AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ. 26 ರಿಂದ ಡಿ. 6 ಅಂಬೇಡ್ಕರ್ ಪರಿನಿರ್ವಾಣ ದಿನ, ಸಂವಿಧಾನ ಗೌರವ ಅಭಿಯಾನ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಛಲವಾದಿ ನಾರಾಯಣಸ್ವಾಮಿ, ನವೆಂಬರ್ 26 ರಿಂದ ದೇಶಾದ್ಯಂತ ಸಂವಿಧಾನ ಗೌರವ ಅಭಿಯಾನ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

ನ. 26 ರಿಂದ ಡಿ. 6 ಅಂಬೇಡ್ಕರ್ ಪರಿನಿರ್ವಾಣ ದಿನ, ಸಂವಿಧಾನ ಗೌರವ ಅಭಿಯಾನ: ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ (ಸಂಗ್ರಹ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on:Nov 23, 2021 | 2:10 PM

Share

ಬೆಂಗಳೂರು: ದೇಶಾದ್ಯಂತ ನವೆಂಬರ್ 26ರಿಂದ ಡಿಸೆಂಬರ್ 6ರ ಅಂಬೇಡ್ಕರ್ ಪರಿನಿರ್ವಾಣ ದಿನದವರೆಗೆ ಸಂವಿಧಾನ ಗೌರವ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಛಲವಾದಿ ನಾರಾಯಣಸ್ವಾಮಿ, ನವೆಂಬರ್ 26 ರಿಂದ ದೇಶಾದ್ಯಂತ ಸಂವಿಧಾನ ಗೌರವ ಅಭಿಯಾನ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ. ಬಿಜೆಪಿಯ ಸಂಘಟನಾತ್ಮಕ 37 ಜಿಲ್ಲೆಗಳಲ್ಲಿ ಸಂವಿಧಾನ ಪುಸ್ತಕ ಹಾಗೂ ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿ ಜಿಲ್ಲೆಯಲ್ಲಿ ಪಾದಯಾತ್ರೆ ಮಾಡಿ ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುತ್ತೆ ಎಂದರು.

310 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಂಡಲ ಮಟ್ಟದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗುತ್ತೆ. ರಾಜ್ಯದ 5 ಕೇಂದ್ರಗಳಲ್ಲಿ ಬೃಹತ್ ಸಭೆ ನಡೆಸಲಾಗುವುದು. ಹುಬ್ಬಳ್ಳಿ, ಕಲಬುರಗಿ, ಮೈಸೂರು, ಶಿವಮೊಗ್ಗ, ಬೆಂಗಳೂರಲ್ಲಿ ಡಿಸೆಂಬರ್ 6ಕ್ಕೆ ಬೃಹತ್ ಸಮಾವೇಶ ನಡೆಸಲಾಗುತ್ತೆ. ಅಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ದಲಿತರ ಬಗ್ಗೆ ಯಾವ ಧೋರಣೆ ಹೊಂದಿದೆ ಅಂತ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಅರವತ್ತು ವರ್ಷ ದೇಶ ಆಳಿದೆ. ತಳ ಸಮುದಾಯಗಳನ್ನು ಇನ್ನೂ ಹೊಟ್ಟೆಪಾಡಿಗೆ ಸೀಮಿತ ಮಾಡಿ ಇಟ್ಟಿದೆ. ದಲಿತರನ್ನು ಕಾಂಗ್ರೆಸ್ ಓಟ್ ಬ್ಯಾಂಕ್‌ಗೆ ಮಾತ್ರ ಸೀಮಿತ ಮಾಡಿಕೊಂಡಿದೆ. ದಲಿತರಿಗೆ ಕಾಂಗ್ರೆಸ್ಗೆ ಅಧಿಕಾರ ತಪ್ಪಿಸುವ ಶಕ್ತಿ ಇದೆ ಎಂದಿದ್ದಾರೆ.

ಇದನ್ನೂ ಓದಿ: ವಿಚ್ಛೇದನ ವದಂತಿ ಬೆನ್ನಲ್ಲೇ ಹೊಸ ಅಪ್​ಡೇಟ್​ ನೀಡಿದ ಪ್ರಿಯಾಂಕಾ ಚೋಪ್ರಾ

Published On - 2:08 pm, Tue, 23 November 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ