ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಶಾಲೆಯ ಸಮಯ ಬದಲಾವಣೆ; ಖಾಸಗಿ, ಸರ್ಕಾರಿ ಶಾಲೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಲಿದೆ ಸರ್ಕಾರ

Change in Bengaluru school timings to fix traffic; ನಗರದಲ್ಲಿ ಇರುವ ಶಾಲೆಗಳು ಕಾರ್ಯನಿರ್ವಹಿಸುವ ಈಗಿನ ಸಮಯವು ಸಾಮಾನ್ಯವಾಗಿ ಬೆಳಿಗ್ಗೆ 8:45 / 9 ರಿಂದ ಸಂಜೆ 3:30 / 4 ನಡುವೆ ಇದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ನಗರದಲ್ಲಿ ಒಂದು ಗಂಟೆ ಮುಂಚಿತವಾಗಿ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಶಾಲೆಯ ಸಮಯ ಬದಲಾವಣೆ; ಖಾಸಗಿ, ಸರ್ಕಾರಿ ಶಾಲೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಲಿದೆ ಸರ್ಕಾರ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Sep 21, 2023 | 2:42 PM

ಬೆಂಗಳೂರು, ಸೆಪ್ಟೆಂಬರ್ 21: ಹೆಚ್ಚುತ್ತಿರುವ ಸಂಚಾರ ದಟ್ಟಣೆ ಸಮಸ್ಯೆ (traffic problems) ನಿವಾರಣೆಗಾಗಿ ಬೆಂಗಳೂರನಲ್ಲಿ ಇರುವ ಶಾಲೆಗಳ ಸಮಯವನ್ನು ಪರಿಷ್ಕರಣೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಶಿಕ್ಷಣ ಇಲಾಖೆಗೆ (Education dept) ಸಲಹೆ ನೀಡಿತ್ತು. ಈ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಖಾಸಗಿ ಶಾಲಾ ನಿರ್ವಹಣಾ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ಶಾಲೆಗಳು ಮತ್ತು ಕೈಗಾರಿಕಾ ಘಟಕಗಳು, ಕಾರ್ಖಾನೆಗಳು, ಕಮರ್ಷಿಯಲ್ ಹೌಸಸ್ ಮತ್ತು ಕಂಪನಿಗಳ ಸಮಯವನ್ನು ಬದಲಾಯಿಸಲು ಸರ್ಕಾರಕ್ಕೆ ಸಲಹೆ ನೀಡಿತ್ತು.

ನಗರದಲ್ಲಿ ಇರುವ ಶಾಲೆಗಳು ಕಾರ್ಯನಿರ್ವಹಿಸುವ ಈಗಿನ ಸಮಯವು ಸಾಮಾನ್ಯವಾಗಿ ಬೆಳಿಗ್ಗೆ 8:45 / 9 ರಿಂದ ಸಂಜೆ 3:30 / 4 ನಡುವೆ ಇದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ನಗರದಲ್ಲಿ ಒಂದು ಗಂಟೆ ಮುಂಚಿತವಾಗಿ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಶಾಲೆಗಳನ್ನು ಒಂದು ಗಂಟೆ ಮುಂಚಿತವಾಗಿ ಅಥವಾ ತಡವಾಗಿ ಪ್ರಾರಂಭಿಸಲು ಸಲಹೆಗಳನ್ನು ಮೊದಲೇ ನೀಡಲಾಗಿತ್ತು. ಆದರೆ ಈ ಸಲಹೆಗಳನ್ನು ಪೋಷಕರು ಮತ್ತು ಖಾಸಗಿ ಶಾಲಾ ನಿರ್ವಾಹಕರು ವಿವಿಧ ಕಾರಣಗಳಿಂದ ವಿರೋಧಿಸಿದ್ದರು.

ಶಾಲೆಗಳನ್ನು ಬೇಗ ಪ್ರಾರಂಭಿಸುವುದರಿಂದ ಆಗಬಹುದಾದ ಅನಾನುಕೂಲಗಳೇನು?

ಮಕ್ಕಳು ಬೇಗನೆ ಏಳಬೇಕಾಗಲಿದೆ. ಇದು ಪೋಷಕರನ್ನು ತಮ್ಮ ಮಕ್ಕಳನ್ನು ಶಾಲೆಗೆ ಸಿದ್ಧಪಡಿಸಲು ತಮ್ಮ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಒತ್ತಾಯಿಸುತ್ತದೆ. ಶಾಲೆಗಳನ್ನು ಬೇಗ ಪ್ರಾರಂಭಿಸಿದರೆ ಮಕ್ಕಳು ಕ್ರೀಡೆ ಮತ್ತು ಇತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳಬಹುದು. ಮಲಗುವ ಕ್ರಮದಲ್ಲಿನ ಬದಲಾವಣೆಯಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳಾಗಬಹುದು ಎಂದು ಅಂದಾಜಿಸಲಾಗಿದೆ.

ರಾಜ್ಯದಲ್ಲಿ 72,824 ಸರ್ಕಾರಿ ಶಾಲೆಗಳು ಮತ್ತು 17,381 ಖಾಸಗಿ ಶಾಲೆಗಳಿವೆ. ವರದಿಗಳ ಪ್ರಕಾರ ರಾಜ್ಯದಲ್ಲಿ 1.04 ಕೋಟಿಗೂ ಹೆಚ್ಚು ಶಾಲೆಗೆ ಹೋಗುವ ವಿದ್ಯಾರ್ಥಿಗಳು ಇದ್ದಾರೆ.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಶಾಲಾ ಸಮಯ ಬದಲಾವಣೆ: ಖಾಸಗಿ ಶಾಲೆಗಳ ಒಕ್ಕೂಟ, ಪೋಷಕರ ವಿರೋಧ

ಹೈಕೋರ್ಟ್​ ಸೂಚನೆಯ ಕಾರಣ ಶಾಲೆ, ಕಾರ್ಖಾನೆಗಳ ಸಮಯ ಬದಲಾವಣೆ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಆದರೆ, ಇದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆಲವು ದಿನಗಳ ಹಿಂದಷ್ಟೇ ವರದಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Thu, 21 September 23

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ