AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-3 ಯಶಸ್ವಿ: ಇಸ್ರೋ ಅಧ್ಯಕ್ಷ ಸೋಮನಾಥ್​​​ರನ್ನು ಸನ್ಮಾನಿಸಿದ ಆರ್​ಎಸ್​ಎಸ್​​​ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ

ಚಂದ್ರಯಾನ-3 ಯಶಸ್ವಿಯಾಗಿ ಮುನ್ನಡೆಸಿದ ಇಸ್ರೋ ಅಧ್ಯಕ್ಷ ಡಾ ಎಸ್​ ಸೋಮನಾಥ್ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಇಂದು ಬೆಂಗಳೂರಿನ ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್ತಿನಲ್ಲಿ ಅಭಿನಂದಿಸಿದ್ದಾರೆ.

ಚಂದ್ರಯಾನ-3 ಯಶಸ್ವಿ: ಇಸ್ರೋ ಅಧ್ಯಕ್ಷ ಸೋಮನಾಥ್​​​ರನ್ನು ಸನ್ಮಾನಿಸಿದ ಆರ್​ಎಸ್​ಎಸ್​​​ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ
ಇಸ್ರೋ ಅಧ್ಯಕ್ಷ ಸೋಮನಾಥ್ ಮತ್ತು ಆರ್​ಎಸ್​ಎಸ್​​​ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆಯೊಂದಿಗೆ ಇತರರು
ಗಂಗಾಧರ​ ಬ. ಸಾಬೋಜಿ
|

Updated on:Aug 25, 2023 | 10:58 PM

Share

ಬೆಂಗಳೂರು, ಆಗಸ್ಟ್​ 25: ಚಂದ್ರಯಾನ-3 (Chandrayaan-3) ಯಶಸ್ಸಿಗೆ ಇಡೀ ವಿಶ್ವವೇ ಕೊಂಡಾಡುತ್ತಿದೆ. ವಿಜ್ಞಾನಿಗಳ ಸಾಧನೆಗೆ ಎಲ್ಲೆಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದಕ್ಷಿಣ ಆಫ್ರಿಕಾ, ಗ್ರೀಕ್ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ ಖುದ್ದಾಗಿ ನಾಳೆ ಬೆಂಗಳೂರಿನ ಇಸ್ರೋ ಸೆಂಟರ್‌ಗೆ ಆಗಮಿಸುತ್ತಿದ್ದು, ಸಾಧನೆ ಮಾಡಿದ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಸದ್ಯ ಇವೆಲ್ಲದರ ಮಧ್ಯೆ ಚಂದ್ರಯಾನ-3 ಯಶಸ್ವಿಯಾಗಿ ಮುನ್ನಡೆಸಿದ ಇಸ್ರೋ ಅಧ್ಯಕ್ಷ ಡಾ ಎಸ್​ ಸೋಮನಾಥ್ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅಭಿನಂದಿಸಿದ್ದಾರೆ.

ಈ ಕುರಿತಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಪ್ರಚಾರ ಪ್ರಮುಖ ರಾಜೇಶ್ ಪದ್ಮಾರ್​ ಅವರು ತಮ್ಮ ಟ್ವಿಟರ್​ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್ತಿನಲ್ಲಿ ಇಸ್ರೋ ಅಧ್ಯಕ್ಷ ಡಾ ಎಸ್​ ಸೋಮನಾಥ್ ಅವರನ್ನು ದತ್ತಾತ್ರೇಯ ಹೊಸಬಾಳೆ ಸನ್ಮಾನಿಸಿದ್ದಾರೆ.

ನಾಳೆ ಬೆಂಗಳೂರಿನ ಇಸ್ರೋ ಸೆಂಟರ್‌ಗೆ ಪ್ರಧಾನಿ ಮೋದಿ ಆಗಮನ

​ಚಂದ್ರಯಾನ-3 ಯಶಸ್ವಿ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ನಾಳೆ ಬೆಳಗ್ಗೆ 6 ಗಂಟೆಗೆ HAL ಏರ್‌ಪೋರ್ಟ್‌ಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ, 6.30ಕ್ಕೆ ಏರ್‌ಪೋರ್ಟ್‌ನಿಂದ ನಿರ್ಗಮಿಸಲಿದ್ದಾರೆ. HAL ಏರ್‌ಪೋರ್ಟ್‌ನಿಂದ ಓಲ್ಡ್‌ ಮದ್ರಾಸ್‌ ರೋಡ್ ಮಾರ್ಗವಾಗಿ ಟ್ರಿನಿಟಿ ಸರ್ಕಲ್‌ ತಲುಪಲಿದ್ದಾರೆ.

ಅಲ್ಲಿಂದ ಎಂ.ಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್, ಬಳ್ಳಾರಿ ರಸ್ತೆ, ಕಾವೇರಿ ಜಂಕ್ಷನ್, ಸ್ಯಾಂಕಿ ಟ್ಯಾಂಕ್ ರಸ್ತೆಯ ಮಾರ್ಗವಾಗಿ ಯಶವಂತಪುರ ತಲುಪಲಿದ್ದಾರೆ. ಅಲ್ಲಿಂದ ತುಮಕೂರು ರಸ್ತೆಯ ಮಾರ್ಗವಾಗಿ ಗೊರಗೊಂಟೆ ಪಾಳ್ಯ, ಜಾಲಹಳ್ಳಿ ಕ್ರಾಸ್ ಮಾರ್ಗವಾಗಿ ಪೀಣ್ಯ ಇಸ್ರೋಗೆ ತಲುಪಲಿದ್ದಾರೆ.

ಇದನ್ನೂ ಓದಿ: ನಾಳೆ ಬೆಂಗಳೂರಿನ ಇಸ್ರೋ ಸೆಂಟರ್‌ಗೆ ಪ್ರಧಾನಿ ಮೋದಿ: ರೂಟ್ ಮ್ಯಾಪ್ ಹೀಗಿದೆ

ರೋಡ್‌ ಶೋ ಇಲ್ಲದಿದ್ದರೂ ಹೆಚ್‌ಎಎಲ್ ಏರ್‌ಪೋರ್ಟ್ ಮತ್ತು ಜಾಲಹಳ್ಳಿ ಕ್ರಾಸ್‌ನಲ್ಲಿ ಮೋದಿ ಸ್ವಾಗತಿಸಲು ರಾಜ್ಯ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಏರ್‌ಪೋರ್ಟ್‌ನಲ್ಲಿ 4ರಿಂದ 5 ಸಾವಿರ ಕಾರ್ಯಕರ್ತರನ್ನ ಸೇರಿಸಿ ಸ್ವಾಗತಿಸಲು ಪ್ಲ್ಯಾನ್ ಮಾಡಲಾಗಿದೆ. ಏರ್‌ಪೋರ್ಟ್‌ನ ಹೊರಗೆ ಸಣ್ಣ ವೇದಿಕೆ ನಿರ್ಮಾಣ ಮಾಡಲಾಗಿದ್ದು, 2 ರಿಂದ 3 ನಿಮಿಷ ಮೋದಿ ಭಾಷಣ ಮಾಡುವ ನಿರೀಕ್ಷೆಯನ್ನ ಬಿಜೆಪಿಗರು ಇಟ್ಟುಕೊಂಡಿದ್ದಾರೆ.

ಇದಾದ ಬಳಿಕ ಜಾಲಹಳ್ಳಿ ಕ್ರಾಸ್‌ನಲ್ಲಿ ಎರಡನೇ ಬಾರಿಗೆ ಸ್ವಾಗತಕ್ಕೆ ಬಿಜೆಪಿ ಪ್ಲ್ಯಾನ್ ಮಾಡಿದ್ದು, 350 ಮೀಟರ್ ಕಾರ್ಯಕರ್ತರನ್ನ ನಿಲ್ಲಿಸಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಜಾಲಹಳ್ಳಿ ಕ್ರಾಸ್‌ನಲ್ಲಿ ಕಾರಿನಿಂದಲೇ ಮೋದಿ ಕಾರ್ಯಕರ್ತರತ್ತ ಕೈ ಬೀಸೋ ನಿರೀಕ್ಷೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:49 pm, Fri, 25 August 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ