AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಗ್ಗಂಟಾಗಿಯೇ ಉಳಿದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಆಯ್ಕೆ; ನಾಮ ಪತ್ರ ಸಲ್ಲಿಸಲು ಮೂರೇ ದಿನ ಬಾಕಿ

ರಾಜ್ಯಸಭೆಗೆ ನಾಮ ಪತ್ರ ಸಲ್ಲಿಸಲು ಇನ್ನು ಮೂರೇ ದಿನ ಬಾಕಿ ಇದೆ. ಇದುವರೆಗೂ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ಕರ್ನಾಟಕದಿಂದ ಬಿ ಎಲ್ ಶಂಕರ್ ಹಾಗೂ ನಾಸೀರ್ ಹುಸೇನ್ ಹೆಸರು ಮುಂಚೂಣಿಯಲ್ಲಿದೆ. ಒಕ್ಕಲಿಗ ಕೋಟಾದಡಿ ಬಿ ಎಲ್ ಶಂಕರ್ ಹಾಗೂ ಹಾಲಿ ಸದಸ್ಯ ಜಿ ಸಿ ಚಂದ್ರಶೇಖರ್​ಗೆ ಸಿಎಂ ಸಿದ್ದರಾಮಯ್ಯ ಬೆಂಬಲ ಸೂಚಿಸಿದ್ದಾರೆ.

ಕಗ್ಗಂಟಾಗಿಯೇ ಉಳಿದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಆಯ್ಕೆ; ನಾಮ ಪತ್ರ ಸಲ್ಲಿಸಲು ಮೂರೇ ದಿನ ಬಾಕಿ
ಸಾಂದರ್ಭಿಕ ಚಿತ್ರ
Follow us
ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು

Updated on: Feb 13, 2024 | 8:30 AM

ಬೆಂಗಳೂರು, ಫೆ.13: ರಾಜ್ಯಸಭೆ ಚುನಾವಣೆಗೆ (Rajya Sabha Election) ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಕಾಂಗ್ರೆಸ್​ಗೆ (Congress) ಕಗ್ಗಂಟಾಗಿದೆ. ರಾಜ್ಯಸಭೆಗೆ ನಾಮ ಪತ್ರ ಸಲ್ಲಿಸಲು ಇನ್ನು ಮೂರೇ ದಿನ ಬಾಕಿ ಇದೆ. ಇದುವರೆಗೂ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ರಾಜ್ಯ ನಾಯಕರ ಆಯ್ಕೆಗೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಹೈಕಮಾಂಡ್ ನಿಂದಲೇ ಹೊರ ರಾಜ್ಯದ ಒಂದು ಅಭ್ಯರ್ಥಿಯ ಫೈನಲ್ ಆಗುವ ಸಾಧ್ಯತೆ ಇದೆ. ಅಭಿಷೇಕ್ ಮನು ಸಿಂಘ್ವಿ ಅಥವಾ ರಘುರಾಂ ರಾಜನ್ ರಾಜ್ಯಸಭೆ ಅಭ್ಯರ್ಥಿ ಆಗುವ ಸಾಧ್ಯತೆ ಇದೆ.

ಕರ್ನಾಟಕದಿಂದ ಬಿ ಎಲ್ ಶಂಕರ್ ಹಾಗೂ ನಾಸೀರ್ ಹುಸೇನ್ ಹೆಸರು ಮುಂಚೂಣಿಯಲ್ಲಿದೆ. ಒಕ್ಕಲಿಗ ಕೋಟಾದಡಿ ಬಿ ಎಲ್ ಶಂಕರ್ ಹಾಗೂ ಹಾಲಿ ಸದಸ್ಯ ಜಿ ಸಿ ಚಂದ್ರಶೇಖರ್​ಗೆ ಸಿಎಂ ಸಿದ್ದರಾಮಯ್ಯ ಬೆಂಬಲ ಸೂಚಿಸಿದ್ದಾರೆ. ಜಿ ಸಿ ಚಂದ್ರಶೇಖರ್ ಗೆ ಡಿಸಿಎಂ ಡಿ ಕೆ ಶಿವಕುಮಾರ್ ಬೆಂಬಲ ಸೂಚಿಸಿದ್ದಾರೆ. ನಾಸೀರ್ ಹುಸೇನ್ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬ್ಯಾಟ್ ಬೀಸುತ್ತಿದ್ದಾರೆ. ಬಿ.ಎಲ್. ಶಂಕರ್ ಅತ್ತ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಫೆಬ್ರವರಿ 14ರಂದು ರಾಜ್ಯದಲ್ಲೇ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಹೆಸರು ಅಂತಿಮಗೊಳ್ಳುವ ನಿರೀಕ್ಷೆ ಇದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಮಂಡ್ಯ ಕಣದಿಂದ ಹಿಂದೆ ಸರಿದ ನಿಖಿಲ್, ಯಾರಿಗೆ ಸಿಗಲಿದೆ ಜೆಡಿಎಸ್ ಟಿಕೆಟ್, ಮಹತ್ವದ ಸಭೆ

ಇದನ್ನೂ ಓದಿ: ಗದಗ: ಮರಳು ದಂಧೆಗೆ ಕಾಂಗ್ರೆಸ್​​ ಮುಖಂಡ ಡಾ. ಶಶಿಧರ್ ಹಟ್ಟಿ ಬಲಿ

ಫೆ.15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೂರು ಸ್ಥಾನ ಭರ್ತಿ ಮಾಡಿಕೊಳ್ಳಲು ಕಾಂಗ್ರೆಸ್​ಗೆ ಅವಕಾಶವಿದೆ. ಪ್ರಸ್ತುತ 20ಕ್ಕಿಂತ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದು, ವಿವಿಧ ಕೋಟಾದಡಿ ಬೇಡಿಕೆ ಮುಂದಿಟ್ಟಿದ್ದಾರೆ. ಮಠ ಮಾನ್ಯಗಳಿಂದ, ಉದ್ಯಮಿಗಳಿಂದ ಒತ್ತಡ ಹೇರಲಾರಂಭಿಸಿದ್ದಾರೆ. ಮೂರು ಸ್ಥಾನಗಳ ಪೈಕಿ ಒಂದು ಸ್ಥಾನ ಅಲ್ಪಸಂಖ್ಯಾತರಿಗೆ, ಒಂದು ಒಕ್ಕಲಿಗ ಮತ್ತೊಂದು ಪರಿಶಿಷ್ಟರಿಗೆ ಕೊಡಬೇಕೆಂದು ಚರ್ಚೆಯಾಗಿದೆ. ಅಲ್ಪಸಂಖ್ಯಾತ ಕೋಟಾದಿಂದ ಹಾಲಿ ಸದಸ್ಯ ನಾಸೀರ್ ಹುಸೇನ್ ಪುನರಾಯ್ಕೆ ಬಯಸಲಿದ್ದು, ಹೈಕಮಾಂಡ್ ಕಡೆಯಿಂದ ಭರವಸೆಯೂ ಸಿಕ್ಕಿದೆ. ಆದರೆ, ಕೊನೆ ಹಂತದ ಬದಲಾವಣೆ ಹೊರತುಪಡಿಸಿ ನಾಸೀರ್ ಪುನಃ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ