AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಕ್ಕೇರುತ್ತಿರುವ ಚಾಮರಾಜಪೇಟೆ ಮೈದಾನ ವಿವಾದ! ಬಿಬಿಎಂಪಿ ಹೇಳಿಕೆ ವಿರುದ್ಧ ತಿರುಗಿ ಬಿದ್ದ ಸ್ಥಳೀಯ ನಿವಾಸಿಗಳು, ನಾಳೆ ಮಹತ್ವದ ಸಭೆ

ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಹುಟ್ಟು ಹಾಕುತ್ತಿದ್ದಾರೆಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ, ನಾಳೆ (ಜೂನ್ 03) ಬೆಳಗ್ಗೆ 10.30ಕ್ಕೆ ಜಂಗಮ ಮಠದಲ್ಲಿ ಸಭೆ ನಡೆಸುವುದಕ್ಕೆ ನಿರ್ಧರಿಸಿದೆ.

ತಾರಕ್ಕೇರುತ್ತಿರುವ ಚಾಮರಾಜಪೇಟೆ ಮೈದಾನ ವಿವಾದ! ಬಿಬಿಎಂಪಿ ಹೇಳಿಕೆ ವಿರುದ್ಧ ತಿರುಗಿ ಬಿದ್ದ ಸ್ಥಳೀಯ ನಿವಾಸಿಗಳು, ನಾಳೆ ಮಹತ್ವದ ಸಭೆ
ಚಾಮರಾಜಪೇಟೆಯ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Updated By: sandhya thejappa|

Updated on:Jul 02, 2022 | 9:15 AM

Share

ಬೆಂಗಳೂರು: ಚಾಮರಾಜಪೇಟೆ (Chamrajpet) ಈದ್ಗಾ ಮೈದಾನ (Idgah Maidan) ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸದ್ಯ ಬಿಬಿಎಂಪಿ ಹೇಳಿಕೆ ವಿರುದ್ಧ ಸ್ಥಳೀಯ ನಿವಾಸಿಗಳು ತಿರುಗಿ ಬಿದ್ದಿದ್ದು, ಸಭೆ ನಡೆಸಲು ಮುಂದಾಗಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಹುಟ್ಟು ಹಾಕುತ್ತಿದ್ದಾರೆಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ, ನಾಳೆ (ಜುಲೈ 03) ಬೆಳಗ್ಗೆ 10.30ಕ್ಕೆ ಜಂಗಮ ಮಠದಲ್ಲಿ ಸಭೆ ನಡೆಸುವುದಕ್ಕೆ ನಿರ್ಧರಿಸಿದೆ.

ಸಭೆಯಲ್ಲಿ ಹಿಂದೂಪರ ಸಂಘಟನೆಗಳು, ಪ್ರಗತಿಪರ ಚಿಂತಕರು, ಹೋರಾಟಗಾರರು, ಸ್ಥಳೀಯ ಮುಖಂಡರು ಭಾಗಿಯಾಗಲಿದ್ದಾರೆ. ಚಾಮರಾಜಪೇಟೆ ಕ್ಷೇತ್ರದ ಸಂಘ-ಸಂಸ್ಥೆಗಳು, ಪದಾಧಿಕಾರಿಗಳು, ಸಾರ್ವಜನಿಕರು ತಪ್ಪದೇ ಸಭೆಯಲ್ಲಿ ಭಾಗಿಯಾಗುವಂತೆ ನಾಗರಿಕರ ಒಕ್ಕೂಟ ವೇದಿಕೆ ಮನವಿ ಮಾಡಿದ್ದು, ಇದು ಬಿಬಿಎಂಪಿ ಮೈದಾನ ರಾಜ್ಯ ಸರ್ಕಾರದ ಸ್ವತ್ತು. ಎಲ್ಲರೂ ಒಗ್ಗೂಡಿ ಆಟದ ಮೈದಾನ ಉಳಿಸಿಕೊಳ್ಳುವಂತೆ ತಿಳಿಸಿದೆ.

ಇದನ್ನೂ ಓದಿ: Karnataka Rain: ಕರ್ನಾಟಕ ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ: ಇನ್ನೆರಡು ದಿನ ಬೆಂಗಳೂರಿನಲ್ಲಿ ಮಳೆ

ಇದನ್ನೂ ಓದಿ
Image
ENG vs IND 5th Tets: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್​​ನ ಮೊದಲ ದಿನದಾಟದ ರೋಚಕ ಫೋಟೋಗಳು ನೋಡಿ
Image
ತಾರಕ್ಕೇರುತ್ತಿರುವ ಚಾಮರಾಜಪೇಟೆ ಮೈದಾನ ವಿವಾದ! ಬಿಬಿಎಂಪಿ ಹೇಳಿಕೆ ವಿರುದ್ಧ ತಿರುಗಿ ಬಿದ್ದ ಸ್ಥಳೀಯ ನಿವಾಸಿಗಳು, ನಾಳೆ ಮಹತ್ವದ ಸಭೆ
Image
Nail Care: ನಿಮಗೆ ಉಗುರು ಕಚ್ಚುವ ಅಬ್ಯಾಸವಿದೆಯೇ? ಕೂಡಲೇ ಬಿಟ್ಟುಬಿಡಿ
Image
Kiara Advani: ಹ್ಯಾಟ್ರಿಕ್​ ಗೆಲುವು ಪಡೆದ ಕಿಯಾರಾ ಅಡ್ವಾಣಿ; ಬಾಲಿವುಡ್​ನಲ್ಲಿ ಮೈಲೇಜ್​ ಹೆಚ್ಚಿಸಿಕೊಂಡ ಬೆಡಗಿ

ಇನ್ನು ನಾಗರಿಕರ ಒಕ್ಕೂಟ ವೇದಿಕೆ ಚಾಮರಾಜಪೇಟೆಯ ಪ್ರತಿ ಮನೆ ಮನೆಗೆ ತೆರಳಿ ಕರಪತ್ರ ಹಂಚಿಕೆ ಮಾಡುತ್ತಿದೆ. ಸುಮಾರು 10 ಸಾವಿರ ಜನರಿಗೆ ಕರಪತ್ರ ಹಂಚಿಕೆ ಮಾಡಲಾಗಿದೆ.

ನಾವೇ ನಿರ್ಧರಿಸುತ್ತೇವೆ-ರುಕ್ಮಾಂಗದ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್​ಗೂ ಸಭೆಗೆ ಬರುವಂತೆ ಆಹ್ವಾನಿಸಲಾಗಿದೆ ಎಂದು ಚಾಮರಾಜಪೇಟೆ ನಾಗರೀಕರ ಒಕ್ಕೂಟ ವೇದಿಕೆ ಮುಖಂಡ ರುಕ್ಮಾಂಗದ ತಿಳಿಸಿದ್ದಾರೆ. ಚಾಮರಾಜಪೇಟೆ ಮೈದಾನ ಬಿಬಿಎಂಪಿ ಆಸ್ತಿ ಅಂತ ಶ್ರೀನಿವಾಸ್ ಹೇಳಿದರು. ಜೂನ್ 8 ರಂದು ಶ್ರೀನಿವಾಸ್ ಅವರು ಈ ಹೇಳಿಕೆ ಕೊಡುತ್ತಾರೆ. ಇವರು ಹೇಳಿಕೆ ಕೊಟ್ಟ ಮೇಲೆ ಬಿಬಿಎಂಪಿ ಆಯುಕ್ತರು ಬಿಬಿಎಂಪಿ ಸ್ವತ್ತಲ್ಲ ಅಂತಾರೆ. ಇವರ ಹೇಳಿಕೆಯಿಂದಲೇ ಇಷ್ಟೆಲ್ಲ ಸಮಸ್ಯೆ. ಇತ್ತ ವಕ್ಫ್ ಬೋರ್ಡ್​ನವರು ಮೈದಾನ ನಮ್ಮದು ಅಂತಾರೆ. ಸರ್ಕಾರ ಮಧ್ಯ ಪ್ರವೇಶಿಸಿ ಇದು ನಮ್ಮ ಆಸ್ತಿ ಅಂತ ಘೋಷಿಸಬೇಕು. ಜಮೀರ್ ಅವರು ಚಾಮರಾಜಪೇಟೆಗೆ ಶಾಸಕರೋ ಅಥವಾ ಮುಸ್ಲಿಂ ಧರ್ಮಕ್ಕೆ ಶಾಸಕರೋ ಗೊತ್ತಿಲ್ಲ. ಮೈದಾನದ ವಿವಾದ ಭುಗಿಲೆದ್ದರೂ ತುಟಿಕ್ ಪಿಟಿಕ್ ಅಂತಿಲ್ಲ. ನಾಳೆ ಸಭೆ ನಡೆಸಿ ಏನು ತೀರ್ಮಾನ ಕೈಗೊಳ್ಳಬೇಕು ಅಂತ ನಿರ್ಧರಿಸುತ್ತೇವೆ. ಅಧಿಕಾರಿಗಳು ವಿಫಲರಾಗಿದ್ದಾರೆ, ಹೀಗಾಗಿ ನಾವೇ ಒಂದು ತೀರ್ಮಾನಕ್ಕೆ ಬರುತ್ತೇವೆಂದು ರುಕ್ಮಾಂಗದ ಹೇಳಿದರು.

ಇದನ್ನೂ ಓದಿ: Nail Care: ನಿಮಗೆ ಉಗುರು ಕಚ್ಚುವ ಅಬ್ಯಾಸವಿದೆಯೇ? ಕೂಡಲೇ ಬಿಟ್ಟುಬಿಡಿ

Published On - 8:39 am, Sat, 2 July 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ