AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ನಾಗರಿಕ ಒಕ್ಕೂಟ ಪಟ್ಟು: ಕೋರ್ಟ್​ಗೆ ಸರ್ಕಾರದಿಂದ ಮೇಲ್ಮನವಿ ಸಾಧ್ಯತೆ

ರಾಜ್ಯೋತ್ಸವವನ್ನು ಕನ್ನಡ ಸಾಹಿತ್ಯ ಪರಿಷತ್​ ಜತೆಗೂಡಿ ಆಚರಿಸಲು ಕಂದಾಯ ಸಚಿವರು ಸಲಹೆ ನೀಡಿದ್ದಾರೆ ಎಂದು ನಾಗರಿಕ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ನಾಗರಿಕ ಒಕ್ಕೂಟ ಪಟ್ಟು: ಕೋರ್ಟ್​ಗೆ ಸರ್ಕಾರದಿಂದ ಮೇಲ್ಮನವಿ ಸಾಧ್ಯತೆ
ಚಾಮರಾಜಪೇಟೆ ಮೈದಾನದಲ್ಲಿ ಪೊಲೀಸ್ ಪಹರೆ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 16, 2022 | 11:10 AM

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ (Chamarajpet Maidan) ಸ್ವಾತಂತ್ರ್ಯ ದಿನಾಚರಣೆ ಮಾದರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನೂ (Kannada Rajyotsava) ಆಚರಿಸಬೇಕೆಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಒತ್ತಾಯಿಸಿದ್ದಾರೆ. ಕೋರ್ಟ್ ಆದೇಶದ ಪ್ರಕಾರ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವಕ್ಕೆ ಅನುಮತಿ ಇದೆ. ಹೀಗಾಗಿ ಸರ್ಕಾರವು ರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ಮೇಲ್ಮನವಿ ಸಲ್ಲಿಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಕುರಿತು ಕಂದಾಯ ಸಚಿವ ಆರ್‌.ಅಶೋಕ್ ಜೊತೆ ಮಾತನಾಡಿದ್ದೇವೆ. ರಾಜ್ಯೋತ್ಸವವನ್ನು ಕನ್ನಡ ಸಾಹಿತ್ಯ ಪರಿಷತ್​ನಿಂದ ಆಚರಿಸಲು ಸಲಹೆ ನೀಡಿದ್ದಾರೆ. ನಾಗರಿಕರ ಒಕ್ಕೂಟಕ್ಕೂ ಈ ಸಲಹೆಯು ಸಮ್ಮತವಾದುದಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಜೊತೆಗೂ ಚರ್ಚಿಸಿದ್ದೇವೆ. ನಾಡಹಬ್ಬದ ರೀತಿ ಆಚರಣೆಗೆ ಸರ್ಕಾರ ಸಲಹೆ ನೀಡಬಹುದು. ಕಂದಾಯ ಇಲಾಖೆಯೇ ಕೋರ್ಟ್ ಮೊರೆ ಹೋಗಿ ಅನುಮತಿ ಕೇಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಗಣೇಶೋತ್ಸವಕ್ಕೆ ಚಾಮರಾಜಪೇಟೆ ಮೈದಾನದಲ್ಲಿ ಅನುಮತಿ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದಿದ್ದವು. ನಂತರದ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್​ನಿಂದ ನಾಡಧ್ವಜ ಹಾರಿಸುವಂತೆ ಮನವಿ ಮಾಡಲಾಗಿತ್ತು. ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನವನ್ನೂ ಸೆಳೆಯಲಾಗಿದೆ.

ಒಕ್ಕೂಟ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ್ದ ಒಕ್ಕೂಟದ ಖಜಾಂಚಿ ಯಶವಂತ್, ಚಾಮರಾಜಪೇಟೆ ನಾಗರೀಕರ ಒಕ್ಕೂಟವೇ ಅಂತಲ್ಲ, ಶಾಸಕ ಜಮೀರ್ ಅಹಮದ್ ಖಾನ್ ಅವರೇ ಕನ್ನಡ ಬಾವುಟ ಹಾರಿಸಲಿ. 2006ರಲ್ಲೇ ಮೈದಾನದಲ್ಲಿ ನಾಡ ಧ್ವಜ ಹಾರಿಸುವುದಾಗಿ ಹೇಳಿದ್ದರು. ಮೈದಾನವು ಸರ್ಕಾರದ ಸ್ವತ್ತು ಎಂದು ಘೋಷಣೆ ಆದ ಮೇಲೆ ಕನ್ನಡ ಧ್ವಜ ಹಾರಿಸಬೇಕು ಎಂದು ಹೇಳಿದ್ದರು.

Published On - 11:09 am, Sun, 16 October 22

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ