AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯ, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ- ಬಿಬಿಎಂಪಿ ಆದೇಶ

Chamrajpet Ground: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯಗೊಂಡಿದ್ದು, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.

BBMP: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯ, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ- ಬಿಬಿಎಂಪಿ ಆದೇಶ
ಬಿಬಿಎಂಪಿ
TV9 Web
| Edited By: |

Updated on:Aug 06, 2022 | 10:21 PM

Share

ಬೆಂಗಳೂರು: ಚಾಮರಾಜಪೇಟೆಯ ಮೈದಾನ (Chamrajpet Ground) ವಿವಾದ ಅಂತ್ಯಗೊಂಡಿದ್ದು, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ (Revenue Department) ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ BBMP) ಆದೇಶ ಹೊರಡಿಸಿದೆ. ಇದರೊಂದಿಗೆ ಚಾಮರಾಜಪೇಟೆಯ ಮೈದಾನದಲ್ಲಿ 75 ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ತಿರಂಗಾ ಹಾರಾಡೋದು ಖಚಿತವಾಗಿದೆ.

75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಜಂಟಿ ಆಯುಕ್ತ ಶ್ರೀನಿವಾಸ್​ ಅವರಿಂದ ಐತಿಹಾಸಿಕ ಆದೇಶ ಪ್ರಕಟ

ಮೈದಾನವನ್ನು ತಮ್ಮ ಹೆಸರಿಗೆ ಖಾತಾ ಇಂಡೀಕರಣಕ್ಕೆ ವಕ್ಫ್​ ಬೋರ್ಡ್​ ಬಿಬಿಎಂಪಿಗೆ ಅರ್ಜಿ ಸಲ್ಲಿಸಿತ್ತು. ವಕ್ಫ್​ ಬೋರ್ಡ್​ ಅರ್ಜಿ ವಜಾಗೊಳಿಸಿದ ಬಿಬಿಎಂಪಿ ಚಾಮರಾಜಪೇಟೆ ಮೈದಾನ ರಾಜ್ಯ ಸರ್ಕಾರದ್ದು ಎಂದು ಆದೇಶ ಹೊರಡಿಸಿದೆ. ಇದರೊಂದಿಗೆ ಚಾಮರಾಜಪೇಟೆ ಜನರ 60 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್​ ಈ ಐತಿಹಾಸಿಕ ಆದೇಶ ಪ್ರಕಟಿಸಿದ್ದಾರೆ.

ಎರಡು ತಿಂಗಳ ಕಾಲಾವಕಾಶ ನೀಡಿದರೂ ದಾಖಲೆಗಳನ್ನ ಸಲ್ಲಿಸದ ವಕ್ಪ್ ಬೋರ್ಡ್ 

ವಕ್ಫ್ ಬೋರ್ಡ್ ಎನ್ನುವುದಕ್ಕೆ ದಾಖಲೆ ಕೇಳಿ ವಕ್ಪ್ ಬೋರ್ಡ್ ಗೆ ಜಂಟಿ ಆಯುಕ್ತ ಶ್ರೀನಿವಾಸ್ ನೋಟಿಸ್ ನೀಡಿದ್ದರು. ಆದರೆ ಎರಡು ತಿಂಗಳ ಕಾಲಾವಕಾಶ ನೀಡಿದರೂ ಸಹ ವಕ್ಪ್ ಬೋರ್ಡ್ ದಾಖಲೆಗಳನ್ನ ಬಿಬಿಎಂಪಿಗೆ ಸಲ್ಲಿಕೆ ಮಾಡಿಲ್ಲ. ಅದಾದ ಮೇಲೂ, ಕೆಲ ಮುಸ್ಲಿಂ ವಕೀಲರು ಕೂಡಾ 15 ದಿನ ಕಾಲಾವಕಾಶ ಪಡೆದಿದ್ದರು. ಆದರೆ ಯಾರು ಕೂಡಾ ಮೈದಾನದ ಬಗ್ಗೆ ಸೂಕ್ತ ದಾಖಲೆಗಳನ್ನ ನೀಡದ ಕಾರಣ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಂಡು ಬಿಬಿಎಂಪಿ ಜಂಟಿ ಆಯುಕ್ತರು ಇಂದು ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸ್ತೇವೆ

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ ಎಂದು ಬಿಬಿಎಂಪಿ ನೀಡಿರುವ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸ್ತೇವೆ ಎಂದು ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಹೇಳಿದ್ದಾರೆ.

Published On - 8:05 pm, Sat, 6 August 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!