AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamrajpet Idgah Maidan: ಜುಲೈ 12ರಂದು ಚಾಮರಾಜಪೇಟೆ ಬಂದ್​​ ನಿಶ್ಚಿತ; ಚಾಮರಾಜಪೇಟೆ ನಾಗರಿಕರ ವೇದಿಕೆ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಜುಲೈ 12ರಂದು ಚಾಮರಾಜಪೇಟೆಯನ್ನು ಬಂದ್​​ ಮಾಡುವುದು ನಿಶ್ಚಿತ ಎಂದು ಬೆಂಗಳೂರಿನಲ್ಲಿ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಸಂಚಾಲಕ ರುಕ್ಮಾಂಗದ ಹೇಳಿದ್ದಾರೆ.

Chamrajpet Idgah Maidan: ಜುಲೈ 12ರಂದು ಚಾಮರಾಜಪೇಟೆ ಬಂದ್​​ ನಿಶ್ಚಿತ; ಚಾಮರಾಜಪೇಟೆ ನಾಗರಿಕರ ವೇದಿಕೆ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 09, 2022 | 3:16 PM

Share

ಬೆಂಗಳೂರು: ಚಾಮರಾಜಪೇಟೆ (Chamrajpet) ಈದ್ಗಾ ಮೈದಾನ (Idgah Maidan) ವಿವಾದಕ್ಕೆ ಸಂಬಂಧಿಸಿದಂತೆ ಜುಲೈ 12ರಂದು ಚಾಮರಾಜಪೇಟೆಯನ್ನು ಬಂದ್​​ ಮಾಡುವುದು ನಿಶ್ಚಿತ ಎಂದು ಬೆಂಗಳೂರಿನಲ್ಲಿ (Bengaluru) ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಸಂಚಾಲಕ ರುಕ್ಮಾಂಗದ ಹೇಳಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಅವರು ಮಂಗಳವಾರದ ಬಂದ್ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಶಾಸಕ ಜಮೀರ್ ಅಹ್ಮದ ಖಾನ್ (Zameer Ahmed)​ ದಾರಿ ತಪ್ಪಿದ ಮಗನ ರೀತಿ ಆಗಿದ್ದಾರೆ. ಬಿಎಸ್​ವೈ ಸಿಎಂ ಆದರೆ ವಾಚ್​ಮೆನ್ ಆಗುತ್ತೇನೆ  ಅಂದಿದ್ದರು. ಆಗಲಿಂದಲೂ ಶಾಸಕ ಜಮೀರ್ ಮಾತಿನಂತೆ ನಡೆದುಕೊಂಡಿಲ್ಲ ಎಂದರು.

4 ಬಾರಿ ಶಾಸಕರಾಗಿದ್ದರೂ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ನಮ್ಮ ಸಂಘಟನೆಯಿಂದ ನಿನ್ನೆ (ಜುಲೈ 8) ರಂದು ನಡೆದ ಸಭೆಗೆ ಯಾರೂ ಹೋಗಿರಲಿಲ್ಲ. ಬಂದ್​​ಗೆ ಬೆಂಬಲಿಸುವಂತೆ ಎಲ್ಲರಲ್ಲೂ ಮನವಿ ಮಾಡಿದ್ದೇವೆ. ಒಂದು ದಿನ ತ್ಯಾಗ ಮಾಡುತ್ತೇವೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಾಮರಾಜಪೇಟೆ ಮೈದಾನ ಆಟದ ಮೈದಾನವಾಗಿ ಉಳಿಯಬೇಕು. ಸರ್ಕಾರ, ಬಿಬಿಎಂಪಿಯ ಸ್ವತ್ತಾಗಿಯೇ ಉಳಿಸಬೇಕೆಂದು ಆಗ್ರಹಿಸಿದ್ದಾರೆ.

ನನ್ನ ಪ್ರಾಣ ಹೋಗುವವರೆಗೂ ಮೈದಾನ ತೆಗೆಯಲು ಸಾಧ್ಯವಿಲ್ಲ: ಶಾಸಕ ಜಮೀರ್ ಅಹಮದ್ 

ಇದನ್ನೂ ಓದಿ
Image
ಕಲಬುರಗಿ: ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಸಾವು
Image
Chamrajpet Idgah Maidan: ಬಂದ್ ಮಾಡಿಯೇ ತೀರುತ್ತೇವೆ; ಚಾಮರಾಜಪೇಟೆ ನಾಗರಿಕರ ವೇದಿಕೆ

ಶುಕ್ರವಾರ (ಜುಲೈ 8) ರಂದು ಚಾಮರಾಜಪೇಟೆಯ ವೆಂಕಟಾರಾಮ್ ಕಲಾ ಭವನದಲ್ಲಿ ನಡೆದ ಸಭೆಯಲ್ಲಿ ಶಾಸಕ ಜಮೀರ್ ಅಹಮದ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಆಟವಾಡಲು ಮಕ್ಕಳಿಗೆ ಅವಕಾಶ ಕೊಡುವುದಿಲ್ಲ ಎಂದು ಯಾರೂ ಹೇಳಿಲ್ಲ. ನನ್ನ ಪ್ರಾಣ ಹೋಗುವವರೆಗೂ ಮೈದಾನ ತೆಗೆಯಲು ಸಾಧ್ಯವಿಲ್ಲ ಎಂದು  ಹೇಳಿದ್ದರು. ಸಭೆಯಲ್ಲಿ ಎಲ್ಲರೂ ಆಟದ ಮೈದಾನ ಉಳಿಸಬೇಕು ಎಂದು ಸಭೆ ಮಾಡಿ ಒತ್ತಾಯಿಸಿದರು. ಆಟದ ಮೈದಾನ ಎಲ್ಲಿಗೆ ಹೋಗಿದೆ? ಆಟದ ಮೈದಾನವನ್ನ ಯಾರು ತೆಗೆದಿದ್ದಾರೆ? ಎಂಎಲ್ಎ, ಬಿಬಿಎಂಪಿ, ವಕ್ಫ್ ಬೋರ್ಡ್ ಯಾರಾದರೂ ಇಲ್ಲಿ ಆಟದ ಮೈದಾನ ಇರುವುದಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು.

ಜಮೀರ್ ಅಹಮದ್ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಮಾಜಿ ಕಾರ್ಪೊರೇಟರ್​ಗಳಾದ ಕೋಕಿಲಾ ಚಂದ್ರಶೇಖರ್, ಸುಜಾತ ಡಿ.ಸಿ ರಮೇಶ್, ಬಿ.ಟಿ.ಶ್ರೀನಿವಾಸಮೂರ್ತಿ, ಚಂದ್ರಶೇಖರ್, ಅಲ್ತಾಫ್ ಖಾನ್ ಸೇರಿದಂತೆ ಹಲವು ಸಭೆಯಲ್ಲಿ ಪಾಲ್ಗೊಂಡಿದ್ದರು. ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಮಾತನಾಡಿ, ನನ್ನ ಗೆಲುವಿಗೆ ಕ್ಷೇತ್ರದ ಎಲ್ಲ ವರ್ಗದ ಸಹಕರಿಸಿದ್ದಾರೆ. ಕೇವಲ ಒಂದೇ ಧರ್ಮದ ಪರ ನಾನು ನಿಲ್ಲಲು ಆಗುವುದಿಲ್ಲ. ಈ ಮೈದಾನವನ್ನು ಆಟದ ಮೈದಾನವಾಗಿ ಉಳಿಸುವುದಾಗಿ ಜಮೀರ್ ಮಾತು ಕೊಟ್ಟಿದ್ದಾರೆ ಎಂದು ಹೇಳಿದ್ದರು.

Published On - 3:05 pm, Sat, 9 July 22

Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ