AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamrajpet Idgah Maidan: ಬಂದ್ ಮಾಡಿಯೇ ತೀರುತ್ತೇವೆ; ಚಾಮರಾಜಪೇಟೆ ನಾಗರಿಕರ ವೇದಿಕೆ

ಚಾಮರಾಜಪೇಟೆ ಕ್ಷೇತ್ರದ ಬಂದ್ ಮಾಡುತ್ತೇವೆ. ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆಯ ಸಂಚಾಲಕ ರುಕ್ಮಾಂಗದ ಹೇಳಿದ್ದಾರೆ.

Chamrajpet Idgah Maidan: ಬಂದ್ ಮಾಡಿಯೇ ತೀರುತ್ತೇವೆ; ಚಾಮರಾಜಪೇಟೆ ನಾಗರಿಕರ ವೇದಿಕೆ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jul 08, 2022 | 1:47 PM

Share

ಬೆಂಗಳೂರು: ಈದ್ಗಾ ಮೈದಾನ ವಿಚಾರಕ್ಕೆ ಸಂಬಂಧಿಸಿದಂತೆ ಜುಲೈ 12ರಂದು ಚಾಮರಾಜಪೇಟೆ ಕ್ಷೇತ್ರದ ಬಂದ್ ಮಾಡುತ್ತೇವೆ. ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆಯ ಸಂಚಾಲಕ ರುಕ್ಮಾಂಗದ ಸ್ಪಷ್ಟಪಡಿಸಿದ್ದಾರೆ. ಶಾಸಕ ಜಮೀರ್ ಅಹ್ಮದ್ ಇಂದು ನಡೆಸಿದ ಸಭೆಗೆ ನಮ್ಮನ್ನು ಆಹ್ವಾನಿಸಿರಲಿಲ್ಲ. ಒಂದು ವೇಳೆ ಅವರು ಆಹ್ವಾನ ನೀಡಿದ್ದರೂ ನಾವು ಸಭೆಯನ್ನು ಬಹಿಷ್ಕರಿಸುತ್ತಿದ್ದೆವು. ಜುಲೈ 12ರ ಚಾಮರಾಜಪೇಟೆ ಬಂದ್ ನಡೆಯುವುದು ನಿಶ್ಚಿತ ಎಂದು ಹೇಳಿದರು.

ಇದನ್ನೂ ಓದಿ: ನನ್ನ ಪ್ರಾಣ ಇರೋವರೆಗೂ ಮೈದಾನ ತೆಗೆಯಲು ಸಾಧ್ಯವಿಲ್ಲ; ಜಮೀರ್ ಅಹಮದ್

ಸಭೆಯಲ್ಲಿ ಸಿಟ್ಟಾದ ಶಾಸಕರು

ಈದ್ಗಾ ಮೈದಾನ ವಿವಾದಕ್ಕೆ ಬಗ್ಗೆ ಕರೆದಿದ್ದ ಸಭೆಯಲ್ಲಿ ಶಾಸಕರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲು ಹಿಂದೇಟು ಹಾಕಿ, ಸಿಟ್ಟಿನಿಂದ ಕಾರಿನತ್ತ ಹೆಜ್ಜೆ ಹಾಕಿದ ಘಟನೆ ನಡೆಯಿತು. ಹಿಂದೂ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕೊಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಲು ಹಿಂಜರಿದರು. ಬಂದ್​ಗೆ ಕರೆಕೊಟ್ಟಿದ್ದ ಸಂಘಟನೆಗಳ ಪ್ರತಿನಿಧಿಗಳಿಗೂ ಸಭೆಗೆ ಆಹ್ವಾನ ಇರಲಿಲ್ಲ. ಚಾಮರಾಜಪೇಟೆ ಮೈದಾನದಲ್ಲಿ ಶಿವರಾತ್ರಿ ಹಬ್ಬ ಆಚರಣೆಗೆ ಯಾಕೆ ಅವಕಾಶ ಇಲ್ಲ ಎಂಬ ಪ್ರಶ್ನೆಗೆ ಜಮೀರ್ ಅಹ್ಮದ್ ಕೋಪ ತೋರಿಸಿದರು.

ಚಾಮರಾಜಪೇಟೆಯ ಮೈದಾನದಲ್ಲಿ ಶಿವರಾತ್ರಿ ಹಬ್ಬ ಆಚರಣೆಗೆ ಯಾಕೆ ಅವಕಾಶ ಇಲ್ಲ ಎಂಬ ಪ್ರಶ್ನೆಗೆ ಜಮೀರ್ ಅಹ್ಮದ್ ಕೋಪಗೊಂಡರು. ಇಲ್ಲಿರುವ ಯಾರಿಗೂ ಅದರ ಅವಶ್ಯಕತೆ ಇಲ್ಲ. ನೀವು ಮಾಧ್ಯಮದವರೇ ಗೊಂದಲ ಸೃಷ್ಟಿ ಮಾಡ್ತಿದ್ದೀರಿ ಎಂದು ಜಮೀರ್ ಹರಿಹಾಯ್ದರು.

Published On - 1:46 pm, Fri, 8 July 22

VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ