AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಗ್ಗಂಟಾಗಿಯೇ ಉಳಿದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಆಯ್ಕೆ; ನಾಮ ಪತ್ರ ಸಲ್ಲಿಸಲು ಮೂರೇ ದಿನ ಬಾಕಿ

ರಾಜ್ಯಸಭೆಗೆ ನಾಮ ಪತ್ರ ಸಲ್ಲಿಸಲು ಇನ್ನು ಮೂರೇ ದಿನ ಬಾಕಿ ಇದೆ. ಇದುವರೆಗೂ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ಕರ್ನಾಟಕದಿಂದ ಬಿ ಎಲ್ ಶಂಕರ್ ಹಾಗೂ ನಾಸೀರ್ ಹುಸೇನ್ ಹೆಸರು ಮುಂಚೂಣಿಯಲ್ಲಿದೆ. ಒಕ್ಕಲಿಗ ಕೋಟಾದಡಿ ಬಿ ಎಲ್ ಶಂಕರ್ ಹಾಗೂ ಹಾಲಿ ಸದಸ್ಯ ಜಿ ಸಿ ಚಂದ್ರಶೇಖರ್​ಗೆ ಸಿಎಂ ಸಿದ್ದರಾಮಯ್ಯ ಬೆಂಬಲ ಸೂಚಿಸಿದ್ದಾರೆ.

ಕಗ್ಗಂಟಾಗಿಯೇ ಉಳಿದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಆಯ್ಕೆ; ನಾಮ ಪತ್ರ ಸಲ್ಲಿಸಲು ಮೂರೇ ದಿನ ಬಾಕಿ
ಸಾಂದರ್ಭಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on: Feb 13, 2024 | 8:30 AM

Share

ಬೆಂಗಳೂರು, ಫೆ.13: ರಾಜ್ಯಸಭೆ ಚುನಾವಣೆಗೆ (Rajya Sabha Election) ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಕಾಂಗ್ರೆಸ್​ಗೆ (Congress) ಕಗ್ಗಂಟಾಗಿದೆ. ರಾಜ್ಯಸಭೆಗೆ ನಾಮ ಪತ್ರ ಸಲ್ಲಿಸಲು ಇನ್ನು ಮೂರೇ ದಿನ ಬಾಕಿ ಇದೆ. ಇದುವರೆಗೂ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ರಾಜ್ಯ ನಾಯಕರ ಆಯ್ಕೆಗೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಹೈಕಮಾಂಡ್ ನಿಂದಲೇ ಹೊರ ರಾಜ್ಯದ ಒಂದು ಅಭ್ಯರ್ಥಿಯ ಫೈನಲ್ ಆಗುವ ಸಾಧ್ಯತೆ ಇದೆ. ಅಭಿಷೇಕ್ ಮನು ಸಿಂಘ್ವಿ ಅಥವಾ ರಘುರಾಂ ರಾಜನ್ ರಾಜ್ಯಸಭೆ ಅಭ್ಯರ್ಥಿ ಆಗುವ ಸಾಧ್ಯತೆ ಇದೆ.

ಕರ್ನಾಟಕದಿಂದ ಬಿ ಎಲ್ ಶಂಕರ್ ಹಾಗೂ ನಾಸೀರ್ ಹುಸೇನ್ ಹೆಸರು ಮುಂಚೂಣಿಯಲ್ಲಿದೆ. ಒಕ್ಕಲಿಗ ಕೋಟಾದಡಿ ಬಿ ಎಲ್ ಶಂಕರ್ ಹಾಗೂ ಹಾಲಿ ಸದಸ್ಯ ಜಿ ಸಿ ಚಂದ್ರಶೇಖರ್​ಗೆ ಸಿಎಂ ಸಿದ್ದರಾಮಯ್ಯ ಬೆಂಬಲ ಸೂಚಿಸಿದ್ದಾರೆ. ಜಿ ಸಿ ಚಂದ್ರಶೇಖರ್ ಗೆ ಡಿಸಿಎಂ ಡಿ ಕೆ ಶಿವಕುಮಾರ್ ಬೆಂಬಲ ಸೂಚಿಸಿದ್ದಾರೆ. ನಾಸೀರ್ ಹುಸೇನ್ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬ್ಯಾಟ್ ಬೀಸುತ್ತಿದ್ದಾರೆ. ಬಿ.ಎಲ್. ಶಂಕರ್ ಅತ್ತ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಫೆಬ್ರವರಿ 14ರಂದು ರಾಜ್ಯದಲ್ಲೇ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಹೆಸರು ಅಂತಿಮಗೊಳ್ಳುವ ನಿರೀಕ್ಷೆ ಇದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಮಂಡ್ಯ ಕಣದಿಂದ ಹಿಂದೆ ಸರಿದ ನಿಖಿಲ್, ಯಾರಿಗೆ ಸಿಗಲಿದೆ ಜೆಡಿಎಸ್ ಟಿಕೆಟ್, ಮಹತ್ವದ ಸಭೆ

ಇದನ್ನೂ ಓದಿ: ಗದಗ: ಮರಳು ದಂಧೆಗೆ ಕಾಂಗ್ರೆಸ್​​ ಮುಖಂಡ ಡಾ. ಶಶಿಧರ್ ಹಟ್ಟಿ ಬಲಿ

ಫೆ.15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೂರು ಸ್ಥಾನ ಭರ್ತಿ ಮಾಡಿಕೊಳ್ಳಲು ಕಾಂಗ್ರೆಸ್​ಗೆ ಅವಕಾಶವಿದೆ. ಪ್ರಸ್ತುತ 20ಕ್ಕಿಂತ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದು, ವಿವಿಧ ಕೋಟಾದಡಿ ಬೇಡಿಕೆ ಮುಂದಿಟ್ಟಿದ್ದಾರೆ. ಮಠ ಮಾನ್ಯಗಳಿಂದ, ಉದ್ಯಮಿಗಳಿಂದ ಒತ್ತಡ ಹೇರಲಾರಂಭಿಸಿದ್ದಾರೆ. ಮೂರು ಸ್ಥಾನಗಳ ಪೈಕಿ ಒಂದು ಸ್ಥಾನ ಅಲ್ಪಸಂಖ್ಯಾತರಿಗೆ, ಒಂದು ಒಕ್ಕಲಿಗ ಮತ್ತೊಂದು ಪರಿಶಿಷ್ಟರಿಗೆ ಕೊಡಬೇಕೆಂದು ಚರ್ಚೆಯಾಗಿದೆ. ಅಲ್ಪಸಂಖ್ಯಾತ ಕೋಟಾದಿಂದ ಹಾಲಿ ಸದಸ್ಯ ನಾಸೀರ್ ಹುಸೇನ್ ಪುನರಾಯ್ಕೆ ಬಯಸಲಿದ್ದು, ಹೈಕಮಾಂಡ್ ಕಡೆಯಿಂದ ಭರವಸೆಯೂ ಸಿಕ್ಕಿದೆ. ಆದರೆ, ಕೊನೆ ಹಂತದ ಬದಲಾವಣೆ ಹೊರತುಪಡಿಸಿ ನಾಸೀರ್ ಪುನಃ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ