AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajpet Bandh: ಚಾಮರಾಜಪೇಟೆ ಬಂದ್​ಗೆ ಹಿಂದುತ್ವವಾದಿ ಸಂಘಟನೆಗಳ ಬೆಂಬಲ; ಬಿಗಿ ಪೊಲೀಸ್ ಬಂದೋಬಸ್ತ್​

50ಕ್ಕೂ ಹೆಚ್ಚು ಸಂಘಟನೆಗಳು ನೀಡಿರುವ ಬಂದ್ ಕರೆ ಯಶಸ್ವಿಯಾಗಬಹುದು ಎಂದು ಹೇಳಲಾಗುತ್ತಿದೆ. ಬಂದ್ ಕರೆ ಕುರಿತು ಜಾಗೃತಿ ಮೂಡಿಸಲು 10 ಸಾವಿರಕ್ಕೂ ಹೆಚ್ಚು ಕರಪತ್ರಗಳನ್ನು ಹಂಚಲಾಗುತ್ತಿದೆ.

Chamarajpet Bandh: ಚಾಮರಾಜಪೇಟೆ ಬಂದ್​ಗೆ ಹಿಂದುತ್ವವಾದಿ ಸಂಘಟನೆಗಳ ಬೆಂಬಲ; ಬಿಗಿ ಪೊಲೀಸ್ ಬಂದೋಬಸ್ತ್​
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 11, 2022 | 3:05 PM

Share

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಚಾಮರಾಜಪೇಟೆ ನಾಗರಿಕ ಒಕ್ಕೂಟ ನೀಡಿರುವ ಬಂದ್ ಕರೆ​ಗೆ ಹಿಂದೂ ಜನಜಾಗೃತಿ ಸಮಿತಿ, ವಿಶ್ವ ಸನಾತನ ಪರಿಷತ್, ಶ್ರೀರಾಮಸೇನೆ, ಬಜರಂಗದಳ, ಹಿಂದೂ ಜಾಗರಣ ಸಮಿತಿ ಸೇರಿದಂತೆ ಹಲವು ಹಿಂದುತ್ವವಾದಿ ಸಂಘಟನೆಗಳು ಬೆಂಬಲ ಘೋಷಿಸಿವೆ. 50ಕ್ಕೂ ಹೆಚ್ಚು ಸಂಘಟನೆಗಳು ನೀಡಿರುವ ಬಂದ್ ಕರೆ ಯಶಸ್ವಿಯಾಗಬಹುದು ಎಂದು ಹೇಳಲಾಗುತ್ತಿದೆ. ಬಂದ್ ಕರೆ ಕುರಿತು ಜಾಗೃತಿ ಮೂಡಿಸಲು ನಾಗರಿಕ ಒಕ್ಕೂಟದ ಕಾರ್ಯಕರ್ತರು 10 ಸಾವಿರಕ್ಕೂ ಹೆಚ್ಚು ಕರಪತ್ರಗಳನ್ನು ಹಂಚಲು ಮುಂದಾಗಿದ್ದಾರೆ. ಅಂಗಡಿ, ಬ್ಯಾಂಕ್, ಶಾಲಾ-ಕಾಲೇಜು, ಮಾಲ್​ಗಳಲ್ಲಿ ಜಾಗೃತಿ ಮೂಡಿಸಲು ಯತ್ನಿಸುತ್ತಿದ್ದಾರೆ. ಹಿಂದುತ್ವವಾದಿ ಸಂಘಟನೆಗಳ ಮುಖಂಡರಾದ ಮೋಹನ್ ಗೌಡ, ಭಾಸ್ಕರನ್ ಕರಪತ್ರ ಹಂಚುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಚಾಮರಾಜಪೇಟೆ ಬಂದ್​ಗೆ ಬೆಂಬಲ ನೀಡುವಂತೆ ಮೈಕ್ ಅಳವಡಿಸಿರುವ ಆಟೊಗಳ ಮೂಲಕವೂ ಮನವಿ ಮಾಡಲಾಗುತ್ತಿದೆ. ನಾಳೆ ಒಂದು ದಿನದ ಮಟ್ಟಿಗೆ ಅಂಗಡಿ ಮುಂಗಟ್ಟು ತೆರೆಯಬೇಡಿ. ಮೈದಾನದ ಉಳಿವಿಗಾಗಿ ಕೈಜೋಡಿಸಿ ಎಂದು ಮುಖಂಡರು ಚಾಮರಾಜಪೇಟೆ ಕ್ಷೇತ್ರದ ಎಲ್ಲ 7 ವಾರ್ಡ್​ಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಛಲವಾದಿಪಾಳ್ಯ, ಕೆ.ಆರ್.ಮಾರ್ಕೆಟ್, ಆಜಾದ್​ನಗರ ವಾರ್ಡ್, ಚಾಮರಾಜಪೇಟೆ, ಪಾದರಾಯನಪುರ, ರಾಯಪುರ ವಾರ್ಡ್, ಜೆಜೆಆರ್​ ನಗರ ವಾರ್ಡ್​​ಗಳಲ್ಲಿ ಮೈಕ್ ಕಟ್ಟಿರುವ ಆಟೊಗಳು ಸಂಚರಿಸುತ್ತಿವೆ.

ಬಿಗಿ ಬಂದೋಬಸ್ತ್: ಆರಗ ಜ್ಞಾನೇಂದ್ರ

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇನೆ. ಬಂದ್ ಸಂದರ್ಭದಲ್ಲಿ ಚಾಮರಾಜಪೇಟೆ ಸುತ್ತಮುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗುವುದು’ ಎಂದು ಹೇಳಿದರು.

ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಸಚಿವರು ಹೋಗುತ್ತಾರೆ. ಆಗುಂಬೆ ಬಳಿ ಗುಡ್ಡ ಕುಸಿದು ರಸ್ತೆ ಸಂಪರ್ಕ ಸ್ಥಗಿತವಾಗಿದೆ. ಕೂಡಲೇ ದುರಸ್ತಿ ಮಾಡುವಂತೆ ಸೂಚನೆ ನೀಡಲಾಗಿದೆ. ಬೊಮ್ಮಾಯಿ ಸರ್ಕಾರ ಮುಂಜಾಗ್ರತಾ ಕ್ರಮಕೈಗೊಂಡು ಮಳೆ ಹಾನಿಗೆ ತಕ್ಷಣ ಪರಿಹಾರ ಕೂಡ ಕೊಡುತ್ತಿದೆ ಎಂದು ತಿಳಿಸಿದರು. ಇಷ್ಟುದಿನ ಜಿಲ್ಲಾಧಿಕಾರಿಗಳ ಬಳಿ ಹಣ ಇರಿಸಲಾಗುತ್ತಿತ್ತು. ಈಗ ತಹಶಿಲ್ದಾರರ ಖಾತೆಗೆ ಹಣ ನೀಡಲಾಗುತ್ತಿದೆ. ಮನೆ ಪರಿಹಾರಕ್ಕಾಗಿ ತಕ್ಷಣಕ್ಕೆ ₹ 10 ಸಾವಿರ ಕೊಡಲಾಗುತ್ತಿದೆ ಎಂದು ತಿಳಿಸಿದರು.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ