AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನಭಾರತಿಯಲ್ಲಿ ಕೆಟ್ಟು ನಿಂತ ಚಾಮುಂಡಿ ಎಕ್ಸ್​​ಪ್ರೆಸ್​ ರೈಲು! ಪ್ರಯಾಣಿಕರ ಪರದಾಟ

ಮೆಟ್ರೋದಲ್ಲಿ ಇಡೀ ಜನಸಮೂಹವು ನೆರೆದಿತ್ತು. ಬೆಳಿಗ್ಗೆ 9 ಗಂಟೆ ಹೊತ್ತಿಗೆ ನಾಯಂಡಹಳ್ಳಿ ಹಾಲ್ಟ್ ಬಳಿ OHE ಪೂರೈಕೆ ಸ್ಥಗಿವಾಗಿತ್ತು ಎಂದು ಹೇಳಲಾಗುತ್ತಿದೆ.

ಜ್ಞಾನಭಾರತಿಯಲ್ಲಿ ಕೆಟ್ಟು ನಿಂತ ಚಾಮುಂಡಿ ಎಕ್ಸ್​​ಪ್ರೆಸ್​ ರೈಲು! ಪ್ರಯಾಣಿಕರ ಪರದಾಟ
ಮೆಟ್ರೋ ಸ್ಟೇಷನ್​ನಲ್ಲಿ ಜನಸ್ತೋಮ
TV9 Web
| Edited By: |

Updated on:Mar 21, 2022 | 11:19 AM

Share

ಬೆಂಗಳೂರು: ಮೈಸೂರಿನಿಂದ ಹೊರಟಿದ್ದ ಚಾಮುಂಡಿ ಎಕ್ಸ್​ಪ್ರೆಸ್​ ರೈಲು (Rail) ಇಂದು ಬೆಂಗಳೂರಿನ ಜ್ಞಾನಭಾರತಿದಲ್ಲಿ ಕೆಟ್ಟು ನಿಂತಿತ್ತು. ಈ ಹಿನ್ನೆಲೆ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನ ಕೆಳಗೆ ಇಳಿಸಲಾಗಿದ್ದು, ಪ್ರಯಾಣಿಕರು ಸ್ವಲ್ಪ ಹೊತ್ತು ತೊಂದರೆ ಎದುರಿಸಿದರು. ಮೆಜೆಸ್ಟಿಕ್ (Majestic) ತಲುಪಲು ಪ್ರಯಾಣಿಕರು ಪರದಾಡಿದರು. ಈ ವೇಳೆ ಮೆಟ್ರೋದಲ್ಲಿ ಇಡೀ ಜನಸಮೂಹವು ನೆರೆದಿತ್ತು. ಬೆಳಿಗ್ಗೆ 9 ಗಂಟೆ ಹೊತ್ತಿಗೆ ನಾಯಂಡಹಳ್ಳಿ ಹಾಲ್ಟ್ ಬಳಿ OHE ಪೂರೈಕೆಯಲ್ಲಿ ತೊಂದರೆ ಎದುರಾಗಿತ್ತು ಎಂದು ಹೇಳಲಾಗುತ್ತಿದೆ.

ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, 10 ಗಂಟೆಯಿಂದ ರೈಲು ಸಂಚಾರ ಪ್ರಾರಂಭಿಸಿದೆ.

ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ: ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ ಮಾಡುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ರದ್ದಾಗಿದೆ. ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳು ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್​ 17 ರಿಂದ 20ರವರೆಗೆ 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ಮಾಡಿದೆ.

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ. ಪುಣೆ- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು(11097/11098) ಮಾ.19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ(16515/16516) ಮಾ.18 ಮತ್ತು 19ರಂದು ಇರುವುದಿಲ್ಲ.

ಇದನ್ನೂ ಓದಿ

ICC: ಭಾರತ-ಶ್ರೀಲಂಕಾ ಪಂದ್ಯದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಪಿಚ್ ಕಳಪೆ ಎಂದು ರೇಟಿಂಗ್ ಕೊಟ್ಟ ಐಸಿಸಿ

20 ದಿನಗಳ ಬಳಿಕ ಮಗನ ಮುಖ ನೋಡುವ ಅವಕಾಶ ಸಿಕ್ಕಿದೆ: ನವೀನ್ ನೆನೆದು ಭಾವುಕರಾದ ತಾಯಿ ವಿಜಯಲಕ್ಷ್ಮೀ

Published On - 11:07 am, Mon, 21 March 22

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್