AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajpet Bandh: ಚಾಮರಾಜಪೇಟೆ ಬಂದ್​ಗೆ ಹಿಂದುತ್ವವಾದಿ ಸಂಘಟನೆಗಳ ಬೆಂಬಲ; ಬಿಗಿ ಪೊಲೀಸ್ ಬಂದೋಬಸ್ತ್​

50ಕ್ಕೂ ಹೆಚ್ಚು ಸಂಘಟನೆಗಳು ನೀಡಿರುವ ಬಂದ್ ಕರೆ ಯಶಸ್ವಿಯಾಗಬಹುದು ಎಂದು ಹೇಳಲಾಗುತ್ತಿದೆ. ಬಂದ್ ಕರೆ ಕುರಿತು ಜಾಗೃತಿ ಮೂಡಿಸಲು 10 ಸಾವಿರಕ್ಕೂ ಹೆಚ್ಚು ಕರಪತ್ರಗಳನ್ನು ಹಂಚಲಾಗುತ್ತಿದೆ.

Chamarajpet Bandh: ಚಾಮರಾಜಪೇಟೆ ಬಂದ್​ಗೆ ಹಿಂದುತ್ವವಾದಿ ಸಂಘಟನೆಗಳ ಬೆಂಬಲ; ಬಿಗಿ ಪೊಲೀಸ್ ಬಂದೋಬಸ್ತ್​
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jul 11, 2022 | 3:05 PM

Share

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಚಾಮರಾಜಪೇಟೆ ನಾಗರಿಕ ಒಕ್ಕೂಟ ನೀಡಿರುವ ಬಂದ್ ಕರೆ​ಗೆ ಹಿಂದೂ ಜನಜಾಗೃತಿ ಸಮಿತಿ, ವಿಶ್ವ ಸನಾತನ ಪರಿಷತ್, ಶ್ರೀರಾಮಸೇನೆ, ಬಜರಂಗದಳ, ಹಿಂದೂ ಜಾಗರಣ ಸಮಿತಿ ಸೇರಿದಂತೆ ಹಲವು ಹಿಂದುತ್ವವಾದಿ ಸಂಘಟನೆಗಳು ಬೆಂಬಲ ಘೋಷಿಸಿವೆ. 50ಕ್ಕೂ ಹೆಚ್ಚು ಸಂಘಟನೆಗಳು ನೀಡಿರುವ ಬಂದ್ ಕರೆ ಯಶಸ್ವಿಯಾಗಬಹುದು ಎಂದು ಹೇಳಲಾಗುತ್ತಿದೆ. ಬಂದ್ ಕರೆ ಕುರಿತು ಜಾಗೃತಿ ಮೂಡಿಸಲು ನಾಗರಿಕ ಒಕ್ಕೂಟದ ಕಾರ್ಯಕರ್ತರು 10 ಸಾವಿರಕ್ಕೂ ಹೆಚ್ಚು ಕರಪತ್ರಗಳನ್ನು ಹಂಚಲು ಮುಂದಾಗಿದ್ದಾರೆ. ಅಂಗಡಿ, ಬ್ಯಾಂಕ್, ಶಾಲಾ-ಕಾಲೇಜು, ಮಾಲ್​ಗಳಲ್ಲಿ ಜಾಗೃತಿ ಮೂಡಿಸಲು ಯತ್ನಿಸುತ್ತಿದ್ದಾರೆ. ಹಿಂದುತ್ವವಾದಿ ಸಂಘಟನೆಗಳ ಮುಖಂಡರಾದ ಮೋಹನ್ ಗೌಡ, ಭಾಸ್ಕರನ್ ಕರಪತ್ರ ಹಂಚುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಚಾಮರಾಜಪೇಟೆ ಬಂದ್​ಗೆ ಬೆಂಬಲ ನೀಡುವಂತೆ ಮೈಕ್ ಅಳವಡಿಸಿರುವ ಆಟೊಗಳ ಮೂಲಕವೂ ಮನವಿ ಮಾಡಲಾಗುತ್ತಿದೆ. ನಾಳೆ ಒಂದು ದಿನದ ಮಟ್ಟಿಗೆ ಅಂಗಡಿ ಮುಂಗಟ್ಟು ತೆರೆಯಬೇಡಿ. ಮೈದಾನದ ಉಳಿವಿಗಾಗಿ ಕೈಜೋಡಿಸಿ ಎಂದು ಮುಖಂಡರು ಚಾಮರಾಜಪೇಟೆ ಕ್ಷೇತ್ರದ ಎಲ್ಲ 7 ವಾರ್ಡ್​ಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಛಲವಾದಿಪಾಳ್ಯ, ಕೆ.ಆರ್.ಮಾರ್ಕೆಟ್, ಆಜಾದ್​ನಗರ ವಾರ್ಡ್, ಚಾಮರಾಜಪೇಟೆ, ಪಾದರಾಯನಪುರ, ರಾಯಪುರ ವಾರ್ಡ್, ಜೆಜೆಆರ್​ ನಗರ ವಾರ್ಡ್​​ಗಳಲ್ಲಿ ಮೈಕ್ ಕಟ್ಟಿರುವ ಆಟೊಗಳು ಸಂಚರಿಸುತ್ತಿವೆ.

ಬಿಗಿ ಬಂದೋಬಸ್ತ್: ಆರಗ ಜ್ಞಾನೇಂದ್ರ

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇನೆ. ಬಂದ್ ಸಂದರ್ಭದಲ್ಲಿ ಚಾಮರಾಜಪೇಟೆ ಸುತ್ತಮುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗುವುದು’ ಎಂದು ಹೇಳಿದರು.

ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಸಚಿವರು ಹೋಗುತ್ತಾರೆ. ಆಗುಂಬೆ ಬಳಿ ಗುಡ್ಡ ಕುಸಿದು ರಸ್ತೆ ಸಂಪರ್ಕ ಸ್ಥಗಿತವಾಗಿದೆ. ಕೂಡಲೇ ದುರಸ್ತಿ ಮಾಡುವಂತೆ ಸೂಚನೆ ನೀಡಲಾಗಿದೆ. ಬೊಮ್ಮಾಯಿ ಸರ್ಕಾರ ಮುಂಜಾಗ್ರತಾ ಕ್ರಮಕೈಗೊಂಡು ಮಳೆ ಹಾನಿಗೆ ತಕ್ಷಣ ಪರಿಹಾರ ಕೂಡ ಕೊಡುತ್ತಿದೆ ಎಂದು ತಿಳಿಸಿದರು. ಇಷ್ಟುದಿನ ಜಿಲ್ಲಾಧಿಕಾರಿಗಳ ಬಳಿ ಹಣ ಇರಿಸಲಾಗುತ್ತಿತ್ತು. ಈಗ ತಹಶಿಲ್ದಾರರ ಖಾತೆಗೆ ಹಣ ನೀಡಲಾಗುತ್ತಿದೆ. ಮನೆ ಪರಿಹಾರಕ್ಕಾಗಿ ತಕ್ಷಣಕ್ಕೆ ₹ 10 ಸಾವಿರ ಕೊಡಲಾಗುತ್ತಿದೆ ಎಂದು ತಿಳಿಸಿದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ