AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ನಾಗರಿಕ ಒಕ್ಕೂಟದಿಂದ ಮತ್ತೊಂದು ಪತ್ರ

ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗಾಗಿ ಅನುಮತಿ ನೀಡುವಂತೆ ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟದಿಂದ ಬೆಂಗಳೂರು ನಗರ ಡಿಸಿಗೆ ಮತ್ತೊಂದು ಪತ್ರ ಬರೆಯಲಾಗಿದೆ.

ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ನಾಗರಿಕ ಒಕ್ಕೂಟದಿಂದ ಮತ್ತೊಂದು ಪತ್ರ
ಚಾಮರಾಜಪೇಟೆ ಈದ್ಗಾ ಮೈದಾನ
TV9 Web
| Edited By: |

Updated on: Oct 18, 2022 | 8:29 AM

Share

ಚಾಮರಾಜಪೇಟೆ: ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ(Kannada Rajyotsava) ಆಚರಣೆಗೆ ಸಿದ್ದತೆಗಳು ಜೋರಾಗಿವೆ. ಚಾಮರಾಜಪೇಟೆ ಮೈದಾನದಲ್ಲಿ(Chamarajpet Maidan) ಕಳೆದ ಬಾರಿ ಧ್ವಜ ಹಾರಿಸಲು, ಗಣೇಶ ಕೂರಿಸಲು ಶುರುವಾಗಿದ್ದ ಗಲಾಟೆ ಈಗ ಮತ್ತೆ ಶುರುವಾಗಿದೆ. ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗಾಗಿ ಅನುಮತಿ ನೀಡುವಂತೆ ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟದಿಂದ ಮತ್ತೊಂದು ಪತ್ರ ಬರೆಯಲಾಗಿದೆ.

ಚಾಮರಾಜಪೇಟೆ ನಾಗರಿಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಸ್.ರುಕ್ಮಾಂಗದ ಅವರು ಇಂದು ಬೆಂಗಳೂರು ನಗರ ಡಿಸಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ನ.1ರಿಂದ 30ರವರೆಗೆ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಿ. ರಾಜ್ಯೋತ್ಸವ ಹಿನ್ನೆಲೆ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಬೇಕು ಎಂದು ಕೋರಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಸಾಲಿನಲ್ಲಿ ಬಾರದ ಜಿಪಂ ನೌಕರನಿಗೆ ಕುಟುಂಬದ ಎದುರೇ ಉಪ ವಿಭಾಗಾಧಿಕಾರಿಯಿಂದ ಕಪಾಳ ಮೋಕ್ಷ 

ಕೂಡ ಕೋರ್ಟ್ ಆದೇಶದ ಪ್ರಕಾರ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವಕ್ಕೆ ಅನುಮತಿ ಇದೆ. ಹೀಗಾಗಿ ಸರ್ಕಾರವು ರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ಮೇಲ್ಮನವಿ ಸಲ್ಲಿಸಬೇಕಿದೆ ಎಂದು ಕೆಲ ದಿನಗಳ ಹಿಂದೆ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಆಗ್ರಹಿಸಿದ್ದರು.

ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಕುರಿತು ಕಂದಾಯ ಸಚಿವ ಆರ್‌.ಅಶೋಕ್ ಜೊತೆ ಮಾತನಾಡಿದ್ದೇವೆ. ರಾಜ್ಯೋತ್ಸವವನ್ನು ಕನ್ನಡ ಸಾಹಿತ್ಯ ಪರಿಷತ್​ನಿಂದ ಆಚರಿಸಲು ಸಲಹೆ ನೀಡಿದ್ದಾರೆ. ನಾಗರಿಕರ ಒಕ್ಕೂಟಕ್ಕೂ ಈ ಸಲಹೆಯು ಸಮ್ಮತವಾದುದಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಜೊತೆಗೂ ಚರ್ಚಿಸಿದ್ದೇವೆ. ನಾಡಹಬ್ಬದ ರೀತಿ ಆಚರಣೆಗೆ ಸರ್ಕಾರ ಸಲಹೆ ನೀಡಬಹುದು. ಕಂದಾಯ ಇಲಾಖೆಯೇ ಕೋರ್ಟ್ ಮೊರೆ ಹೋಗಿ ಅನುಮತಿ ಕೇಳುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದ್ದರು. ಸದ್ಯ ಈಗ ಎರಡನೇ ಬಾರಿಗೆ ಪತ್ರ ಬರೆಯಲಾಗಿದೆ. ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ನಾಗರಿಕ ಒಕ್ಕೂಟ ಪಟ್ಟು: ಕೋರ್ಟ್​ಗೆ ಸರ್ಕಾರದಿಂದ ಮೇಲ್ಮನವಿ ಸಾಧ್ಯತೆ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ