AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯ, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ- ಬಿಬಿಎಂಪಿ ಆದೇಶ

Chamrajpet Ground: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯಗೊಂಡಿದ್ದು, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.

BBMP: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯ, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ- ಬಿಬಿಎಂಪಿ ಆದೇಶ
ಬಿಬಿಎಂಪಿ
TV9 Web
| Edited By: |

Updated on:Aug 06, 2022 | 10:21 PM

Share

ಬೆಂಗಳೂರು: ಚಾಮರಾಜಪೇಟೆಯ ಮೈದಾನ (Chamrajpet Ground) ವಿವಾದ ಅಂತ್ಯಗೊಂಡಿದ್ದು, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ (Revenue Department) ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ BBMP) ಆದೇಶ ಹೊರಡಿಸಿದೆ. ಇದರೊಂದಿಗೆ ಚಾಮರಾಜಪೇಟೆಯ ಮೈದಾನದಲ್ಲಿ 75 ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ತಿರಂಗಾ ಹಾರಾಡೋದು ಖಚಿತವಾಗಿದೆ.

75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಜಂಟಿ ಆಯುಕ್ತ ಶ್ರೀನಿವಾಸ್​ ಅವರಿಂದ ಐತಿಹಾಸಿಕ ಆದೇಶ ಪ್ರಕಟ

ಮೈದಾನವನ್ನು ತಮ್ಮ ಹೆಸರಿಗೆ ಖಾತಾ ಇಂಡೀಕರಣಕ್ಕೆ ವಕ್ಫ್​ ಬೋರ್ಡ್​ ಬಿಬಿಎಂಪಿಗೆ ಅರ್ಜಿ ಸಲ್ಲಿಸಿತ್ತು. ವಕ್ಫ್​ ಬೋರ್ಡ್​ ಅರ್ಜಿ ವಜಾಗೊಳಿಸಿದ ಬಿಬಿಎಂಪಿ ಚಾಮರಾಜಪೇಟೆ ಮೈದಾನ ರಾಜ್ಯ ಸರ್ಕಾರದ್ದು ಎಂದು ಆದೇಶ ಹೊರಡಿಸಿದೆ. ಇದರೊಂದಿಗೆ ಚಾಮರಾಜಪೇಟೆ ಜನರ 60 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್​ ಈ ಐತಿಹಾಸಿಕ ಆದೇಶ ಪ್ರಕಟಿಸಿದ್ದಾರೆ.

ಎರಡು ತಿಂಗಳ ಕಾಲಾವಕಾಶ ನೀಡಿದರೂ ದಾಖಲೆಗಳನ್ನ ಸಲ್ಲಿಸದ ವಕ್ಪ್ ಬೋರ್ಡ್ 

ವಕ್ಫ್ ಬೋರ್ಡ್ ಎನ್ನುವುದಕ್ಕೆ ದಾಖಲೆ ಕೇಳಿ ವಕ್ಪ್ ಬೋರ್ಡ್ ಗೆ ಜಂಟಿ ಆಯುಕ್ತ ಶ್ರೀನಿವಾಸ್ ನೋಟಿಸ್ ನೀಡಿದ್ದರು. ಆದರೆ ಎರಡು ತಿಂಗಳ ಕಾಲಾವಕಾಶ ನೀಡಿದರೂ ಸಹ ವಕ್ಪ್ ಬೋರ್ಡ್ ದಾಖಲೆಗಳನ್ನ ಬಿಬಿಎಂಪಿಗೆ ಸಲ್ಲಿಕೆ ಮಾಡಿಲ್ಲ. ಅದಾದ ಮೇಲೂ, ಕೆಲ ಮುಸ್ಲಿಂ ವಕೀಲರು ಕೂಡಾ 15 ದಿನ ಕಾಲಾವಕಾಶ ಪಡೆದಿದ್ದರು. ಆದರೆ ಯಾರು ಕೂಡಾ ಮೈದಾನದ ಬಗ್ಗೆ ಸೂಕ್ತ ದಾಖಲೆಗಳನ್ನ ನೀಡದ ಕಾರಣ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಂಡು ಬಿಬಿಎಂಪಿ ಜಂಟಿ ಆಯುಕ್ತರು ಇಂದು ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸ್ತೇವೆ

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ ಎಂದು ಬಿಬಿಎಂಪಿ ನೀಡಿರುವ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸ್ತೇವೆ ಎಂದು ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಹೇಳಿದ್ದಾರೆ.

Published On - 8:05 pm, Sat, 6 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ