AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯ, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ- ಬಿಬಿಎಂಪಿ ಆದೇಶ

Chamrajpet Ground: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯಗೊಂಡಿದ್ದು, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.

BBMP: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯ, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ- ಬಿಬಿಎಂಪಿ ಆದೇಶ
ಬಿಬಿಎಂಪಿ
TV9 Web
| Edited By: |

Updated on:Aug 06, 2022 | 10:21 PM

Share

ಬೆಂಗಳೂರು: ಚಾಮರಾಜಪೇಟೆಯ ಮೈದಾನ (Chamrajpet Ground) ವಿವಾದ ಅಂತ್ಯಗೊಂಡಿದ್ದು, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ (Revenue Department) ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ BBMP) ಆದೇಶ ಹೊರಡಿಸಿದೆ. ಇದರೊಂದಿಗೆ ಚಾಮರಾಜಪೇಟೆಯ ಮೈದಾನದಲ್ಲಿ 75 ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ತಿರಂಗಾ ಹಾರಾಡೋದು ಖಚಿತವಾಗಿದೆ.

75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಜಂಟಿ ಆಯುಕ್ತ ಶ್ರೀನಿವಾಸ್​ ಅವರಿಂದ ಐತಿಹಾಸಿಕ ಆದೇಶ ಪ್ರಕಟ

ಮೈದಾನವನ್ನು ತಮ್ಮ ಹೆಸರಿಗೆ ಖಾತಾ ಇಂಡೀಕರಣಕ್ಕೆ ವಕ್ಫ್​ ಬೋರ್ಡ್​ ಬಿಬಿಎಂಪಿಗೆ ಅರ್ಜಿ ಸಲ್ಲಿಸಿತ್ತು. ವಕ್ಫ್​ ಬೋರ್ಡ್​ ಅರ್ಜಿ ವಜಾಗೊಳಿಸಿದ ಬಿಬಿಎಂಪಿ ಚಾಮರಾಜಪೇಟೆ ಮೈದಾನ ರಾಜ್ಯ ಸರ್ಕಾರದ್ದು ಎಂದು ಆದೇಶ ಹೊರಡಿಸಿದೆ. ಇದರೊಂದಿಗೆ ಚಾಮರಾಜಪೇಟೆ ಜನರ 60 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್​ ಈ ಐತಿಹಾಸಿಕ ಆದೇಶ ಪ್ರಕಟಿಸಿದ್ದಾರೆ.

ಎರಡು ತಿಂಗಳ ಕಾಲಾವಕಾಶ ನೀಡಿದರೂ ದಾಖಲೆಗಳನ್ನ ಸಲ್ಲಿಸದ ವಕ್ಪ್ ಬೋರ್ಡ್ 

ವಕ್ಫ್ ಬೋರ್ಡ್ ಎನ್ನುವುದಕ್ಕೆ ದಾಖಲೆ ಕೇಳಿ ವಕ್ಪ್ ಬೋರ್ಡ್ ಗೆ ಜಂಟಿ ಆಯುಕ್ತ ಶ್ರೀನಿವಾಸ್ ನೋಟಿಸ್ ನೀಡಿದ್ದರು. ಆದರೆ ಎರಡು ತಿಂಗಳ ಕಾಲಾವಕಾಶ ನೀಡಿದರೂ ಸಹ ವಕ್ಪ್ ಬೋರ್ಡ್ ದಾಖಲೆಗಳನ್ನ ಬಿಬಿಎಂಪಿಗೆ ಸಲ್ಲಿಕೆ ಮಾಡಿಲ್ಲ. ಅದಾದ ಮೇಲೂ, ಕೆಲ ಮುಸ್ಲಿಂ ವಕೀಲರು ಕೂಡಾ 15 ದಿನ ಕಾಲಾವಕಾಶ ಪಡೆದಿದ್ದರು. ಆದರೆ ಯಾರು ಕೂಡಾ ಮೈದಾನದ ಬಗ್ಗೆ ಸೂಕ್ತ ದಾಖಲೆಗಳನ್ನ ನೀಡದ ಕಾರಣ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಂಡು ಬಿಬಿಎಂಪಿ ಜಂಟಿ ಆಯುಕ್ತರು ಇಂದು ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸ್ತೇವೆ

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ ಎಂದು ಬಿಬಿಎಂಪಿ ನೀಡಿರುವ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸ್ತೇವೆ ಎಂದು ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಹೇಳಿದ್ದಾರೆ.

Published On - 8:05 pm, Sat, 6 August 22

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ