AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ; ತನಿಖೆ ನಡೆಸುವಂತೆ ಸಿಎಂ ಸೂಚನೆ

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ, ಹಣಕಾಸು ಅವ್ಯವಹಾರ ಹಾಗೂ ಅಕ್ರಮ ಬಡ್ತಿ ಬಗ್ಗೆಯೂ ತನಿಖೆ ನಡೆಸಲು ಸಿಎಸ್‌ಗೆ ಹೇಳಿದ್ದು, 15 ದಿನಗಳಲ್ಲಿ ವರದಿ ಸಲ್ಲಿಸುವಂತೆಯೂ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ; ತನಿಖೆ ನಡೆಸುವಂತೆ ಸಿಎಂ ಸೂಚನೆ
ನೆಫ್ರೋ ಯುರಾಲಜಿ ಸಂಸ್ಥೆ, ಸಿದ್ದರಾಮಯ್ಯ
ಪ್ರಮೋದ್​ ಶಾಸ್ತ್ರಿ ಜಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 12, 2023 | 8:14 PM

Share

ಬೆಂಗಳೂರು, ಸೆ.12: ನಗರದ ವಿಕ್ಟೋರಿಯಾ ಆಸ್ಪತ್ರೆ (Victoria Hospital) ಆವರಣದಲ್ಲಿರುವ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ 5 ರೋಗಿಗಳು ಕೋಮಾಗೆ ಹೋಗಿದ್ದರು. ಈ ಮಾಹಿತಿಯನ್ನು ನೆಫ್ರೋ ಯುರಾಲಜಿ ಸಂಸ್ಥೆಯ ಪ್ರಭಾರಿ ನಿರ್ದೇಶಕ ಡಾ.ಕೇಶವ ಮೂರ್ತಿ ಮುಚ್ಚಿಟ್ಟಿದ್ದರು. ಈ ಬಗ್ಗೆ ಡಾ.ಶಂಕರ್ ಗುಹಾ ಹಾಗೂ ಮಾಜಿ ಎಂಎಲ್‌ಸಿ ಪಿ.ಆರ್ ರಮೇಶ್‌ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ಇದೀಗ ಡಾ.ಕೇಶವ ಮೂರ್ತಿ ವಿರುದ್ಧ ತನಿಖೆ ನಡೆಸುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ, ಹಣಕಾಸು ಅವ್ಯವಹಾರ ಹಾಗೂ ಅಕ್ರಮ ಬಡ್ತಿ ಬಗ್ಗೆಯೂ ತನಿಖೆ ನಡೆಸಲು ಸಿಎಸ್‌ಗೆ ಹೇಳಿದ್ದು, 15 ದಿನಗಳಲ್ಲಿ ವರದಿ ಸಲ್ಲಿಸುವಂತೆಯೂ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದರ ಜೊತೆಗೆ ಕೂಡಲೇ ನೆಫ್ರೋ ಯುರಾಲಜಿ ಸಂಸ್ಥೆಗೆ ಮುಖ್ಯ ಆಡಳಿತಾಧಿಕಾರಿ ನೇಮಿಸುವಂತೆಯೂ ಸಿಎಂ ಆದೇಶಿಸಿದ್ದಾರೆ.

ಇದನ್ನೂ ಓದಿ:ಚಲಿಸುತ್ತಿದ್ದ ನಿಜಾಮುದ್ದೀನ್ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಜ್ಞೆ ತಪ್ಪಿದ ಪ್ರಯಾಣಿಕರು, ನಾಲ್ವರಿಗೆ ಬಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

ಸಂಸ್ಥೆಯಲ್ಲಿ ಆಪರೇಷನ್ ಮಾಡಿಸಿಕೊಂಡಿದ್ದ ರೋಗಿಗಳ ಪೈಕಿ ನಾಲ್ವರ ಸಾವು, ಐದು ಜನರ ಸ್ಥಿತಿ ಗಂಭೀರ

ಇನ್ನು ಈ ಸಂಸ್ಥೆಯಲ್ಲಿ ಆಪರೇಷನ್ ಮಾಡಿಸಿಕೊಂಡಿದ್ದ ರೋಗಿಗಳ ಪೈಕಿ ನಾಲ್ವರು ಈಗಾಗಲೇ ಸಾವನ್ನಪ್ಪಿದ್ದು, ಐವರು ರೋಗಿಗಳು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಮತ್ತು ಕಳೆದ 11 ತಿಂಗಳಿಂದ ರಾಮನಗರ ಮೂಲದ ರಂಜಿತ್‌ರಾಜ್ ಎಂಬುವವರು ಕೋಮಾದಲ್ಲಿದ್ದಾರೆ. ಈ ಬಗ್ಗೆ ಹಿರಿಯ ವೈದ್ಯಾಧಿಕಾರಿಗಳಿಗೆ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಿರಲಿಲ್ಲ. ವೈದ್ಯರ ನಿರ್ಲಕ್ಷ್ಯದ ಬಗ್ಗೆ ಡಾ.ಕೇಶವಮೂರ್ತಿ.ಆರ್‌ ಮಾಹಿತಿ ಮುಚ್ಚಿಟ್ಟ ಆರೋಪ ಇದೀಗ ಅವರ ಹುದ್ದೆಯನ್ನು ಕಳದುಕೊಳ್ಳುವ ಸ್ಥಿತಿಗೆ ಬಂದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!