AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವ ಆಚರಣೆ ವಿಚಾರ: ಇಂದು ಮೇಲ್ಮನವಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್​

ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವ ಆಚರಿಸುವ ವಿಚಾರವಾಗಿ ವಕ್ಫ್ ಬೋರ್ಡ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವ ಆಚರಣೆ ವಿಚಾರ: ಇಂದು ಮೇಲ್ಮನವಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್​
ಚಾಮರಾಜಪೇಟೆ ಈದ್ಗಾ ಮೈದಾನ​
TV9 Web
| Edited By: |

Updated on:Aug 30, 2022 | 11:52 AM

Share

ಬೆಂಗಳೂರು: ಚಾಮರಾಜಪೇಟೆ (Chamrajpet) ಈದ್ಗಾ ಮೈದಾನ  (Idgah Maidan)  ಗಣೇಶೋತ್ಸವ (Ganesh Chaturthi) ಆಚರಿಸುವ ವಿಚಾರವಾಗಿ ವಕ್ಫ್ ಬೋರ್ಡ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಇಂದು ವಿಚಾರಣೆ ನಡೆಸಲಿದೆ. ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್​ ಅನುಮತಿ ನೀಡಿದ ಹಿನ್ನೆಲೆ ಮುಸ್ಲಿಂ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಸಂಬಂಧ ಇಂದು ವಿಚಾರಣೆ ನಡೆಯಲಿದೆ.

ಸುಪ್ರೀಂ ಕೋರ್ಟ್ ಆದೇಶದ ಬಳಿಕ ರಾಜ್ಯ ಸರ್ಕಾರದ ಅಂತಿಮ ನಿರ್ಧಾರ ಪ್ರಕಟ ಮಾಡಲಿದೆ. ಹೀಗಾಗಿ ಚಾಮರಾಜಪೇಟೆ ಈದ್ಗಾ ಮೈದಾನದ ಗಣೇಶೋತ್ಸವ ತೀವ್ರ ಕುತೂಹಲ ಕೆರಳಿಸಿದೆ. ಚಾಮರಾಜಪೇಟೆ ಮೈದಾನದ ಸುತ್ತಮುತ್ತ ಬೀಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದ್ದು, 3 ಡಿಸಿಪಿ, 21 ಎಸಿಪಿ, 47 ಇನ್ಸ್​ಪೆಕ್ಟರ್​​ಗಳು, 130 ಪಿಎಸ್​ಐ, 126 ASI, 900 ಕಾನ್ಸ್‌ಟೇಬಲ್​ಗಳು, 120 RAF ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೈದಾನದ ಭದ್ರತೆಗೆ ಒಟ್ಟು 1,500 ಪೊಲೀಸರು ಇಂದು ಸಂಜೆಯಿಂದಲೇ ನಿಯೋಜನೆಗೊಳ್ಳಲಿದ್ದಾರೆ.

ಈ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್  ಮಾತನಾಡಿ ಗಣೇಶ ಹಬ್ಬದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಿದ್ದೇವೆ. ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲು ರೂಟ್ ಮಾರ್ಚ್ ಮಾಡಿದ್ದೇವೆ ಎಂದರು.

ಚಾಮರಾಜಪೇಟೆಯಲ್ಲಿ ಮೂರು ದಿನಗಳ ಕಾಲ ಬಿಗಿ ಭದ್ರತೆ ಇರಲಿದೆ. ಹೆಚ್ಚಿನ ನಿಗಾ ಇಡಲು ಡ್ರೋನ್ ಕೂಡ ಬಳಕೆ ಮಾಡಲಾಗುತ್ತೆ.  ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು. ಗಣೇಶೋತ್ಸವ ಶಾಂತಿಯುತವಾಗಿ ಆಗುತ್ತೆ ಎನ್ನುವ ನಂಬಿಕೆ ಇದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Tue, 30 August 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?