AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಬಿಸಿತುಪ್ಪವಾದ ಚಾಮರಾಜಪೇಟೆ ಈದ್ಗಾ ಗಣೇಶೋತ್ಸವ: ಪೊಲೀಸ್ ಇಲಾಖೆಯಿಂದ ಸಾಧಕ ಬಾದಕಗಳ ಚರ್ಚೆ

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಕೊಟ್ಟರೇ ಇದು ಬೆಂಗಳೂರಿಗೆ ಮಾತ್ರ ಸೀಮಿತವಾಗಲ್ಲ. ಇದು ಇಡೀ ರಾಜ್ಯಕ್ಕೆ ಪಸರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಬಿಸಿತುಪ್ಪವಾದ ಚಾಮರಾಜಪೇಟೆ ಈದ್ಗಾ ಗಣೇಶೋತ್ಸವ: ಪೊಲೀಸ್ ಇಲಾಖೆಯಿಂದ ಸಾಧಕ ಬಾದಕಗಳ ಚರ್ಚೆ
ಚಾಮರಾಜಪೇಟೆ ಈದ್ಗಾ ಮೈದಾನ
TV9 Web
| Edited By: |

Updated on: Aug 21, 2022 | 8:17 AM

Share

ಬೆಂಗಳೂರು: ಚಾಮರಾಜಪೇಟೆ (Chamarajpet) ಈದ್ಗಾ ಮೈದಾನದಲ್ಲಿ‌ ಗಣೇಶೋತ್ಸವ ಆಚರಣೆ ವಿಚಾರ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಬಿಸಿತುಪ್ಪವಾದಂತ್ತಾಗಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಕುರಿತು ಪೊಲೀಸ್ ಇಲಾಖೆಯಲ್ಲಿ ಸಾಧಕ ಬಾದಕಗಳ ಚರ್ಚೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಕೊಟ್ಟರೇ ಇದು ಬೆಂಗಳೂರಿಗೆ ಮಾತ್ರ ಸೀಮಿತವಾಗಲ್ಲ. ಇದು ಇಡೀ ರಾಜ್ಯಕ್ಕೆ ಪಸರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ರಾಜ್ಯದ ಪ್ರತಿಯೊಂದು ವಿವಾದಿತ ಜಾಗದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಕೇಳುವ ಸಾಧ್ಯತೆಯಿದ್ದು, ರಾಜ್ಯದ ಪ್ರತಿಯೊಂದು ವಿವಾದಿತ ಜಾಗದಲ್ಲಿ ಗಣೇಶ ಕೂರಿಸಲು ಅನುಮತಿ ಕೇಳ್ತಾರೆ. ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುತ್ತೆ. ಇದು ಬೇರೆ ರೀತಿಯ ಘಟನೆಗಳನ್ನ ಸೃಷ್ಟಿ ಮಾಡಲು ಅವಕಾಶ ನೀಡಿದಂತಾಗುತ್ತೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುವ ಸಾಧ್ಯತೆಯೇ ಹೆಚ್ಚು. ಹೀಗೆ ಹಲವು ಆಯಾಮಗಳಲ್ಲಿ ಪೊಲೀಸರು ಚರ್ಚೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ನಾಗರಿಕರ ಒಕ್ಕೂಟ ಪಟ್ಟು: ಕಂದಾಯ ಇಲಾಖೆಗೆ 5 ದಿನಗಳ ಡೆಡ್​ಲೈನ್​

ಇದೇ ವೇಳೆ ಗಣೇಶೋತ್ಸವ ಕುರಿತು ತಮ್ಮ ವ್ಯಾಪ್ತಿಯ ಪ್ರತಿ ಏರಿಯಾ ಮಾಹಿತಿ ಕಲೆ ಹಾಕಲು ಪೊಲೀಸ್ ಇನ್ಸ್‌ಪೆಕ್ಟರ್​ಗಳಿಗೆ ಸೂಚನೆ ನೀಡಲಾಗಿದೆ. ಗಣೇಶೋತ್ಸವ ಆಚರಣೆ ಮಾಡುತ್ತಿರುವುದು ಯಾರು. ಎಲ್ಲಿ ಆಚರಣೆ ಮಾಡುತ್ತಿದ್ದಾರೆ, ಬಿಬಿಎಂಪಿ ಅನುಮತಿ ಪಡೆದಿದ್ದಾರಾ, ಸ್ಥಳ ಖಾಸಗಿಯವರಿಗೆ ಸೇರಿದ್ದ, ಅಥವಾ ಬಿಬಿಎಂಪಿ ಜಾಗನಾ, ರಸ್ತೆನಾ, ಏನೆಲ್ಲಾ ವ್ಯವಸ್ಥೆ ಮಾಡಿದ್ದಾರೆ. ಗಣೇಶ ಕೂರಿಸುವ ಏರಿಯಾ ಎಂತಹುದು, ಅಲ್ಲಿ ವಿವಾದಗಳು ಏನಾದ್ರು ಇದಿಯಾ, ಎಷ್ಟು ಜನ ಸೇರಬಹುದು, ಸ್ಥಳಾವಕಾಶ ಹೇಗಿದೆ, ಮೈಕ್ ಸೆಟ್, ಆರ್ಕೆಸ್ಟ್ರಾ ಬಳಕೆ ಮಾಡ್ತಾರಾ ಹೀಗೆ ಹಲವು ಮಾಹಿತಿಗಳನ್ನ ಕಲೆ ಹಾಕಲು ಠಾಣಾವಾರು ಇನ್ಸ್‌ಪೆಕ್ಟರ್ ಎಸಿಪಿಗಳಿಗೆ ಸೂಚನೆ ನೀಡಿದ್ದು, ನಗರದ ಯಾವ ಏರಿಯಾದಲ್ಲೂ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಪಾದರಾಯನಪುರದಿಂದ ಟೌನ್ ಹಾಲ್​​ವರೆಗೆ ಬೃಹತ್ ಮೆರವಣಿಗೆ

ತೀವ್ರ ಕುತೂಹಲ ಕೆರಳಿಸಿದ ಚಾಮರಾಜಪೇಟೆ ಗಣೇಶೋತ್ಸವಕ್ಕೆ ಸದ್ಯ ಗಣೇಶ ಮೆರವಣಿಗೆಗೆ ರೋಡ್ ಮ್ಯಾಪ್ ಸಿದ್ದವಾಗಿದೆ. ಚಾಮರಾಜಪೇಟೆ ಗಣೇಶೋತ್ಸವ ಸಮಿತಿ ಮತ್ತು ಬೆಂಗಳೂರು ಮಹಾನಗರ ಗಣೇಶ ಸಮಿತಿಯಿಂದ ಚಾಮರಾಜಪೇಟೆ ಕ್ಷೇತ್ರದ ಗಲ್ಲಿಗಲ್ಲಿಗಳಲ್ಲೂ ವಿನಾಯಕನ ಮೆರವಣಿಗೆ ನಡೆಯಲಿದೆ. ಪಾದರಾಯನಪುರದಿಂದ ಈ ಬಾರಿ ಗಣೇಶೋತ್ಸವದ ರ್ಯಾಲಿ‌ ಆರಂಭವಾಗಲಿದೆ. ಚಾಮರಾಜಪೇಟೆ ಕ್ಷೇತ್ರದ ಎಲ್ಲ ವಾರ್ಡಿಗಳಲ್ಲೂ ವಿಘ್ನ ನಿವಾರಕನ ಮೆರವಣಿಗೆ ನಡೆಯಲಿದ್ದು, ಪಾದರಾಯನಪುರದಿಂದ, ಮೈಸೂರು ಬ್ಯಾಂಕ್ ಸರ್ಕಲ್​ವರೆಗೆ ರ್ಯಾಲಿ ನಡೆಸಲು ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿಯಿಂದ ಕರೆ ನೀಡಲಾಗಿದೆ. ಚಾಮರಾಜಪೇಟೆ ಆಟದ ಮೈದಾನದಲ್ಲಿ 11 ದಿನದ ಗಣೇಶೋತ್ಸವಕ್ಕೆ ನಿರ್ಧರಿಸಲಾಗಿದೆ ಎಂದು ಟಿವಿ9ಗೆ ಬೆಂಗಳೂರು ಗಣೇಶ ಉತ್ಸವ ಸಮಿತಿಯ ಕಾರ್ಯದರ್ಶಿ ಪ್ರಕಾಶ್ ರಾಜು ಹೇಳಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ