ಯ ಚೈತ್ರಾ ಕುಂದಾಪುರ ಆರೋಗ್ಯವು ನಾರ್ಮಲ್​ ಇದೆ. ಫಿಟ್ಸ್​ ಪತ್ತೆ ಮಾಡುವುದಕ್ಕೆ ಎಂಆರ್​ಐ ಹಾಗೂ ಇಇಜಿ ಸ್ಕ್ಯಾನಿಂಗ್ ಮಾಡಿದ್ದು, ಫಿಟ್ಸ್​​ ಕಂಡು ಬಂದಿಲ್ಲ. ನ್ಯೂರಾಲಾಜಿಸ್ಟ್ ಕೆಲವು ಮಾತ್ರೆ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: MLA ಟಿಕೆಟ್​ ವಂಚನೆ ಕೇಸ್: EDಗೆ ಬರೆದ ಪತ್ರದಲ್ಲಿ ಮತ್ತೊಬ್ಬ ಸ್ವಾಮೀಜಿ ಹೆಸರು ಪ್ರಸ್ತಾಪಿಸಿದ ಚೈತ್ರಾ ಕುಂದಾಪುರ

ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾ ಕುಂದಾಪುರ ಅಸ್ವಸ್ಥಗೊಂಡ ಕಾರಣ ಶುಕ್ರವಾರ ಬೆಳಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಲಾಗಿತ್ತು. ಸಂಜೆ ವೇಳೆಗೆ ಆಕೆಯ ಆರೋಗ್ಯದ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮ ಕೇರ್ ಸೆಂಟರ್​​ನ ವಿಶೇಷ ಅಧಿಕಾರಿ ಡಾಕ್ಟರ್ ಬಾಲಾಜಿ ಪೈ ಮಾಹಿತಿ ನೀಡಿದ್ದು, ಚೈತ್ರಾ ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಪ್ರಜ್ಞಾಹೀನಳಾಗಿದ್ದಳು. ವೈದ್ಯರು ಸಹ ಎಲ್ಲಾ ಪರೀಕ್ಷೆ ಮಾಡಿ ಚೈತ್ರಾಳಿಗೆ ಫಿಡ್ಸ್ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನು ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಸಿಸಿಬಿ ಕಚೇರಿಯಲ್ಲಿರುವ ವಾಶ್​ ರೂಮ್ ಅನ್ನು ಪೊಲೀಸರು ಪರಿಶೀಲನೆ ಮಾಡಿದ್ದರು.

ಚೈತ್ರಾ ಆ್ಯಂಡ್ ಗ್ಯಾಂಗ್ ಬಣ್ಣ ಬಣ್ಣ ವೇಷ, ಒಂದೊಂದು ನಾಟಕ ಬಟಾಬಯಲಾಗ್ತಿದೆ. ಚಿಕ್ಕಮಗಳೂರು ಮೂಲದ ಎ2 ಆರೋಪಿ ಮೋಹನ್ ಕುಮಾರ್ ತನ್ನ ನಿಜವಾದ ಹೆಸ್ರು ಮುಚ್ಚಿಟ್ಟು ಗಗನ್ ಕಡೂರು ಅಂತ ಪರಿಚಯ ಮಾಡಿಕೊಂಡಿದ್ದ. ಕಡೂರಿನ ಸ್ನೇಹಿತರು, ಕುಟುಂಬದವರಿಗೆ ಮಾತ್ರ ನಿಜವಾದ ಹೆಸರು ತಿಳಿದಿತ್ತು. ಇಡೀ ಪ್ರಕರಣಕ್ಕೆ ಇವನೇ ಸೂತ್ರಧಾರಿ ಅನ್ನೋದು ಬಯಲಾಗಿದೆ.. ಕಡೂರಿನ ಒಂದು ಸಲೂನ್ ಶಾಪ್​ನಲ್ಲಿ ವ್ಯಕ್ತಿಗಳಿಗೆ ಬಿಜೆಪಿ ಕೇಂದ್ರ ನಾಯಕರಂತೆ ಮೇಕಪ್ ಮಾಡಿಸಿ ಇಡೀ ಪ್ರಕರಣವನ್ನು ಇವನೇ ನಿಯಂತ್ರಿಸಿದ್ದ ಎನ್ನಲಾಗಿದೆ.

ಸದ್ಯ ಇದೇ ಕೇಸ್​ನಲ್ಲಿ ಈವರೆಗೂ 8 ಆರೋಪಿಗಳು ಅರೆಸ್ಟ್ ಆಗಿದ್ದು, ಕೇಸ್‌ ಹಿಂದೆ ಯಾರ್ಯಾರು ಇದ್ದಾರೆ ಎನ್ನುವ ಬಗ್ಗೆ ಸಿಸಿಬಿ ತನಿಖೆ ನಡೆಸುತ್ತಿದೆ. ಆದ್ರೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಅರೆಸ್ಟ್ ಆದ ಬಳಿಕವೇ ಅಸಲಿ ಕಹಾನಿ ಹೊರಬರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:53 pm, Mon, 18 September 23

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ