AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zameer Ahmed: ಶಾಸಕರ ಕಚೇರಿಯಲ್ಲಿ ಗಣೇಶೋತ್ಸವಕ್ಕೆ ಮುಂದಾದ ಜಮೀರ್ ಅಹ್ಮದ್; ಚುನಾವಣೆ ತಂತ್ರ ಎಂದ ಸ್ಥಳೀಯರು

ಜಮೀರ್ ಅಹ್ಮದ್ ಇಷ್ಟು ದಿನ ಕ್ಷೇತ್ರದ ಜನರನ್ನ ಗೂಬೆ ಮಾಡಿದ್ದಾರೆ. ಇನ್ಮುಂದೆ ಕ್ಷೇತ್ರದ ಜನರೇ ಜಮೀರ್​ ಅವರನ್ನು ಗೂಬೆ ಮಾಡುವ ಸಮಯ ಬಂದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Zameer Ahmed: ಶಾಸಕರ ಕಚೇರಿಯಲ್ಲಿ ಗಣೇಶೋತ್ಸವಕ್ಕೆ ಮುಂದಾದ ಜಮೀರ್ ಅಹ್ಮದ್; ಚುನಾವಣೆ ತಂತ್ರ ಎಂದ ಸ್ಥಳೀಯರು
ಜಮೀರ್ ಅಹ್ಮದ್ ಖಾನ್ ಆಯೋಜಿಸಿರುವ ಗಣೇಶೋತ್ಸವ
TV9 Web
| Edited By: |

Updated on:Sep 05, 2022 | 7:41 AM

Share

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ (Chamarajpet MLA Zameer Ahmed) ಈ ಬಾರಿ ಗಣೇಶೋತ್ಸವ ಆಚರಿಸಲು ಮುಂದಾಗಿರುವುದಕ್ಕೆ ಸ್ಥಳೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಮತಬೇಟೆಗಾಗಿಯೇ ಗಣೇಶೋತ್ಸವ ನಡೆಸಲು ಮುಂದಾಗಿದ್ದಾರೆ. ಸತತ 4 ಬಾರಿ ಶಾಸಕರಾಗಿದ್ದಾಗಲೂ ಅವರು ಒಂದು ಬಾರಿಯೂ ಗಣೇಶೋತ್ಸವ ಮಾಡಿಲ್ಲ. ಈಗ ಗಣೇಶೋತ್ಸವ ಮಾಡಲು ಮುಂದಾಗಿದ್ದಾರೆ. ಇದು ಹೊಸ ನಾಟಕ ಎಂದು ಹಲವರು ಆಕ್ಷೇಪಿಸಿದ್ದಾರೆ.

ಜಮೀರ್ ಅಹ್ಮದ್ ಇಷ್ಟು ದಿನ ಕ್ಷೇತ್ರದ ಜನರನ್ನ ಗೂಬೆ ಮಾಡಿದ್ದಾರೆ. ಇನ್ಮುಂದೆ ಕ್ಷೇತ್ರದ ಜನರೇ ಜಮೀರ್​ ಅವರನ್ನು ಗೂಬೆ ಮಾಡುವ ಸಮಯ ಬಂದಿದೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಜನ ಪಾಠ ಕಲಿಸುತ್ತಾರೆ. ಗಣೇಶನ ಮುಖವಾಡ ಧರಿಸಿ ಕ್ಷೇತ್ರದ ಜನರ ಮನಸ್ಸು ಗೆಲ್ಲಲು ಸಾಧ್ಯವಿಲ್ಲ. ಸಮಯ ಬಂದಾಗ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಜಮೀರ್ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಣೇಶೋತ್ಸವದ ಮೂಲಕ ಶಾಸಕ ಜಮೀರ್ ಅಹ್ಮದ್ ಹಿಂದೂ ಸಂಘಟನೆಗಳ ಮನವೊಲಿಕೆಗೆ ಮುಂದಾಗಿರಬಹುದು ಎಂದು ವಿಶ್ಲೇಷಿಸಲಾಗಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶನನ್ನು ಕೂರಿಸುವ ವಿಚಾರದಲ್ಲಿ ಜಮೀರ್ ಇಟ್ಟ ಹಲವು ಹೆಜ್ಜೆಗಳು ಜನರಿಗೆ ಇಷ್ಟವಾಗಿರಲಿಲ್ಲ. ಮತದಾರರ ಮನಸ್ಸಿನಲ್ಲಿ ಮೂಡಿರುವ ಬಿರುಕಿಗೆ ತೇಪೆ ಹಾಕಲು ಜಮೀರ್ ಅವರು ತಮ್ಮ ಕಚೇರಿಯಲ್ಲಿಯೇ ಗಣೇನ ಮೂರ್ತಿ ಪ್ರತಿಷ್ಠಾಪಿಸಲು ಮುಂದಾಗಿದ್ದಾರೆ ಎಂದು ಜನರು ದೂರುತ್ತಿದ್ದಾರೆ.

ಇಂದು (ಸೆಪ್ಟೆಂಬರ್ 5) ಬೆಳಿಗ್ಗೆ 9:15ರಿಂದ 10 ಗಂಟೆಯ ಅವಧಿಯಲ್ಲಿ ಚಾಮರಾಜಪೇಟೆ ವರ್ತಕರ ಬೀದಿಯಲ್ಲಿರುವ ಶಾಸಕ ಜಮೀರ್ ಅಹ್ಮದ್ ಕಚೇರಿಯಲ್ಲಿಯೇ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ಪೂಜೆ ನಡೆಯುತ್ತಿದೆ. ಇಂದು ಸಂಜೆ 4 ಗಂಟೆಗೆ ಬಾಣಬಿರುಸುಗಳ ಅದ್ಧೂರಿ ಮರವಣಿಗೆಯೊಂದಿಗೆ ವಿದ್ಯಾಗಣಪತಿ ಮೂರ್ತಿಯ ವಿಸರ್ಜನೆ ನಡೆಯಲಿದೆ. ಅಖಿಲ ಕರ್ನಾಟಕ ಜಿ.ಝೆಡ್.ಜಮೀರ್ ಅಹ್ಮದ್ ಖಾನ್ ಒಕ್ಕೂಟವು ಗಣೇಶೋತ್ಸವ ಆಯೋಜಿಸಿದೆ.

ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ಮತ್ತೆ ತಾರಕಕ್ಕೇರಿದ ಗಣೇಶೋತ್ಸವ ಗದ್ದಲ: ಮೆರವಣಿಗೆ ವಿಚಾರವಾಗಿ ಸಮಿತಿ, ಪೊಲೀಸರ ನಡುವೆ ಸಮರ

Published On - 7:41 am, Mon, 5 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?