AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಕೊಲೆಗೆ ಕಾರಣ ತಿಳಿಸಿದ ಆರೋಪಿಗಳು

ಅರೋಪಿಗಳು ಗುರೂಜಿ ಬಳಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. 2 ವರ್ಷಗಳಿಂದ ಅರೋಪಿಗಳು ಹಾಗೂ ಗುರೂಜಿ ನಡುವೆ ವೈಮನಸ್ಸು ಶುರುವಾಗಿದೆ. ಕೆಲಸ ಮಾಡುತ್ತಿದ್ದ ಸಮಯದಲ್ಲಿ ಸಾಕಷ್ಟು ಆತ್ಮೀಯವಾಗಿದ್ದರು.

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಕೊಲೆಗೆ ಕಾರಣ ತಿಳಿಸಿದ ಆರೋಪಿಗಳು
ಚಂದ್ರಶೇಖರ್‌ ಗುರೂಜಿ ಕೊಲೆ ಆರೋಪಿಗಳು
TV9 Web
| Edited By: |

Updated on:Jul 07, 2022 | 9:43 AM

Share

ಬೆಂಗಳೂರು: ಹುಬ್ಬಳ್ಳಿ ನಗರದ ಖಾಸಗಿ ಹೋಟೆಲ್​ನಲ್ಲಿ ಜುಲೈ 5ರಂದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ (Chandrashekhar Guruji) ಕೊಲೆ (Murder) ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ಹಂತಕರು ಹತ್ಯೆಗೆ ಕಾರಣ ತಿಳಿಸಿದ್ದಾರೆ. ಹಲವು ವರ್ಷಗಳಿಂದ ಗುರೂಜಿ ಜೊತೆ ಕೆಲಸ ಮಾಡುತ್ತಿದ್ದ ಮಹಾಂತೇಶ್ ಮತ್ತು ಮಂಜುನಾಥ್  ಹಣಕಾಸು, ಆಸ್ತಿ ವಿಚಾರಕ್ಕೆ ಹತ್ಯೆ ಮಾಡಿರುವುದಾಗಿ ಬಾಯಿಬಿಟ್ಟಿದ್ದಾರೆ. ಇನ್ನು ಸಾಕ್ಷಿಗಳು, ಆರೋಪಿಗಳ ಹೇಳಿಕೆಯಿಂದ ಈ ಕಾರಣ ದೃಢವಾಗಿದೆ.

ಅರೋಪಿಗಳು ಗುರೂಜಿ ಬಳಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. 2 ವರ್ಷಗಳಿಂದ ಅರೋಪಿಗಳು ಹಾಗೂ ಗುರೂಜಿ ನಡುವೆ ವೈಮನಸ್ಸು ಶುರುವಾಗಿದೆ. ಕೆಲಸ ಮಾಡುತ್ತಿದ್ದ ಸಮಯದಲ್ಲಿ ಸಾಕಷ್ಟು ಆತ್ಮೀಯವಾಗಿದ್ದರು. ಗುರೂಜಿಯ ಬಲ ಹಾಗೂ ಬಲಹೀನತೆಯ ಬಗ್ಗೆಯೂ ತಿಳಿದುಕೊಂಡಿದ್ದರು.

ಅಲ್ಲದೆ ಗುರೂಜಿ ಮೂಲಗಳನ್ನೆ ಬಳಿಸಿ ಸಪರೇಟ್ ಆಗಿ ವಾಸ್ತು ವ್ಯವಹಾರ ನಡೆಸುತ್ತಿದ್ದರು. ಈ ವಿಚಾರ ಗುರೂಜಿಗೆ ತಿಳಿದು ವಾದ-ವಿವಾದಗಳು ನಡೆದಿತ್ತು. ಆಸ್ತಿ ನೀಡಿಲ್ಲಾ ಅಂದರೆ ಗುರೂಜಿ ನಮಗೆ ಏನಾದರು ಮಾಡಿಸಬಹುದು ಎಂದು ಲೆಕ್ಕಾಚಾರ ಹಾಕಿದ್ದ ಹಂತಕರು ಆಸ್ತಿ ಪಡೆಯುವ ಮೊದಲು ಕೊಲೆ ಮಾಡಬೇಕೆಂದು ನಿರ್ಧರಿಸಿದ್ದರು.

ಇದನ್ನೂ ಓದಿ
Image
ಮಂಡ್ಯ: ಪತಿಯನ್ನ ಕೊಂದು ಪೊಲೀಸರಿಗೆ ದೂರು ಕೊಟ್ಟ ಹಂತಕಿ ಪತ್ನಿ ಅಂದರ್
Image
ಸಿಂಗಪೂರ್: ಗೆಳೆಯನ ಗರ್ಲ್​ಫ್ರೆಂಡನ್ನು ರೇಪ್ ಮಾಡಿದ್ದ ಭಾರತೀಯ ಮೂಲದ ವ್ಯಕ್ತಿಯ ಶಿಕ್ಷೆಯನ್ನು ಅಲ್ಲಿನ ಟಾಪ್ ಕೋರ್ಟ್ ತಗ್ಗಿಸಿದೆ
Image
Rashmika Mandanna: ಕೇಳಿಬರ್ತಿದೆ ರಶ್ಮಿಕಾ-ವಿಜಯ್​ ದೇವರಕೊಂಡ ಫ್ಯಾನ್ಸ್​ ಖುಷಿಪಡುವ ಸುದ್ದಿ; ಅಧಿಕೃತ ಆಗೋದಷ್ಟೇ ಬಾಕಿ
Image
ಬಾಗಲಕೋಟೆ: ಕೆರೂರಿನಲ್ಲಿ ಹಿಂದೂ-ಮುಸ್ಲಿಂ ಯುವಕರ ಘರ್ಷಣೆ, ಉದ್ವಿಗ್ನ ವಾತಾವರಣ, ಶಾಲೆಗಳಿಗೆ ರಜೆ

ಇದನ್ನೂ ಓದಿ: ಸಿಂಗಪೂರ್: ಗೆಳೆಯನ ಗರ್ಲ್​ಫ್ರೆಂಡನ್ನು ರೇಪ್ ಮಾಡಿದ್ದ ಭಾರತೀಯ ಮೂಲದ ವ್ಯಕ್ತಿಯ ಶಿಕ್ಷೆಯನ್ನು ಅಲ್ಲಿನ ಟಾಪ್ ಕೋರ್ಟ್ ತಗ್ಗಿಸಿದೆ

ಆಸ್ತಿ ಮಾರಾಟಕ್ಕೆ ಒಪ್ಪದ ಆರೋಪಿಗಳು: ಗುರೂಜಿ ಸುಮಾರು 5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಆರೋಪಿ ಹೆಸರಿಗೆ ಮಾಡಿದ್ದರು. ಕೊವಿಡ್ ಸಮಯದ ನಂತರ ಗುರೂಜಿ ವ್ಯವಹಾರದಲ್ಲಿ ಆಧಾಯ ಕಡಿಮೆ ಆಗಿತ್ತು. ಈ ವೇಳೆ ಆಸ್ತಿಯನ್ನು ಮಾರಾಟ ಮಾಡುವಂತೆ ಸೂಚಿಸಿದ್ದರು. ಅದರೆ ಗುರೂಜಿಗೆ ಬೇನಾಮಿಯಾಗಿದ್ದ ಅರೋಪಿ ಮಾರಾಟ ಮಾಡಲು ಒಪ್ಪಿರಲಿಲ್ಲ. ಜೊತೆಗೆ ಕೆಲಸದಿಂದ ತೆಗೆದಿದ್ದ ಕಾರಣ ಸುತಾರಾಂ ಮಾರಾಟ ಬೇಡ ಎಂದು ತೀರ್ಮಾನ ಮಾಡಿದ್ದರು. ಮಾರಾಟಕ್ಕೆ ಒಪ್ಪುವಂತೆ ಗುರೂಜಿ ಪರಿಚಿತ ರಾಜಕಾರಣಿಗಳು ಹಾಗು ಅಧಿಕಾರಿಗಳ ಮೂಲಕ ಒತ್ತಡ ಹಾಕಿಸಿದ್ದರು. ಅದ್ಯಾವುದಕ್ಕೂ ಅರೋಪಿಗಳು ಒಪ್ಪಲಿಲ್ಲ. ಮಾರಾಟ ಮಾಡಿ ಹಣ ಕೊಟ್ಟಿಲ್ಲ ಅಂದರೆ ನನಗೆ ಗೊತ್ತಿದೆ ಅಂತ ಗುರೂಜಿ ಹೇಳಿದ್ದರು.

ಸಂಧಾನಕ್ಕೆಂದು ಕರೆದು ಸಾವಿನ ದಾರಿ ತೋರಿಸಿದ ಹಂತಕರು: ಹಂತಕರು ಕೈಯಲ್ಲಿ ದಾಖಲೆ ಪತ್ರಗಳನ್ನ ಹಿಡಿದುಕೊಂಡು ಹೋಟೆಲ್​ಗೆ ಬಂದಿದ್ದರು. ಚಾಕು ತಂದಿದ್ದು ಗೊತ್ತಾಗಬಾರದು ಅಂತ ದಾಖಲೆ ಪತ್ರಗಳ‌ ಮಧ್ಯೆ ಚಾಕು ಇಟ್ಟುಕೊಂಡು ಬಂದಿದ್ದರು. ಗುರೂಜಿ ಹತ್ಯೆ ನಂತರ ದಾಖಲೆ ಬಿಟ್ಟು ಪರಾರಿಯಾಗಿದ್ದರು. ಕೊಲೆ ಬಳಿಕ ಒಂದು ಚಾಕು ಹೋಟೆಲ್ ಮುಂಭಾಗದ ಕಸದ ರಾಶಿಯಲ್ಲಿ ಎಸೆದಿದ್ದರು. ಇನ್ನೊಂದು ಮಾರ್ಗ ಮಧ್ಯೆ ಎಸೆದಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ದೇಶದ ಕೂಗಿನ ಬೆನ್ನಲ್ಲೇ ತಮಿಳುನಾಡನ್ನು ಇಬ್ಭಾಗ ಮಾಡುವ ಪ್ರಸ್ತಾಪವಿಟ್ಟ ಬಿಜೆಪಿ ನಾಯಕ

Published On - 8:21 am, Thu, 7 July 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ