AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ. 26 ರಿಂದ ಡಿ. 6 ಅಂಬೇಡ್ಕರ್ ಪರಿನಿರ್ವಾಣ ದಿನ, ಸಂವಿಧಾನ ಗೌರವ ಅಭಿಯಾನ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಛಲವಾದಿ ನಾರಾಯಣಸ್ವಾಮಿ, ನವೆಂಬರ್ 26 ರಿಂದ ದೇಶಾದ್ಯಂತ ಸಂವಿಧಾನ ಗೌರವ ಅಭಿಯಾನ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

ನ. 26 ರಿಂದ ಡಿ. 6 ಅಂಬೇಡ್ಕರ್ ಪರಿನಿರ್ವಾಣ ದಿನ, ಸಂವಿಧಾನ ಗೌರವ ಅಭಿಯಾನ: ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 23, 2021 | 2:10 PM

Share

ಬೆಂಗಳೂರು: ದೇಶಾದ್ಯಂತ ನವೆಂಬರ್ 26ರಿಂದ ಡಿಸೆಂಬರ್ 6ರ ಅಂಬೇಡ್ಕರ್ ಪರಿನಿರ್ವಾಣ ದಿನದವರೆಗೆ ಸಂವಿಧಾನ ಗೌರವ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಛಲವಾದಿ ನಾರಾಯಣಸ್ವಾಮಿ, ನವೆಂಬರ್ 26 ರಿಂದ ದೇಶಾದ್ಯಂತ ಸಂವಿಧಾನ ಗೌರವ ಅಭಿಯಾನ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ. ಬಿಜೆಪಿಯ ಸಂಘಟನಾತ್ಮಕ 37 ಜಿಲ್ಲೆಗಳಲ್ಲಿ ಸಂವಿಧಾನ ಪುಸ್ತಕ ಹಾಗೂ ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿ ಜಿಲ್ಲೆಯಲ್ಲಿ ಪಾದಯಾತ್ರೆ ಮಾಡಿ ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುತ್ತೆ ಎಂದರು.

310 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಂಡಲ ಮಟ್ಟದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗುತ್ತೆ. ರಾಜ್ಯದ 5 ಕೇಂದ್ರಗಳಲ್ಲಿ ಬೃಹತ್ ಸಭೆ ನಡೆಸಲಾಗುವುದು. ಹುಬ್ಬಳ್ಳಿ, ಕಲಬುರಗಿ, ಮೈಸೂರು, ಶಿವಮೊಗ್ಗ, ಬೆಂಗಳೂರಲ್ಲಿ ಡಿಸೆಂಬರ್ 6ಕ್ಕೆ ಬೃಹತ್ ಸಮಾವೇಶ ನಡೆಸಲಾಗುತ್ತೆ. ಅಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ದಲಿತರ ಬಗ್ಗೆ ಯಾವ ಧೋರಣೆ ಹೊಂದಿದೆ ಅಂತ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಅರವತ್ತು ವರ್ಷ ದೇಶ ಆಳಿದೆ. ತಳ ಸಮುದಾಯಗಳನ್ನು ಇನ್ನೂ ಹೊಟ್ಟೆಪಾಡಿಗೆ ಸೀಮಿತ ಮಾಡಿ ಇಟ್ಟಿದೆ. ದಲಿತರನ್ನು ಕಾಂಗ್ರೆಸ್ ಓಟ್ ಬ್ಯಾಂಕ್‌ಗೆ ಮಾತ್ರ ಸೀಮಿತ ಮಾಡಿಕೊಂಡಿದೆ. ದಲಿತರಿಗೆ ಕಾಂಗ್ರೆಸ್ಗೆ ಅಧಿಕಾರ ತಪ್ಪಿಸುವ ಶಕ್ತಿ ಇದೆ ಎಂದಿದ್ದಾರೆ.

ಇದನ್ನೂ ಓದಿ: ವಿಚ್ಛೇದನ ವದಂತಿ ಬೆನ್ನಲ್ಲೇ ಹೊಸ ಅಪ್​ಡೇಟ್​ ನೀಡಿದ ಪ್ರಿಯಾಂಕಾ ಚೋಪ್ರಾ

Published On - 2:08 pm, Tue, 23 November 21

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​