AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನಭಾರತಿಯಲ್ಲಿ ಕೆಟ್ಟು ನಿಂತ ಚಾಮುಂಡಿ ಎಕ್ಸ್​​ಪ್ರೆಸ್​ ರೈಲು! ಪ್ರಯಾಣಿಕರ ಪರದಾಟ

ಮೆಟ್ರೋದಲ್ಲಿ ಇಡೀ ಜನಸಮೂಹವು ನೆರೆದಿತ್ತು. ಬೆಳಿಗ್ಗೆ 9 ಗಂಟೆ ಹೊತ್ತಿಗೆ ನಾಯಂಡಹಳ್ಳಿ ಹಾಲ್ಟ್ ಬಳಿ OHE ಪೂರೈಕೆ ಸ್ಥಗಿವಾಗಿತ್ತು ಎಂದು ಹೇಳಲಾಗುತ್ತಿದೆ.

ಜ್ಞಾನಭಾರತಿಯಲ್ಲಿ ಕೆಟ್ಟು ನಿಂತ ಚಾಮುಂಡಿ ಎಕ್ಸ್​​ಪ್ರೆಸ್​ ರೈಲು! ಪ್ರಯಾಣಿಕರ ಪರದಾಟ
ಮೆಟ್ರೋ ಸ್ಟೇಷನ್​ನಲ್ಲಿ ಜನಸ್ತೋಮ
TV9 Web
| Edited By: |

Updated on:Mar 21, 2022 | 11:19 AM

Share

ಬೆಂಗಳೂರು: ಮೈಸೂರಿನಿಂದ ಹೊರಟಿದ್ದ ಚಾಮುಂಡಿ ಎಕ್ಸ್​ಪ್ರೆಸ್​ ರೈಲು (Rail) ಇಂದು ಬೆಂಗಳೂರಿನ ಜ್ಞಾನಭಾರತಿದಲ್ಲಿ ಕೆಟ್ಟು ನಿಂತಿತ್ತು. ಈ ಹಿನ್ನೆಲೆ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನ ಕೆಳಗೆ ಇಳಿಸಲಾಗಿದ್ದು, ಪ್ರಯಾಣಿಕರು ಸ್ವಲ್ಪ ಹೊತ್ತು ತೊಂದರೆ ಎದುರಿಸಿದರು. ಮೆಜೆಸ್ಟಿಕ್ (Majestic) ತಲುಪಲು ಪ್ರಯಾಣಿಕರು ಪರದಾಡಿದರು. ಈ ವೇಳೆ ಮೆಟ್ರೋದಲ್ಲಿ ಇಡೀ ಜನಸಮೂಹವು ನೆರೆದಿತ್ತು. ಬೆಳಿಗ್ಗೆ 9 ಗಂಟೆ ಹೊತ್ತಿಗೆ ನಾಯಂಡಹಳ್ಳಿ ಹಾಲ್ಟ್ ಬಳಿ OHE ಪೂರೈಕೆಯಲ್ಲಿ ತೊಂದರೆ ಎದುರಾಗಿತ್ತು ಎಂದು ಹೇಳಲಾಗುತ್ತಿದೆ.

ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, 10 ಗಂಟೆಯಿಂದ ರೈಲು ಸಂಚಾರ ಪ್ರಾರಂಭಿಸಿದೆ.

ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ: ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ ಮಾಡುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ರದ್ದಾಗಿದೆ. ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳು ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್​ 17 ರಿಂದ 20ರವರೆಗೆ 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ಮಾಡಿದೆ.

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ. ಪುಣೆ- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು(11097/11098) ಮಾ.19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ(16515/16516) ಮಾ.18 ಮತ್ತು 19ರಂದು ಇರುವುದಿಲ್ಲ.

ಇದನ್ನೂ ಓದಿ

ICC: ಭಾರತ-ಶ್ರೀಲಂಕಾ ಪಂದ್ಯದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಪಿಚ್ ಕಳಪೆ ಎಂದು ರೇಟಿಂಗ್ ಕೊಟ್ಟ ಐಸಿಸಿ

20 ದಿನಗಳ ಬಳಿಕ ಮಗನ ಮುಖ ನೋಡುವ ಅವಕಾಶ ಸಿಕ್ಕಿದೆ: ನವೀನ್ ನೆನೆದು ಭಾವುಕರಾದ ತಾಯಿ ವಿಜಯಲಕ್ಷ್ಮೀ

Published On - 11:07 am, Mon, 21 March 22

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ