AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವ ಆಚರಣೆ ವಿಚಾರ: ಇಂದು ಮೇಲ್ಮನವಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್​

ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವ ಆಚರಿಸುವ ವಿಚಾರವಾಗಿ ವಕ್ಫ್ ಬೋರ್ಡ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವ ಆಚರಣೆ ವಿಚಾರ: ಇಂದು ಮೇಲ್ಮನವಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್​
ಚಾಮರಾಜಪೇಟೆ ಈದ್ಗಾ ಮೈದಾನ​
TV9 Web
| Edited By: ವಿವೇಕ ಬಿರಾದಾರ|

Updated on:Aug 30, 2022 | 11:52 AM

Share

ಬೆಂಗಳೂರು: ಚಾಮರಾಜಪೇಟೆ (Chamrajpet) ಈದ್ಗಾ ಮೈದಾನ  (Idgah Maidan)  ಗಣೇಶೋತ್ಸವ (Ganesh Chaturthi) ಆಚರಿಸುವ ವಿಚಾರವಾಗಿ ವಕ್ಫ್ ಬೋರ್ಡ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಇಂದು ವಿಚಾರಣೆ ನಡೆಸಲಿದೆ. ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್​ ಅನುಮತಿ ನೀಡಿದ ಹಿನ್ನೆಲೆ ಮುಸ್ಲಿಂ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಸಂಬಂಧ ಇಂದು ವಿಚಾರಣೆ ನಡೆಯಲಿದೆ.

ಸುಪ್ರೀಂ ಕೋರ್ಟ್ ಆದೇಶದ ಬಳಿಕ ರಾಜ್ಯ ಸರ್ಕಾರದ ಅಂತಿಮ ನಿರ್ಧಾರ ಪ್ರಕಟ ಮಾಡಲಿದೆ. ಹೀಗಾಗಿ ಚಾಮರಾಜಪೇಟೆ ಈದ್ಗಾ ಮೈದಾನದ ಗಣೇಶೋತ್ಸವ ತೀವ್ರ ಕುತೂಹಲ ಕೆರಳಿಸಿದೆ. ಚಾಮರಾಜಪೇಟೆ ಮೈದಾನದ ಸುತ್ತಮುತ್ತ ಬೀಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದ್ದು, 3 ಡಿಸಿಪಿ, 21 ಎಸಿಪಿ, 47 ಇನ್ಸ್​ಪೆಕ್ಟರ್​​ಗಳು, 130 ಪಿಎಸ್​ಐ, 126 ASI, 900 ಕಾನ್ಸ್‌ಟೇಬಲ್​ಗಳು, 120 RAF ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೈದಾನದ ಭದ್ರತೆಗೆ ಒಟ್ಟು 1,500 ಪೊಲೀಸರು ಇಂದು ಸಂಜೆಯಿಂದಲೇ ನಿಯೋಜನೆಗೊಳ್ಳಲಿದ್ದಾರೆ.

ಈ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್  ಮಾತನಾಡಿ ಗಣೇಶ ಹಬ್ಬದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಿದ್ದೇವೆ. ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲು ರೂಟ್ ಮಾರ್ಚ್ ಮಾಡಿದ್ದೇವೆ ಎಂದರು.

ಚಾಮರಾಜಪೇಟೆಯಲ್ಲಿ ಮೂರು ದಿನಗಳ ಕಾಲ ಬಿಗಿ ಭದ್ರತೆ ಇರಲಿದೆ. ಹೆಚ್ಚಿನ ನಿಗಾ ಇಡಲು ಡ್ರೋನ್ ಕೂಡ ಬಳಕೆ ಮಾಡಲಾಗುತ್ತೆ.  ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು. ಗಣೇಶೋತ್ಸವ ಶಾಂತಿಯುತವಾಗಿ ಆಗುತ್ತೆ ಎನ್ನುವ ನಂಬಿಕೆ ಇದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Tue, 30 August 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?